‘ಮೈ ಲಾರ್ಡ್’ ಎನ್ನುವುದನ್ನು ನಿಲ್ಲಿಸಿ, ನನ್ನ ಅರ್ಧ ಸಂಬಳ ನಿಮಗೆ ಕೊಡುತ್ತೇನೆ: ಸುಪ್ರೀಂ ಜಡ್ಜ್‌

Date:

Advertisements

‘ನನ್ನ ಸ್ವಾಮಿ’ (ಮೈ ಲಾರ್ಡ್‌) ಎಂದು ಹೇಳುವುದನ್ನು ನಿಲ್ಲಿಸಿ, ನನ್ನ ಅರ್ಧದಷ್ಟು ಸಂಬಳವನ್ನು ನಿಮಗೆ ಕೊಡುತ್ತೇನೆ ಎಂದು ವಕೀಲರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿರುವ ಪ್ರಸಂಗ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಕೋರ್ಟ್‌ ಕಲಾಪಗಳ ವೇಳೆ ವಕೀಲರು ಪದೇ ಪದೇ ‘ಮೈ ಲಾರ್ಡ್‌’ ಮತ್ತು ‘ಯುವರ್ ಲಾರ್ಡ್‌ಶಿಪ್ಸ್‌’ ಎಂದು ಸಂಬೋಧಿಸುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಮೈ ಲಾರ್ಡ್’ ಎಂದು ಎಷ್ಟು ಬಾರಿ ಹೇಳುತ್ತೀರಿ? ನೀವು ಇದನ್ನು ಹೇಳುವುದನ್ನು ನಿಲ್ಲಿಸಿದರೆ, ನನ್ನ ಸಂಬಳದಲ್ಲಿ ಅರ್ಧದಷ್ಟು ನಿಮಗೆ ನೀಡುತ್ತೇನೆ ಎಂದು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಅವರು ವಕೀಲರಿಗೆ ಹೇಳಿದ್ದಾರೆ.

“ವಕೀಲರು, ವಾದ ಮಂಡಿಸುವ ಸಮಯದಲ್ಲಿ ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಅಥವಾ ‘ಯುವರ್ ಲಾರ್ಡ್‌ಶಿಪ್’ ಎಂದು ಕರೆಯುತ್ತಾರೆ. ಇದು ವಸಾಹತುಶಾಹಿ ಯುಗದ ಗುಲಾಮಗಿರಿಯ ಸಂಕೇತವಾಗಿದೆ” ಎಂದು ಅವರು ಹೇಳಿದ್ದಾರೆ.

Advertisements

“‘ಮೈ ಲಾರ್ಡ್‌ ಎಂದು ಕರೆಯುವುದರ ಬದಲು ‘ಸರ್’ ಎಂದು ಏಕೆ ಬಳಸಬಾರದು” ಎಂದು ನ್ಯಾಯಮೂರ್ತಿ ನರಸಿಂಹ ಹೇಳಿದ್ದಾರೆ.

2006ರಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾವು ಯಾವುದೇ ವಕೀಲರು ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಮತ್ತು ‘ಯುವರ್ ಲಾರ್ಡ್‌ಶಿಪ್’ ಎಂದು ಸಂಬೋಧಿಸಬಾರದು ಎಂದು ನಿರ್ಣಯವನ್ನು ಅಂಗೀಕರಿಸಿತ್ತು. ಆದರೂ, ಈ ಎರಡು ಪದಗಳ ಬಳಕೆ ಇಂದಿಗೂ ಮುಂದುವರೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ಪ್ರಕರಣ; ಮರ್ಯಾದೆ ಹತ್ಯೆ, ಸಾಮೂಹಿಕ ಕೃತ್ಯದ ಶಂಕೆ ವ್ಯಕ್ತಪಡಿಸಿದ ದಲಿತ ಸಂಘಟನೆಗಳು

ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ...

Download Eedina App Android / iOS

X