ಆಂಧ್ರ ಪ್ರದೇಶ: ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಮೂತ್ರ ವಿಸರ್ಜಸಿದ ಸವರ್ಣೀಯರು

Date:

Advertisements

ಸವರ್ಣೀಯ ಗುಂಪು ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದೆ. ಜಾಮೀನು ರಹಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೌರ್ಜನ್ಯವೆಸಗಿದ ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರು ಮಂದಿ ಗುಂಪು ಶ್ಯಾಮ್ ಕುಮಾರ್ ಅವರನ್ನು ನಾಲ್ಕು ಗಂಟೆಗಳ ಕಾಲ ಕಾಲ ಥಳಿಸಿದ್ದು, ನೀರು ಕೇಳಿದಾಗ ಆರೋಪಿಗಳು ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಪೊಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಮುನ್ನೆಲೆಗೆ ಬಂದ ನಂತರ, ಟಿಡಿಪಿ ಪರಿಶಿಷ್ಟ ಜಾತಿ ಘಟಕ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದೆ.

ಟಿಡಿಪಿ ಎಸ್‌ಸಿ ಘಟಕದ ಅಧ್ಯಕ್ಷ ಎಂಎಂಎಸ್ ರಾಜು ನೇತೃತ್ವದಲ್ಲಿ ಕಂಚಿಕಚಾರ್ಲ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದ್ದು, ಹೆದ್ದಾರಿಯ ಇಕ್ಕೆಲಗಳಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ: ದಲಿತ ಮಹಿಳೆಯ ಅತ್ಯಾಚಾರವೆಸಗಿ, ತುಂಡುತುಂಡಾಗಿ ಕತ್ತರಿಸಿ ಭೀಕರ ಹತ್ಯೆ

ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಂಎಸ್ ರಾಜು, ”ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಆಡಳಿತದಲ್ಲಿ ದಲಿತರ ಮೇಲಿನ ಹಲ್ಲೆಗಳು ಹೆಚ್ಚಾಗಿವೆ. ರಾಜ್ಯದಲ್ಲಿ ದಲಿತರ ಮೇಲೆ ಸಾಕಷ್ಟು ದಾಳಿಗಳು ನಡೆಯುತ್ತಿವೆ. ಶ್ಯಾಮ್ ಕುಮಾರ್ ಎಂಬ ಬಾಲಕನ ಮೇಲೆ ಮೂತ್ರ ವಿಸರ್ಜಿಸುವ ಮೂಲಕ ಹಲ್ಲೆ ನಡೆಸಲಾಗಿದೆ. ತೀವ್ರ ಗಾಯಗೊಂಡಿರುವ ಶ್ಯಾಮ್ ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

‘ನಮಗೆ ನ್ಯಾಯ ಬೇಕು’ ಎಂಬ ಘೋಷಣೆಯನ್ನು ಪ್ರತಿಭಟನಾಕಾರರು ಕೂಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ಪ್ರತಿಭಟನೆಯನ್ನು ನಿಲ್ಲಿಸಲು ಮತ್ತು ಜನಸಂದಣಿಯನ್ನು ರಸ್ತೆಯಿಂದ ತೆರವುಗೊಳಿಸಲು ಪೊಲೀಸ್ ಅಧಿಕಾರಿಗಳು ಪ್ರಮುಖ ಪ್ರತಿಭಟನಾಕಾರರೊಬ್ಬರನ್ನು ಸ್ಥಳದಿಂದ ಕರೆದುಕೊಂಡು ಹೋಗಿದ್ದಾರೆ.

ವಿಜಯವಾಡ ನಗರ ಪೊಲೀಸ್ ಕಮಿಷನರ್ ಕಂಠಿ, ”ಕಂಚಿಕಚೆರ್ಲಾ ಗ್ರಾಮದ ನಿವಾಸಿ ಶ್ಯಾಮ್ ಕುಮಾರ್ ಎಂಬ ದಲಿತ ಯುವಕನ ಮೇಲೆ ಆತನ ಹಳೆಯ ಸ್ನೇಹಿತ ಹರೀಶ್ ರೆಡ್ಡಿ ಎಂಬುವರು ಇತರ ಐವರು ಸೇರಿ ಹಲ್ಲೆ ನಡೆಸಿದ್ದಾರೆ.ಆರೋಪಿಗಳನ್ನು ತ್ವರಿತ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆಯಲಾಗುವುದು” ಎಂದು ತಿಳಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X