ಧಾರವಾಡ | ಜಾನುವಾರು ಹರಾಜು ಕರೆದ ಕೃಷಿ ವಿವಿ; ಬಜರಂಗದಳದ ವಿರೋಧ

Date:

Advertisements

ಧಾರವಾಡ ಕೃಷಿ ವಿಶ್ವವಿದ್ಯಾಲಯ ತನ್ನ ಹೈನುಗಾರಿಕಾ ಘಟಕದಲ್ಲಿ ಹೆಚ್ಚುವರಿಯಾಗಿರುವ 56 ಜಾನುವಾರುಗಳನ್ನು ಇದೇ ನವೆಂಬರ್ 6ರಂದು ಬಹಿರಂಗ ಹರಾಜಿನ ಮೂಲಕ ಮಾರಾಟ ಮಾಡಲು ಮುಂದಾಗಿದೆ. ಆದರೆ, ಈ ಹರಾಜು ಪ್ರಕ್ರಿಯೆಗೆ ಬಜರಂಗ ದಳ ವಿರೋಧ ವ್ಯಕ್ತಪಡಿಸಿದೆ.

ರಾಜ್ಯದಲ್ಲಿಯೇ ಮೇಲ್ದರ್ಜೆಯಲ್ಲಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯ ಕೃಷಿ ಸಂಶೋಧನೆಯ ಜೊತೆಗೆ ಕೃಷಿ ಉಪ ಕಸುಬುಗಳಲ್ಲಿಯೂ ತೊಡಗಿಸಿಕೊಂಡಿದೆ. ಅದರಲ್ಲಿ ಹೈನುಗಾರಿಕೆ ಘಟಕ ಪ್ರಮುಖವಾಗಿದೆ. ಧಾರವಾಡಿ ಎಮ್ಮೆ ತಳಿ ಸೇರಿ ವಿವಿಧ ತಳಿಯ ರಾಸು ಹಾಗೂ ಹಲವು ಬಗೆಯ ನೂರಾರು ಜಾನುವಾರುಗಳು ಇಲ್ಲಿವೆ. ಆ ಪೈಕಿ ಹೆಚ್ಚುವರಿ ಜಾನುವಾರುಗಳ ಹರಾಜಿಗೆ ಕೃಷಿ ವಿವಿ ಮುಂದಾಗಿತ್ತು. ಈ ಸಂಬಂಧ ಜಾಹೀರಾತು ಪ್ರಕಟಣೆ ಕೂಡ ನೀಡಿತ್ತು.

ಆದರೆ, ಇಲ್ಲಿ ಜಾನುವಾರುಗಳು ಹರಾಜಿನ ಮೂಲಕ‌ ಕಸಾಯಿಖಾನೆ ಸೇರುತ್ತವೆ. ಹೀಗಾಗಿ ಈ ಹರಾಜು ಯಾವುದೇ ಕಾರಣಕ್ಕೂ ನಡೆಯಬಾರದು ಎಂದು ಬಜರಂಗದಳ ಆಕ್ಷೇಪಿಸಿದೆ. ವಿವಿಗೆ ಈ ಜಾನುವಾರುಗಳು ಹೆಚ್ಚುವರಿ ಆಗಿದ್ದು, ಪಾಲನೆ ಮಾಡುವುದಕ್ಕೆ ಆಗದೇ ಹೋದಲ್ಲಿ ಸರ್ಕಾರಿ ಗೋಶಾಲೆಗಳಿಗೆ ನೀಡಲಿ. ಈ ಕೂಡಲೇ ಹರಾಜು ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕೃಷಿ ವಿವಿ ಕುಲಪತಿಗೆ ಬಜರಂಗದಳ ಮನವಿ ಸಲ್ಲಿಸಿದೆ.

Advertisements

ಆದರೆ, ಕೃಷಿ ವಿವಿ ಸದ್ಯ ನಡೆಯಲಿರುವ ಹರಾಜಿನಲ್ಲಿ ರೈತರು ಮತ್ತು ಹಾಲು ಉತ್ಪಾದಕರೇ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎನ್ನುವ ನಿಯಮವನ್ನು ಹಾಕಿದೆ. ರೈತರ ಕೃಷಿ ಜಮೀನಿನ ಪಹಣಿ ಪತ್ರ ಇಲ್ಲವೇ, ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯರಾಗಿದ್ದಲ್ಲಿ ಸದಸ್ಯತ್ವದ ಪ್ರಮಾಣ ಪತ್ರ ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ಇಷ್ಟಾದರೂ ಭಜರಂಗದಳ ಹರಾಜು ಪ್ರಕ್ರಿಯೆ ನಡೆಸದಂತೆ ಆಕ್ಷೇಪಿಸಿದೆ. ಒಂದು ವೇಳೆ ಹರಾಜು ಹಾಕಿದರೆ ನಾವು ಮುತ್ತಿಗೆ ಹಾಕಿ ತಡೆಯುತ್ತೇವೆ ಎಂದು ಬಜರಂಗದಳ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X