ರಾಜ್ಯಗಳ ತೆರಿಗೆ ಪಾಲು ವಿತರಿಸಿದ ಕೇಂದ್ರ ಸರ್ಕಾರ: ಕರ್ನಾಟಕಕ್ಕೆ ₹2,660 ಕೋಟಿ

Date:

Advertisements

ಕೇಂದ್ರ ಸರಕಾರವು ರಾಜ್ಯಗಳಿಗೆ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡುವ ತೆರಿಗೆ ಪಾಲನ್ನು ಈ ವರ್ಷ ಮೂರು ದಿನ ಮೊದಲೇ ಬಿಡುಗಡೆ ಮಾಡಿದೆ.

ರಾಜ್ಯಗಳ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರವು, ಒಟ್ಟು 72,961.21 ಕೋಟಿ ರೂ. ಹಂಚಿಕೆ ಮಾಡಿದೆ.

ಹೆಚ್ಚು ಮತ್ತು ತ್ವರಿತವಾಗಿ ತೆರಿಗೆ ಪಾಲು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದ ಕರ್ನಾಟಕಕ್ಕೆ 2,660 ಕೋಟಿ ರೂ. ವಿತರಿಸಲಾಗಿದೆ. ಒಟ್ಟಾರೆ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಕೇಂದ್ರ ಸರಕಾರವು ಹಂಚಿಕೆ ಮಾಡಿದೆ.

Advertisements

ಮಂಗಳವಾರ ಹಣಕಾಸು ಸಚಿವಾಲಯ ಮಂಗಳವಾರ ಬಿಡುಗಡೆಗೊಳಿಸಿರುವ ಪಟ್ಟಿಯಲ್ಲಿ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ(₹13,088.51 ಕೋಟಿ), ಬಿಹಾರ(₹7,338.44 ಕೋಟಿ) ಮತ್ತು ಮಧ್ಯಪ್ರದೇಶ(₹5,727.44 ಕೋಟಿ) ಮೊದಲ ಮೂರು ಸ್ಥಾನಗಳನ್ನು ಗಳಿಸಿವೆ. ಅತಿ ಕಡಿಮೆ ಪಾಲು ಪಡೆದ ರಾಜ್ಯಗಳಲ್ಲಿ ಗೋವಾ(₹281.63 ಕೋಟಿ) ಮೊದಲ ಸ್ಥಾನದಲ್ಲಿದೆ. ಸಿಕ್ಕಿಂ(₹283.10 ಕೋಟಿ), ಮಿಝೋರಾಂ(₹364.80 ಕೋಟಿ) ನಂತರದ ಸ್ಥಾನದಲ್ಲಿವೆ.

ಸಾಮಾನ್ಯವಾಗಿ ನವೆಂಬರ್‌ 10ರಂದು ತೆರಿಗೆ ಪಾಲಿನ ಹಣವನ್ನು ರಾಜ್ಯಗಳಿಗೆ ವರ್ಗಾಯಿಸುವ ರೂಢಿಯನ್ನು ಕೇಂದ್ರ ಸರ್ಕಾರವು ಪಾಲಿಸುತ್ತಾ ಬಂದಿದೆ. ಆದರೆ, ಈ ಬಾರಿ ದೀಪಾವಳಿ ಹಬ್ಬದ ಹಂಗಾಮಿನ ಹಿನ್ನೆಲೆಯಲ್ಲಿ ಅವಧಿಗಿಂತ ಮೂರು ದಿನಗಳಿಗೆ ಮುಂಚಿತವಾಗಿಯೇ ತೆರಿಗೆಯ ಪಾಲನ್ನು ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ನೀಡಿದೆ.

ಹಬ್ಬದ ಸಮಯದಲ್ಲಿ ಖರೀದಿ ಭರಾಟೆ ಜೋರಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ದಾಖಲೆಯ 1.72 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿತ್ತು. ಅಕ್ಟೋಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಏಪ್ರಿಲ್ 2023ರ ನಂತರ ಸಂಗ್ರಹವಾದ ಎರಡನೇ ಅತಿ ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ರಾಜ್ಯಗಳಿಗೆ ತಮ್ಮ ತಮ್ಮ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X