ಉದ್ದೇಶಪೂರ್ವಕವಾಗಿ ಬಿಹಾರದ ಜನಗಣತಿಯಲ್ಲಿ ಮುಸ್ಲಿಂ, ಯಾದವರ ಸಂಖ್ಯೆ ಹೆಚ್ಚಳ: ಅಮಿತ್ ಶಾ

Date:

Advertisements

ಬಿಹಾರದ ಜಾತಿ ಸಮೀಕ್ಷೆಯಲ್ಲಿ ಮುಸ್ಲಿಂ ಹಾಗೂ ಯಾದವ ಸಮುದಾಯದ ಜನಸಂಖ್ಯೆಯನ್ನು ತುಷ್ಟೀಕರಣ ರಾಜಕೀಯದ ಭಾಗವಾಗಿ ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ ಎಂದು ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ನಿತೀಶ್ ಕುಮಾರ್ ಅವರ ಜೆಡಿಯು ಎನ್‌ಡಿಎ ಅಂಗವಾಗಿದ್ದಾಗ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.

“ಜೆಡಿಯು, ಆರ್‌ಜೆಡಿ ಹಾಗೂ ಪ್ರತಿಪಕ್ಷ ಇಂಡಿಯಾ ಒಕ್ಕೂಟದ ಏಕೈಕ ಉದ್ದೇಶ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸುವುದಾಗಿದೆ. ನಿತೀಶ್ ಕುಮಾರ್ ಅವರು ಮುಂದಿನ ಪ್ರಧಾನಿಯಾಗುವ ಕನಸು ಕಾಣುವುದನ್ನು ಬಿಡಬೇಕು. ಇಂಡಿಯಾ ಒಕ್ಕೂಟ ಅವರನ್ನು ಅದರ ಸಂಚಾಲಕರನ್ನಾಗಿಯೂ ಮಾಡಲಿಲ್ಲ” ಎಂದು ಅಮಿತ್ ಶಾ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಒಮ್ಮೊಮ್ಮೆ ಗುಲಾಮಿತನ ಅನ್ನಿಸಿಬಿಡುತ್ತದೆ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅಸಮಾಧಾನ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವರು, ರಾಜ್ಯದಲ್ಲಿ ‘ಗೂಂಡಾ ರಾಜ್’ಗೆ ಜೆಡಿಯು ನಾಯಕರೇ ಕಾರಣ’ ಎಂದು ಹೇಳಿದರು.

“ನಿತೀಶ್ ಕುಮಾರ್ ಮತ್ತು ಲಾಲೂ ಯಾದವ್ ಅವರು ಕುಟುಂಬದ ಅಂಗಡಿಗಳನ್ನು ನಡೆಸುವವರು. ಒಬ್ಬರು ಪ್ರಧಾನಿಯಾಗಲು ಬಯಸುತ್ತಾರೆ ಮತ್ತು ಇನ್ನೊಬ್ಬರು ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಬಯಸುತ್ತಾರೆ” ಎಂದು ಅಮಿತ್ ಶಾ ಹೇಳಿದರು.

ಅಮಿತ್‌ ಶಾಗೆ ತೇಜಶ್ವಿ ಯಾದವ್ ತಿರುಗೇಟು

ಯಾದವರು ಮತ್ತು ಮುಸ್ಲಿಮರ ಜನಸಂಖ್ಯೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಬಿಹಾರದ ಉಪಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಟೀಕಿಸಿದ್ದಾರೆ.

“ಅಮಿತ್‌ ಶಾ ಹೇಳಿಕೆಯನ್ನು ಕೇಳಿದ್ದೇನೆ. ಜಾತಿವಾರು ಸಮೀಕ್ಷೆಯಲ್ಲಿ ಯಾದವರು, ಮುಸ್ಲಿಮರ ಜನಸಂಖ್ಯೆ ಹೆಚ್ಚಿದ್ದು, ಇತರೆ ಸಮುದಾಯಗಳ ಜನಸಂಖ್ಯೆ ಕಡಿಮೆಯಾಗಿದೆ ಎಂದಿದ್ದಾರೆ. ಸಮೀಕ್ಷೆ ತಪ್ಪಾಗಿದ್ದರೆ ದೇಶಾದ್ಯಂತ ಜಾತಿ ಗಣತಿ ನಡೆಸಿ ಎಂದು ಹೇಳಲು ಬಯಸುತ್ತೇನೆ. ನಿಮ್ಮನ್ನು ತಡೆದವರ್ಯಾರು? ನೀವು ಯಾಕೆ ಹಾಗೆ ಮಾಡುತ್ತಿಲ್ಲ?” ಎಂದು ಅವರು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X