ವಿಜಯಪುರ | ಎದ್ದೇಳು ಭಾರತ ಪೂರ್ವ ಭಾವಿ ಸಭೆ

Date:

Advertisements

ಎದ್ದೇಳು ಕರ್ನಾಟಕ ಮುಖಾಂತರ ನಾವು ‘ಚಾಯ್ ಪೆ ಚರ್ಚೆ, ಮನ್‌ಕಿ ಬಾತ್’ ಯಾಕೆ ಮಾಡಬಾರದು. ನಾವು ಕೂಡಾ ಮಾಡಬಹುದು. ಜಗತ್ತಿನಲ್ಲಿ ಯುದ್ಧ ನಡೆತಿದೆ. ಮಕ್ಕಳ ಮೇಲೆ ಹಿಂಸೆ, ಶಾಲೆಗಳ ಮೇಲೆ ದಾಳಿಗಳು ನಡೆಯುತ್ತಿವೆ. ಇವುಗಳ ವಿರುದ್ಧ ದನಿ ಎತ್ತಬೇಕು. ಸೌಹಾರ್ದತೆ, ಸಾಮರಸ್ಯ ಬೆಳೆಸಬೇಕು ಎಂದು ಫಾದರ್ ತಿಯೋಳಾ ಹೇಳಿದ್ದಾರೆ.

ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳ ನಡೆಸಿದ ‘ಎದ್ದೇಳು ಭಾರತ’ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು. “ಇತ್ತೀಚಿನ ದಿನಗಳಲ್ಲಿ ಇಸ್ರೇಲ್, ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವು ತರವಂತಹವು. ಇಂತ ಘಟನೆಗಳು ನಡೆಯದ ಹಾಗೆ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅಕ್ರಮ್ ಮಸಾಳಕರ, “ಕೋಮುವಾದ ಶಕ್ತಿಗಳನ್ನು ಸೋಲಿಸುವುದು ಈ ಘಳಿಗೆಯಲ್ಲಿ ಅವಶ್ಯಕತೆ ಇದೆ. ದ್ವೇಷದಿಂದ ದೇಶವನ್ನು ಉಳಿಸಬೇಕಿದೆ. ನಮಗೆ ಶಾಂತಿ ಬೇಕು. ಈಗಿನ ಸರ್ಕಾರ ಶಾಂತಿಭಂಗ ಮಾಡುತ್ತಿದೆ. ನಮ್ಮ ಸಂಸ್ಕೃತಿ ಉಳಸಬೇಕಿದೆ” ಎಂದು ಹೇಳಿದ್ದಾರೆ.

Advertisements

ಅಬ್ದುಲ್ ಖಧಿರ್ ಮಾತನಾಡಿ, “ಇಸ್ರೇಲ್ ಹೆಸರಿನಲ್ಲಿ ಬಿಜೆಪಿ ಭಾರತದಲ್ಲಿ ರಾಜಕೀಯ ಮಾಡುತ್ತಿದೆ. ಎದ್ದೇಳು ಕರ್ನಾಟಕ ಸಣ್ಣ ಪ್ರಯತ್ನವಾಗಿತ್ತು. ಈಗ ಲೋಕಸಭೆ ಚುನಾವಣೆ ಬರುತ್ತಿದೆ. ಅದಕ್ಕಾಗಿ ನಾವೆಲ್ಲರು ಒಟ್ಟಾಗಿ ಕೆಲಸ ಮಾಡಬೇಕು” ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಡಾ. ರಿಯಾಜ್ ಫಾರೂಕ್, ಎಂಸಿ ಮುಲ್ಲಾ, ಫಯಾಜ್ ಕಲಾದಿಗಿ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X