ಧಾರವಾಡ | ರಾತ್ರೋರಾತ್ರಿ ಜೆಸಿಬಿಯಿಂದ ಮನೆ ಧ್ವಂಸ; ಆರೋಪಿ ವಿರುದ್ಧ ಪ್ರಕರಣ ದಾಖಲು

Date:

Advertisements

ಧಾರವಾಡ ನಗರದ 19ನೇ ವಾರ್ಡ್‌ನ ಹನುಮಂತ ನಗರ ಬಡಾವಣೆಯಲ್ಲಿ ದುಷ್ಕರ್ಮಿಯೊಬ್ಬ ರಾತ್ರೋರಾತ್ರಿ ಮನೆಯನ್ನು ಜೆಸಿಬಿಯಿಂದ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

2001ರಲ್ಲಿ ಹನುಮಂತ ನಗರ ಬಡಾವಣೆಯಲ್ಲಿ ಡಾ. ಸತೀಶ್​ ಶೆಟ್ಟಿ ಎಂಬುವರ ತಂದೆ 6 ಗುಂಟೆ ಜಾಗವನ್ನು ಖರೀದಿಸಿದ್ದರು. ಅಲ್ಲಿಯೇ ಡಾ. ಸತೀಶ್​ ಚಿಕ್ಕದೊಂದು ಮನೆಯನ್ನು ಕಟ್ಟಿದ್ದರು. ಆ ಮನೆಯಲ್ಲಿ ಸತೀಶ್​ ಅವರಿಗೆ ಪರಿಚಯವಿದ್ದ ವ್ಯಕ್ತಿಯೊಬ್ಬ ವಾಸವಾಗಿದ್ದ.

ಇತ್ತೀಚಿಗೆ ಫಕ್ಕೀರಪ್ಪ ಮನಿಗೇನಿ ಎನ್ನುವ ವ್ಯಕ್ತಿ ಆಗಾಗ ಬಂದು ಸ್ಥಳೀಯ ಬಡಾವಣೆ ಜನರಿಗೆ, ಇದು ನನ್ನ ಜಮೀನು ಎಂದು ಕ್ಯಾತೆ ತೆಗೆಯಲು ಆರಂಭಿಸಿದ್ದ. ಇದೇ ಫಕ್ಕಿರಪ್ಪ ಮನಿಗೇನಿ ಬುಧವಾರ ರಾತ್ರಿ ಏಕಾಏಕಿ ಡಾ. ಸತೀಶ್​ ಅವರ ಮನೆಯನ್ನು ಜೆಸಿಬಿಯಿಂದ ಕೆಡವಿ ಹಾಕಿದ್ದಾನೆ. ಅದೃಷ್ಟವಶಾತ್ ಘಟನೆ ನಡೆದಾಗ ಆ ಮನೆಯಲ್ಲಿ ಯಾರೂ ಇರಲಿಲ್ಲ.

Advertisements

ಇನ್ನು ಘಟನೆ ನಡೆದ ಕೂಡಲೇ ಸ್ಥಳೀಯರು ಜೆಸಿಬಿ ವಾಹನ ಚಾಲಕನನ್ನು ವಶಕ್ಕೆ ಪಡೆದು ಜೆಸಿಬಿಯ ಎಲ್ಲ ಟೈಯರ್‌ಗಳ ಗಾಳಿ ತೆಗೆದಿದ್ದಾರೆ. ಕಳೆದ ಕೆಲ ದಿನಗಳಿಂದ ಜೆಸಿಬಿ ಮೂಲಕ ಇಲ್ಲಿ ಕೆಲಸ ಮಾಡಿಸುತ್ತಿರುವ ಫಕ್ಕೀರಪ್ಪ, ಈ ಬಡಾವಣೆಯ ಜಾಗ ತನ್ನದು ಎಂದು ಇಲ್ಲಿನ ಕೆಲವು ಮನೆಗಳ ಕಂಪೌಂಡ್ ಕೂಡ ಒಡೆದು ಹಾಕಿದ್ದಾನೆ, ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ ಆರೋಪಿ, ಚರಂಡಿ ಹಾಗೂ ಕುಡಿಯುವ ನೀರಿನ ಪೈಪುಗಳನ್ನು ಕೂಡ ಕತ್ತರಿಸಿದ್ದಾನಂತೆ. ಇನ್ನು ವಿದ್ಯುತ್ ಕಂಬಗಳ ಸುತ್ತಲಿನ ಮಣ್ಣನ್ನು ತೆಗೆದ ಕಾರಣ, ಅವು ಬೀಳುವ ಸ್ಥಿತಿಗೆ ಬಂದಿವೆ.

ಇಂತಹ ವ್ಯಕ್ತಿಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಡಾ. ಸತೀಶ್​ ಶೆಟ್ಟಿ ಮತ್ತು ಸ್ಥಳೀಯರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಫಕ್ಕೀರಪ್ಪನ ಮೇಲೆ ವಿದ್ಯಾಗಿರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಹಾಗೂ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೂ ಈ ಬಗ್ಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ.

ಮನೆಯಲ್ಲಿ ಮಹಿಳೆಯರಷ್ಟೇ ಇರುವಾಗ, ಬಂದು ಬೆದರಿಕೆ ಹಾಕುತ್ತಾರೆ. ಇವರ ಕಿರುಕುಳದಿಂದ ನಮಗೆ ಆತಂಕವಾಗಿದೆ. ಇವರಿಗೆಲ್ಲ ಕಾನೂನು ಅನ್ನೋದೇ ಇಲ್ಲದಂತಾಗಿದೆ. ಇಪ್ಪತ್ತು-ಮೂವತ್ತು ವರ್ಷಗಳಿಂದ ಮನೆ ಕಟ್ಟಿಕೊಂಡು ಇರೋರಿಗೆಲ್ಲ ಇದೀಗ ಕಿರುಕುಳ, ಬೆದರಿಕೆ ಶುರುವಾಗಿವೆ. ಈ ರೀತಿ ರಾತ್ರೋರಾತ್ರಿ ಬಂದು ಜೆಸಿಬಿಯಿಂದ ಮನೆ ಬೀಳಿಸೋದು ಅಂದರೆ ನಮ್ಮಂಥವರು ಎಲ್ಲಿಗೆ ಹೋಗಬೇಕು. ಕೂಡಲೇ ಇಂಥವರ ಮೇಲೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X