ಚಿತ್ರದುರ್ಗ | ಗಣಪತಿ ಕಾಲ್ಪನಿಕ ದೇವರು, ಪೂಜೆ-ಪ್ರಾರ್ಥನೆ ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ

Date:

Advertisements

ಕಾರ್ಯಕ್ರಮಗಳಲ್ಲಿ, ಮನೆಗಳಲ್ಲಿ ಗಣಪತಿಯನ್ನು ಪೂಜಿಸುವುದು ಮೌಢ್ಯದ ಆಚರಣೆಯಾಗಿದೆ. ವಿಘ್ನ ನಿವಾರಕನೆಂದು ಗಣಪತಿಗೆ ಪಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಗಣಪತಿಯನ್ನು ಸ್ತುತಿಸುವುದು ಮೌಢ್ಯದ ಆಚರಣೆಯಾಗಿದೆ. ಅದರ ಬದಲು ವಾಸ್ತವ ಅಂಶಗಳನ್ನು ಒಳಗೊಂಡಿರುವ, ವಾಸ್ತವವನ್ನು ತಿಳಿಸುವ ವಚನಗಳನ್ನು ಹೇಳಬೇಕು” ಎಂದರು.

“ಗಣಪತಿ ಕಾಲ್ಪನಿಕ ದೇವರು. ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿ ಜನರನ್ನು ಒಗ್ಗೂಡಿಸಲು ಹುಟ್ಟುಹಾಕಿದ ದೇವರು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ” ಎಂದು ತಿಳಿಸಿದರು.

Advertisements

“ಗಣಪತಿ ಪೂಜೆ ಅಥವಾ ಶ್ಲೋಕ ಹೇಳುವ ಬದಲು ವಚನಗಳನ್ನು ಪಠಿಸಬೇಕು. ವಚನಗಳನ್ನು ಪ್ರಸ್ತುತಪಡಿಸುವುದು ನಿಜವಾದ ಪ್ರಾರ್ಥನೆಯಾಗಿದೆ. ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನೂ ಹಾಡಬಹುದು” ಎಂದು ಹೇಳಿದರು.

“ಶರಣರ ಪ್ರಕಾರ ಸ್ವಸಾಮರ್ಥ್ಯ, ಉತ್ತಮ ನಡವಳಿಕೆ ಉಳ್ಳವರೇ ದೇವರು. ನಮ್ಮನ್ನು ನಾವು ನಂಬಬೇಕು” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X