ರಾಯಚೂರು | ಎಲ್‌ಇಡಿ ಬೀದಿ ದೀಪ ಅಳವಡಿಕೆಗೆ ಕ್ರಿಯಾ ಯೋಜನೆ ರೂಪಿಸಿ : ಡಿಸಿ ಚಂದ್ರಶೇಖರ ನಾಯಕ

Date:

Advertisements

ಜಿಲ್ಲೆಯ ಸ್ಥಳಿಯ ಸಂಸ್ಥೆಗಳಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಅಂದಾಜು ಕ್ರಿಯಾ ಯೋಜನೆಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚಿಸಿದರು.

ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಕುರಿತು ಹಮ್ಮಿಕೊಂಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ತಾಂತ್ರಿಕತೆಯಿಂದ ಕೂಡಿರುವ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಇ-ಸ್ಮಾರ್ಟ್ ಕಂಪನಿ ಮುಂದೆ ಬಂದಿದೆ. ಈ ಕುರಿತು ಇ-ಸ್ಮಾರ್ಟ್ ಸಂಸ್ಥೆಯು ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಸಿ ಯಶಸ್ವಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಕುರಿತು ಸಂಸ್ಥೆಯು ನಿರ್ವಹಣೆ ಮಾಡಲಿದೆ ಎಂದು ಸಂಸ್ಥೆಯ ಪ್ರತಿನಿಧಿಯು ತಿಳಿಸಿದ್ದು ಡೆಮೋ ಮಾಹಿತಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲ ಸ್ಥಳಿಯ ಸಂಸ್ಥೆಗಳು ಅಂದಾಜು ಕ್ರಿಯಾ ಯೋಜನೆ ಸಲ್ಲಿಸಿಬೇಕಾಗಿದೆ” ಎಂದರು.

ರಾಯಚೂರು ನಗರಸಭೆಯು 15ನೇ ಹಣಕಾಸು, ಎಸ್‌ಎಫ್‌ಸಿ ಅನುದಾನ ಸೇರಿದಂತೆ ಉಳಿಕೆಯಾದ ಅನುದಾನ ಹಾಗೂ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಬೇಕಾಗಿರುವ ಅಂದಾಜಿಗೆ ಅನುಗುಣವಾಗಿ 7 ಕೋಟಿ ರೂ. ನಿಗದಿಪಡಿಸಿದ್ದು, ಕ್ರಿಯಾ ಯೋಜನೆಯು ಸಲ್ಲಿಸಬೇಕು, ಬೀದಿ ದೀಪಗಳ ಅಳವಡಿಕೆ ಕುರಿತು ಜೆಸ್ಕಾಂಗೆ ಸಲ್ಲಿಸಬೇಕು. ಲಿಂಗಸುಗೂರು ಪುರಸಭೆಯಲ್ಲಿ 24 ಕೋಟಿ ರೂ. ಅಂದಾಜಿಸಿದ್ದು ಮತ್ತೊಮ್ಮೆ ಕ್ರಿಯಾ ಯೋಜನೆ ಸಲ್ಲಿಸಬೇಕು, ಸಿಂಧನೂರು ನಗರಸಭೆಯು ಅಂದಾಜಿನ ಹೊಸ ಬಡಾವಣೆಯ ಸೇರಿಸಿ ಸಲ್ಲಿಸಿದ್ದು ಅವಶ್ಯಕತೆ ಇರುವ ಕಡೆ ಮಾತ್ರ ಸೇರಿಸಲು ಸೂಚಿಸಿದರು.

Advertisements

“ದೇವದುರ್ಗ ಪುರಸಭೆಯಲ್ಲಿ 20 ಲಕ್ಷ ರೂ. ನಿಗದಿಪಡಿಸಿದ್ದು, ಹೆಚ್ಚಿನ ಪ್ರಮಾಣದಲ್ಲಿ ಬೇಕಾಗಿರುವುದರಿಂದ ಕ್ರಿಯಾ ಯೋಜನೆ ಸಿದ್ದಪಡಿಸಬೇಕು, ಹಟ್ಟಿ ಪಟ್ಟಣ ಪಂಚಾಯತಿಯಲ್ಲಿ 3 ಕೋಟಿ ಸಲ್ಲಿಸಿದೆ, ಅನುದಾನ ಎಲ್ಲಿಂದ ಸಂಗ್ರಹ ಕುರಿತು ಅಂದಾಜು ಹಾಗೂ ಈ ಯೋಜನೆಗೆ ಬೇಕಾಗಿರುವ ಹಣಕಾಸು ಕುರಿತು ಕ್ರಿಯಾ ಯೋಜನೆ ಸಲ್ಲಸಲು ತಿಳಿಸಿದರು. ಮಸ್ಕಿ ಪಟ್ಟಣ ಪಂಚಾಯತಿಯು 70 ಲಕ್ಷ ರೂ. ಅನುದಾನ ಪಟ್ಟಿ ನಿಗದಿಪಡಿಸದೆ, ಯೋಜನೆಗೆ ಅವಶ್ಯಕತೆ ಇರುವ ಕ್ರಿಯಾ ಯೋಜನೆ ಮಾಡಿ ಸಲ್ಲಿಸಬೇಕು, ಮುದಗಲ್ ಪಟ್ಟಣ ಪಂಚಾಯತಿ 48 ಲಕ್ಷ ರೂ ಪಟ್ಟಿಯಲ್ಲಿ ತಿಳಿಸಿದ್ದು ಅಂದಾಜು ಸಿದ್ದಪಡಿಸಲು” ಹೇಳಿದರು.

“ತುರವಿಹಾಳ, ಬಳಗಾನೂರು, ಪಟ್ಟಣ ಪಂಚಾಯತಿಗಳು ಅವಶ್ಯಕತೆ ಇರುವನ್ನು ಮಾತ್ರ ಕ್ರಿಯಾ ಯೋಜನೆಯಲ್ಲಿ ಸೇರಿಸಿ, ಎಲ್ಲ ಸ್ಥಳೀಯ ಸಂಸ್ಥೆಗಳು ಕ್ರಿಯಾ ಯೋಜನೆ ಸಿದ್ದಪಡಿಸುವಾಗ ಯಾವ ಕಡೆಯಿಂದ ಹಣ ಸಂಗ್ರಹ ಮತ್ತು ಬಾಕಿ ಉಳಿಸಿಕೊಂಡ 14, 15 ನೇ ಹಣಕಾಸು ಕುರಿತು ಮಾಹಿತಿ ಸಲ್ಲಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುದಗಲ್‌ನ ಹಮಾಲಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಕ್ರಮ; ಎಸಿ ಭರವಸೆ

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಗಂಗಣ್ಣನವರ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಇ-ಸ್ಮಾರ್ಟ್ ಕಂಪನಿ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X