ಈಶ್ವರಪ್ಪ ಮಾತಿಗೆ ಯಾವುದೇ ಬೆಲೆ ಇಲ್ಲ. ಅವರು ಸವಕಲು ನಾಣ್ಯ. ಹಾಗಾಗಿಯೇ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂತರಾಜು ವರದಿಗೆ ಕೆ ಎಸ್ ಈಶ್ವರಪ್ಪ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿ “ಈಶ್ವರಪ್ಪ ಸವಕಲು ನಾಣ್ಯ. ಹಾಗಾಗಿ ಅವರಿಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಮಾತುಗಳಿಗೆ ಬೆಲೆ ಇಲ್ಲ. ಕಾಂತರಾಜು ವರದಿ ಮಂಡಿಸುವಂತೆ ಸದನದಲ್ಲಿ ನನ್ನೊಂದಿಗೆ ಈಶ್ವರಪ್ಪ ಅವರು ಒತ್ತಾಯ ಮಾಡಿದ್ದರಲ್ಲ, ಈಗ ಅದನ್ನು ಸುಟ್ಟು ಹಾಕುತ್ತೇವೆಂದರೆ ಏನರ್ಥ” ಎಂದು ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಂಡ್ಯ | 5 ತಿಂಗಳಲ್ಲಿ 3ನೇ ಬಾರಿ ವಿದೇಶ ಪ್ರವಾಸ: ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರುದ್ಧ ಆಕ್ರೋಶ
“ಕಾಂತರಾಜು ಆಯೋಗದ ಜಾತಿ ಗಣತಿ ವರದಿ ಇನ್ನೂ ನನ್ನ ಕೈ ಸೇರಿಲ್ಲ. ಹೀಗಿರುವಾಗ, ನಾನೇಕೆ ವಿರೋಧ ಮಾಡಲಿ? ವರದಿಯಲ್ಲಿ ಏನಿದೆ ಎಂಬುದೇ ಗೊತ್ತಿಲ್ಲ. ವರದಿ ಸಲ್ಲಿಕೆಯಾದ ಬಳಿಕ ನೋಡೋಣ” ಎಂದು ಹೇಳಿದರು.