ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11ರಂದು ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಏರ್ಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು.
ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಕುರಿತು ಜರಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಕಾರ್ಯಕ್ರಮದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಸಾಹಸಗಾಥೆಯ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಉಪನ್ಯಾಸಕರನ್ನು ನೇಮಕ ಮಾಡಲಾಗುವುದು. ಸಂಗೀತ ಕಾರ್ಯಕ್ರಮದೊಂದಿಗೆ ಶಿಷ್ಯಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಲಾಗುವುದು. ಒಟ್ಟಾರೆಯಾಗಿ ಓಬವ್ವ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳ ಸಮಗ್ರ ಕಾರ್ಯಗಳಿಂದ ಗ್ರಾಮೀಣಾಭಿವೃದ್ಧಿ ಸಾಧ್ಯ: ಶ್ಯಾಮಸುಂದರ ಪಾಲಿವಾಲ
ಕಾರ್ಯಕ್ರಮದಲ್ಲಿ ವೇದಿಕೆ ವ್ಯವಸ್ಥೆ, ಬ್ಯಾನರ್ ಅಳವಡಿಕೆ, ಉಪಹಾರದ ವ್ಯವಸ್ಥೆ ಕುರಿತು ಚರ್ಚಿಸಿದರು.
ಸಭೆಯಲ್ಲಿ ಎಸ್ ಎನ್ ಬಳ್ಳಾರಿ, ಪ್ರೊ.ಕೆ ಎಚ್ ಬೇಲೂರು, ಆನಂದ ಶಿಂಗಾಡಿ, ಶರೀಫ್ ಬಿಳಿಎಲಿ, ಎಸ್ ಎನ್ ಲಿಂಗಧಾಳ, ಸಿ ಬಿ ಕಾಳೆ, ಮಹಾಂತೇಶ ಮದ್ನೂರ, ರಮೇಶ ಕೊಳೂರು, ಬಸವರಾಜ ಬಿಳೆಎಲಿ, ಪ್ರಕಾಶ ವಿ ಬಿ, ವಾಸಂತಿ ಮಲ್ಲಾಪೂರ ಸೇರಿದಂತೆ ಹಲವು ಸಮುದಾಯದ ಮುಖಂಡರು, ಗಣ್ಯರು ಇದ್ದರು.