ತುಮಕೂರು | ರೈಲ್ವೆ ಖಾಸಗೀಕರಣಕ್ಕೆ ಸಿಐಟಿಯು ವಿರೋಧ – ಪ್ರತಿಭಟನೆ

Date:

Advertisements

ಜನತೆ ಹಣದಲ್ಲಿ ಕಟ್ಟಿರುವ ಜನರ ರೈಲನ್ನು ಖಾಸಗೀಕರಿಸುವ ನಡೆ ದೇಶ ವಿರೋಧಿಯಾಗಿದೆ. 7-8 ದಶಕಗಳ ಕಾಲ ಜನತೆಯು ಕಟ್ಟಿದ ಸಾರ್ವಜನಿಕ ಉದ್ದಿಮೆಗಳನ್ನು ಮಾರುತ್ತಿರುವ ಬಿಜೆಪಿ ಸರ್ಕಾರವು ದೇಶದ ಲೂಟಿ ಮಾಡುತ್ತಿದೆ ಎಂದು ಸಿಐಟಿಯು ತುಮಕೂರು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಹೇಳಿದರು.

ರೈಲ್ವೆ ಖಾಸಗೀಕರಣದ ವಿರುದ್ಧ ತುಮಕೂರಿನಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಮುಜೀದ್, “70 ವರ್ಷಗಳಲ್ಲಿ ಕಟ್ಟಲಾಗಿರುವ ದೇಶದ ವಿವಿಧ ಅಸ್ತಿಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ. ಇದು ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸುವ ನಡೆಯಾಗಿದೆ” ಎಂದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷೆ ಎಸ್.ಡಿ ಪಾರ್ವತಮ್ಮ ಮಾತನಾಡಿ,  “ರೈಲ್ವೆಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರ ಮಾಡಿ, ಟಿಕೆಟ್ ದರವನ್ನು ಶೇ.43ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧಾರ ಮಾಡಿದೆ. ತನ್ನ ನಿರ್ಧಾರವನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

Advertisements

ಪ್ರತಿಭಟನೆಯಲ್ಲಿ ರಂಗಧಾಮಯ್ಯ, ಬಿ. ಉಮೇಶ್, ರಪೀಕ್ ಪಾಷ, ಎನ್.ಕೆ.ಸುಬ್ರಮಣ್ಯ, ಕಲೀಲ್, ವೆಂಕಟೇಶ್, ಬೀದಿಬದಿ ವ್ಯಾಪಾರಿಗಳ ಸಂಘದ ರಾಜಶೇಖರ್, ಜಗದೀಶ್. ಮುತ್ತುರಾಜ್, ವಸೀಂ ಅಕ್ರಂ , ಅಟೋ ಚಾಲಕರ ಯೂನಿಯನ್ ನ ಇಂತೀಯಾಜ್ ಪಾಷ, ಹಮಾಲಿ ಕಾರ್ಮಿಕ ಸಂಘ ರಾಮಾಂಜೀನಿ, ಆಂಗನವಾಡಿ ನೌಕರರ ಸಂಘದ ಶಿವಗಂಗಮ್ಮ, ಗೌರಮ್ಮ, ಜಬೀನಾ ಖಾತೋನ್,ಲಕ್ಮಿಕಾಂತ , ಸಮುದಾಯದ ಅಧಕ್ಷ ಅಶ್ವಥ್, ಪಿ.ಎಫ್. ಪಿಂಚಣಿದಾರರು ಬಾಲಕೃಷ್ಣ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X