ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳಿಗೆ ಸ್ಥಾನ

Date:

Advertisements

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಸ್ಥಾನ ಪಡೆದಿವೆ. ಸ್ವಿಸ್ ಗ್ರೂಪ್ ಎಕ್ಯೂಏರ್‌ ಅಂಕಿಅಂಶಗಳ ಪ್ರಕಾರ ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಭಾರತದ ರಾಜಧಾನಿ ದೆಹಲಿಯು ಮೊದಲ ಸ್ಥಾನದಲ್ಲಿದೆ.

ಹಾಗೆಯೇ ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಮೊದಲ 10ರಲ್ಲಿ ಸ್ಥಾನ ಪಡೆದಿವೆ. ಉಳಿದ ಎರಡು ನಗರಗಳು ಕೋಲ್ಕತ್ತಾ ಮತ್ತು ಮುಂಬೈ.

483 ಎಕ್ಯೂಐನೊಂದಿಗೆ(ವಾಯು ಗುಣಮಟ್ಟ ಸೂಚ್ಯಂಕ) ಪಟ್ಟಿಯಲ್ಲಿ ನವದೆಹಲಿ ಮತ್ತೆ ಅಗ್ರಸ್ಥಾನದಲ್ಲಿದೆ. ಪಾಕಿಸ್ತಾನದ ಲಾಹೋರ್ 371 ಎಕ್ಯೂಐ ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಕೋಲ್ಕತ್ತಾ ಮತ್ತು ಮುಂಬೈ ಕೂಡ ವಾಯುಮಾಲಿನ್ಯದಿಂದ ಹೆಚ್ಚು ಹಾನಿಗೊಳಗಾದ 5 ನಗರಗಳಲ್ಲಿ ಕ್ರಮವಾಗಿ 206 ಮತ್ತು 162 ಎಕ್ಯೂಐನೊಂದಿಗೆ ಮೂರು ಮತ್ತು ಆರನೇ ಸ್ಥಾನದಲ್ಲಿವೆ.

Advertisements

ಇನ್ನುಳಿದ ಮೊದಲ 10ರ ಪಟ್ಟಿಯಲ್ಲಿ ಚೀನಾದ ಮೂರು, ಪಾಕಿಸ್ತಾನದ ಎರಡು, ಬಾಂಗ್ಲಾದೇಶದ ಒಂದು ಹಾಗೂ ಕುವೈತ್‌ನ ಒಂದು ನಗರಗಳು ಪಟ್ಟಿಯಲ್ಲಿವೆ.

ಈ ಸುದ್ದಿ ಓದಿದ್ದೀರಾ? ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ: ನ.10ರವರೆಗೆ ಪ್ರಾಥಮಿಕ ಶಾಲೆ ಮುಚ್ಚಲು ಸರ್ಕಾರ ಆದೇಶ

ತಜ್ಞರು ಮತ್ತು ವೈದ್ಯರ ಪ್ರಕಾರ, ಯಾವುದೇ ಆರೋಗ್ಯವಂತ ವ್ಯಕ್ತಿಗೆ ಶಿಫಾರಸು ಮಾಡಲಾದ ಎಕ್ಯೂಐ ಮಟ್ಟ 50 ಕ್ಕಿಂತ ಕಡಿಮೆ ಇರಬೇಕು.

ಕಡಿಮೆ ತಾಪಮಾನದ ಸಂಯೋಜನೆ, ಗಾಳಿಯ ಕೊರತೆ ಮತ್ತು ನೆರೆಯ ಪ್ರದೇಶಗಳಲ್ಲಿ ಕೃಷಿ ತ್ಯಾಜ್ಯ ಸುಡುವುದು ವಾಯು ಮಾಲಿನ್ಯದ ಹೆಚ್ಚಳಕ್ಕೆ ಕಾರಣವಾಗಿದೆ.

ಕೆಲವು ಕಡೆಗಳಲ್ಲಿ ಎಕ್ಯೂಐ 550 ಕ್ಕಿಂತ ಹೆಚ್ಚಾದ ಕಾರಣ ನವದೆಹಲಿಯ 2 ಕೋಟಿ ನಿವಾಸಿಗಳಲ್ಲಿ ಅನೇಕರು ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಗಂಟಲಿನ ತುರಿಕೆ ಅನುಭವಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X