ಅಮಾಯಕ ಕಂದಮ್ಮಗಳು ಸಾಯುತ್ತಿವೆ, ಜಗತ್ತು ಮೌನವಾಗಿದೆ: ಕ್ರಿಕೆಟಿಗ ಇರ್ಫಾನ್ ಪಠಾಣ್ ನೋವಿನ ನುಡಿ

Date:

Advertisements

ಇಸ್ರೇಲ್ – ಹಮಾಸ್ ಹೋರಾಟಗಾರರ ಯುದ್ಧದಲ್ಲಿ ಅಮಾಯಕರು ಮೃತಪಡುತ್ತಿದ್ದಾರೆ. ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪ್ರಪಂಚದಾದ್ಯಂತದ ಕೆಲವು ಕ್ರೀಡಾಪಟುಗಳು ಈ ಇಸ್ರೇಲ್‌, ಗಾಝಾ ಪಟ್ಟಣದಲ್ಲಿ ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ನಡುವೆ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಕೂಡ ಗಾಝಾ ದುರಂತದಲ್ಲಿ ದಿನನಿತ್ಯವು ಅಮಾಯಕರು ಮೃತಪಡುತ್ತಿರುವ ಬಗ್ಗೆ ನೋವನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಇರ್ಫಾನ್ ಪಠಾಣ್ ಅವರು, ‘ಗಾಝಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳ ಹತ್ಯೆಯಾಗುತ್ತಿದೆ. ಇಷ್ಟೆಲ್ಲಾ ಆದರೂ ಜಗತ್ತು ಮೌನವಾಗಿದೆ. ಒಬ್ಬ ಕ್ರೀಡಾಪಟುವಾಗಿ ನನಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸಲು ಮಾತ್ರ ಸಾಧ್ಯ. ಆದರೆ ವಿಶ್ವ ನಾಯಕರು ಒಂದಾಗಲು ಮತ್ತು ಈ ಪ್ರಜ್ಞಾಶೂನ್ಯ ಹತ್ಯೆಯನ್ನು ಕೊನೆಗೊಳಿಸಲು ಇದು ಉತ್ತಮ ಸಮಯ. ಗಾಝಾದಲ್ಲಿ ಮಕ್ಕಳ ಹತ್ಯೆಯನ್ನು ನಿಲ್ಲಿಸಿ” ಎಂದು ವಿಶ್ವಸಂಸ್ಥೆಗೆ ಟ್ಯಾಗ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಕಾಂಗ್ರೆಸ್‌ಗೆ ಬೆಂಬಲ ಎಂದ ವೈ ಎಸ್ ಶರ್ಮಿಳಾ

Advertisements

ಇತ್ತೀಚಿಗೆ ಇಸ್ರೇಲ್ ಗಾಝಾದ ಉತ್ತರದಲ್ಲಿರುವ ನಿರಾಶ್ರಿತರ ಶಿಬಿರವನ್ನು ನಾಶ ಮಾಡಿದೆ. ಹಮಾಸ್ ಇರುವ ಭೂಪ್ರದೇಶದಲ್ಲಿ ನೂರಾರು ಪ್ಯಾಲೇಸ್ತೀನ್‌ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಹಾಗೂ ಸಾವಿರಾರು ಮಂದಿ ಗಾಯಗೊಂಡಿದ್ದಾರೆ.

ಇಸ್ರೇಲ್‌ ನಡೆಸುತ್ತಿರುವ ದಿನನಿತ್ಯದ ವೈಮಾನಿಕ ದಾಳಿಯಿಂದ ಪ್ಯಾಲಿಸ್ತೀನಿ ಸೇನೆಯ ಜೊತೆ ಸಾವಿರಾರು ಅಮಾಯಕರು ಹತರಾಗಿದ್ದಾರೆ. ಇತ್ತೀಚಿನ ವರದಿಗಳಂತೆ 10 ಸಾವಿಕ್ಕೂ ಹೆಚ್ಚು ಮಂದಿ ನಾಗರಿಕರು ಮೃತಪಟ್ಟಿದ್ದಾರೆ. ಅಸುನೀಗಿದವರಲ್ಲಿ ಬಹುತೇಕರು ಮಕ್ಕಳು, ಮಹಿಳೆಯರೆ ಇದ್ದಾರೆ. ಅಮೆರಿಕ ಸೇರಿದಂತೆ ಯೂರೋಪಿನ ಕೆಲವು ರಾಷ್ಟ್ರಗಳು ಇಸ್ರೇಲ್‌ ನಡೆಸುತ್ತಿರುವ ನರಹತ್ಯೆಗೆ ನೇರವಾಗಿ ಬೆಂಬಲ ನೀಡುತ್ತಿರುವುದು ಬಹುತೇಕರಲ್ಲಿ ಬೇಸರ ತಂದಿದೆ.

ಸ್ವತಃ ವಿಶ್ವಸಂಸ್ಥೆ ಕದನ ವಿರಾಮಕ್ಕೆ ಮನವಿ ಮಾಡಿಕೊಂಡರೂ ರಕ್ತ ಪಿಪಾಸು ಇಸ್ರೇಲ್ ಒಪ್ಪುತ್ತಿಲ್ಲ. ಮಸೀದಿ, ಚರ್ಚ್‌ಗಳ ಜೊತೆಗೆ ನಿರಾಶ್ರಿತರ ಶಿಬಿರಗಳ ಮೇಲೆ ನಿತ್ಯವೂ ದಾಳಿಗಳು ನಡೆಯುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X