ರಾಯಚೂರು | ಮುದಗಲ್‌ನ ಹಮಾಲಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಕ್ರಮ; ಎಸಿ ಭರವಸೆ

Date:

Advertisements

ಮುದಗಲ್‌ನ ಹಮಾಲಿ ಕಾರ್ಮಿಕರ ಕೂಲಿ ದರ ಸಮಸ್ಯೆಯನ್ನು ಪರಿಹರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಲಿಂಗಸುಗೂರು ಸಹಾಯಕ ಆಯುಕ್ತ (ಎಸಿ) ಭರವಸೆ ನೀಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಸಿಐಟಿಯು ಮುಖಂಡರೊಂದಿಗೆ ಅವರು ಸಭೆ ನಡೆಸಿದ್ದಾರೆ. ಸಭೆಗೆ ಹಾಜರಾಗುವಂತೆ ಕೂಲಿ ದರ ಹೆಚ್ಚಿಸಲು ನಿರಾಕರಿಸಿದ್ದ ಮುದಗಲ್‌ನ ಟ್ರೇಡರ್ಸ್ ಮಾಲೀಕರಿಗೆ ಹಾಗೂ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಅವರಿಗೆ ನೋಟೀಸ್ ನೀಡಿದ್ದರೂ, ಮಾಲೀಕರು ಸಭೆಗೆ ಹಾಜರಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, ಸ್ಥಳೀಯ ಪೊಲೀಸ್ ಠಾಣೆಪಿ ಎಸ್ಐ, ಕಾರ್ಮಿಕ ನಿರೀಕ್ಷಕರು, ತಹಶೀಲ್ದಾರರು ಕರೆದಿದ್ದ ಸಂಧಾನ ಸಭೆಗೂ ಅವರಾರು ಬಂದಿರಲಿಲ್ಲ. ಎಲ್ಲ ಟ್ರೇಡರ್ಸ್‌ ಮಾಲೀಕರನ್ನು ಮದಿನಾ ಟ್ರೇಡರ್ಸ್‌ ಮಾಲೀಕ ಟಿಪ್ಪು ಸಾಬ್‌ ನಿಯಂತ್ರಿಸುತ್ತಿದ್ದಾರೆ. ಆತನ ಅಣತಿಯಂತೆ ಉಳಿದವರು ವರ್ತಿಸುತ್ತಿದ್ದಾರೆ. ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಟ್ರೇಡರ್ಸ್‌ಗಳ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಸಿಐಟಿಯು ಮುಖಂಡರು ಆಗ್ರಹಿಸಿದರು.

Advertisements

“ಅಂಗಡಿ ಮಾಲೀಕರೊಂದಿಗೆ ಶಾಮೀಲಾಗಿ, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಶಂಶಾಲಮ್, “ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಹಮಾಲಿ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ತಿಪ್ಪಯ್ಯ, ಜಿಲ್ಲಾಧ್ಯಕ್ಷ ಯಂಕಪ್ಪ ಕೆಂಗಲ್, ಕಾರ್ಯದರ್ಶಿ ಮರಿಸ್ವಾಮಿ, ಕೆಪಿಆರ್ ಎಸ್ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ್, ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಸಿಐಟಿಯು ಮುಖಂಡರಾದ ಹನೀಫ್, ಫಕ್ರುದ್ದೀನ್, ಮಲ್ಲೇಶ್ ಕೋಠಾ, ನಿಂಗಪ್ಪ, ಬಾಬಾಜಾನಿ, ವಿಶ್ವ ಅಂಗಡಿ, ಅಂಜಪ್ಪ, ನಾಗರಾಜ್, ಕಾಶಿಪತಿ, ಬಾಲಾಜಿ ಹಟ್ಟಿ, ತೋಟೇಶ್ವರ್, ಆಂಜನೇಯ, ಸದ್ದಾಮ್ ಹುಸೇನ್, ಮಹಿಬು, ಮಹಮ್ಮದ್ ಅಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X