ಉಡುಪಿ | ಬರ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಕೋಟ ಶ್ರೀನಿವಾಸ ಪೂಜಾರಿ

Date:

Advertisements

ರಾಜ್ಯದ ಸುಮಾರು 216 ತಾಲೂಕುಗಳು ಬರಪೀಡಿತವಾಗಿದ್ದು, ಬರದ ಭೀಕರತೆಯನ್ನು ಎದುರಿಸಲು ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ಉಡುಪಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಬರದಿಂದ ರಾಜ್ಯದಲ್ಲಿ ಅಂದಾಜು ₹33 ಸಾವಿರ ಕೋಟಿ ನಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ₹5 ಸಾವಿರ ಕೋಟಿ ಬಿಡುಗಡೆ ಮಾಡುವುದು ಬಿಟ್ಟು ಆಂತರಿಕ ಜಗಳ, ಡಿನ್ನರ್ ಪಾರ್ಟಿ ಮಾಡುವುದರಲ್ಲಿಯೇ ತಲ್ಲೀನರಾಗಿದ್ದಾರೆ. ರೈತರು, ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇವರು ಯಾವುದೇ ಕೆಲಸ ಮಾಡುತ್ತಿಲ್ಲ” ಎಂದು ದೂರಿದರು.

“ಇವರು ತಮ್ಮ ಮುಖ, ಗೌರವ ಉಳಿಸಿಕೊಳ್ಳಲು ಕೇಂದ್ರವನ್ನು ದೂರುತ್ತಿದ್ದಾರೆ. ಪ್ರಧಾನ ಮಂತ್ರಿ ಭೇಟಿ ನೀಡಿಲ್ಲ, ಪ್ರಧಾನಿಯವರನ್ನು ಭೇಟಿ ಮಾಡಲು ಅವಕಾಶ ಕೊಟ್ಟಿಲ್ಲವೆಂಬ ತಪ್ಪು ಮಾಹಿತಿಯನ್ನು ರಾಜ್ಯದ ಜನತೆ ಮುಂದೆ ಹೇಳುತ್ತಿದ್ದು, ಕೇಂದ್ರ ಸರ್ಕಾರವನ್ನು ದೂರುವುದರಲ್ಲಿ ಮಗ್ನರಾಗಿದ್ದಾರೆ” ಎಂದು ಟೀಕಿಸಿದರು.

Advertisements

“ಬರದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ 17 ತಂಡಗಳನ್ನು ರಚಿಸಿ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಅಧ್ಯಯನ ಮಾಡಲಾಗುವುದು. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ₹5000 ಕೋಟಿ ರೂ. ಬರ ಪರಿಹಾರ ಬಿಡುಗಡೆಗೊಳಿಸಿ ರೈತರ ನೆರವಿಗೆ ಧಾವಿಸಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರ ಸದ್ಯ ಅಸ್ಥಿರವಾಗಿದೆ. ಹಾಗಾಗಿ ವಿಪಕ್ಷ ನಾಯಕನ ಆಯ್ಕೆಯಲ್ಲಿ ನಮ್ಮ ಹೈಕಮಾಂಡ್ ವಿಳಂಬ ಮಾಡುತ್ತಿರಬಹುದು” ಎಂದು ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | 57ನೇ ಕೃಷಿ ಎಂಜಿನಿಯರಿಂಗ್ ವಾರ್ಷಿಕ ಸಮ್ಮೇಳನ

“ರಾಷ್ಟ್ರೀಯ ಪಕ್ಷಕ್ಕೆ ಹೈಕಮಾಂಡ್ ಎಂಬುದು ಇರುತ್ತದೆ. ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಪ್ರಜಾಪ್ರಪಭುತ್ವ ವ್ಯವಸ್ಥೆಯಲ್ಲಿ ವಿಪಕ್ಷ ನಾಯಕ ಎಂಬುದು ಅತೀ ಅಗತ್ಯ. ಬೇರೆ ಬೇರೆ ಕಾರಣಕ್ಕೆ ವಿಪಕ್ಷ ನಾಯಕರ ಆಯ್ಕೆ ವಿಳಂಬವಾಗಿದೆ. ಅದರ ಅರ್ಥ ನಮ್ಮಲ್ಲಿ ನಾಯಕನೇ ಇಲ್ಲ ಎಂಬುದು ಅಲ್ಲ. ಆದಷ್ಟು ಬೇಗ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X