ಗದಗ | ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿ, ಇಂಜೆಕ್ಷನ್​ ಸಿಗದೆ ರೋಗಿಗಳ ಪರದಾಟ

Date:

Advertisements

ಚಿಕಿತ್ಸೆಗಾಗಿ ಗದಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಈಗ ಅಕ್ಷರಶಃ ಕಂಗಾಲಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ, ಔಷಧಿ ಸಿಗುತ್ತೆಂದು ಬಂದ ರೋಗಿಗಳಿಗೆ ಇಲ್ಲಿನ ಸಿಬ್ಬಂದಿ ‘ಈ ಔಷಧಿಗಳು ನಮ್ಮಲ್ಲಿ ಇಲ್ಲ’ ಎನ್ನುತ್ತಿದ್ದು, ಬಡ ರೋಗಿಗಳು ಖಾಸಗಿ ಔಷಧಿ ಅಂಗಡಿಯಲ್ಲಿ ಖರೀದಿ ಮಾಡುವಂತಾಗಿದೆ.

ರೋಗಿಗಳಿಗೆ ಅಗತ್ಯ ಔಷಧಿಯನ್ನು ವೈದ್ಯರು ಚೀಟಿ ಬರೆದುಕೊಡುತ್ತಾರೆ. ರೋಗಿಗಳು ಜಿಮ್ಸ್ ಆಸ್ಪತ್ರೆ ಔಷಧಾಲಯಕ್ಕೆ ಹೋದರೆ, ಈ ಔಷಧಿ ನಮ್ಮಲ್ಲಿ ಇಲ್ಲ, ಹೊರಗಡೆ ಹೋಗಿ ಎನ್ನುತ್ತಿದ್ದಾರಂತೆ. ಕಡಿಮೆ ದರದ ಔಷಧಿಗಳು ಜಿಮ್ಸ್ ಆಸ್ಪತ್ರೆಯಲ್ಲಿ ದೊರೆಯುತ್ತವೆ. ಆದರೆ, ದುಬಾರಿ ಬೆಲೆಯ ಅತಿ ಅಗತ್ಯದ ಔಷಧಿ, ಇಂಜೆಕ್ಷನ್​ಗಳು ಸಿಗುತ್ತಿಲ್ಲ ಎಂದು ರೋಗಿಗಳು ಕಿಡಿ ಕಾರುತ್ತಿದ್ದಾರೆ. ಚರ್ಮ ರೋಗಿಯೊಬ್ಬ ಒಂದೊಂದು ಮುಲಾಮಿಗೆ 300-400 ರೂಪಾಯಿ ಕೊಟ್ಟು ಖಾಸಗಿಯಲ್ಲಿ ಖರೀದಿ ಮಾಡಬೇಕಾಗಿದೆ. ಬಡವರು ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ, ಔಷಧಿ ಸಿಗುತ್ತೆ ಎಂದು ಬಂದ್ರೆ ಔಷಧಿಯೇ ಸಿಗುತ್ತಿಲ್ಲ. ಹಣ ಕೊಟ್ಟು ಖರೀದಿ ಮಾಡುವಂತ ಸ್ಥಿತಿ ಇದೆಯೆಂದು ಗೋಳಾಡುತ್ತಿದ್ದಾರೆ.

ಈ ಕುರಿತು ಜಿಮ್ಸ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ರೇಖಾ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ, “ನಮ್ಮ ಔಷಧಾಲಯದಲ್ಲಿ ಇದ್ದ ಔಷಧಿಗಳು ಮಾತ್ರ ಬರೆಯುವಂತೆ ವೈದ್ಯರಿಗೆ ಈಗಾಗಲೇ ಸೂಚಿಸಲಾಗಿದೆ. ಹೊರಗಡೆ ಮಾತ್ರೆ ಬರೆಯದಂತೆ ಲಿಖಿತವಾಗಿ ಹೇಳಲಾಗಿದೆ. ಆದರೂ, ಹೊರಗಡೆ ಬರೆದುಕೊಡುತ್ತಾರೆ ಎಂದರೆ, ನಿರ್ದೇಶಕರಿಗೆ ಕೇಳಬೇಕು. ಔಷಧಿ ಕೊರತೆ ಬಗ್ಗೆ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ನನ್ನ ಹಂತದಲ್ಲಿ ಏನು ಮಾಡಬಹುದೋ ಅದನ್ನು ಮಾಡಿದ್ದೇನೆ. ಮುಂದಿನದ್ದು ನಿರ್ದೇಶಕರದ್ದು,” ಎನ್ನುತ್ತಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X