ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 15ದಿನಳಿಂದ ಮೊಟ್ಟೆ, ಶೇಂಗಾ ಚಿಕ್ಕಿ ಹಾಗೂ ಬಾಳೆ ಹಣ್ಣು ಸೇರಿ ಇನ್ನಿತರ ಪೌಷ್ಟಿಕ ಆಹಾರ ನೀಡದೇ, ಧಾನ್ಯಗಳಿಲ್ಲದ ತಿಳಿ ಸಾಂಬಾರು ಮತ್ತು ಹುಳು ಹತ್ತಿದ ಕೊಳೆತ ತರಕಾರಿಯನ್ನು ಬಳಕೆ ಮಾಡಿ ಅಸಮರ್ಪಕವಾಗಿ ಮಧ್ಯಾಹ್ನ ಬಿಸಿಯೂಟವನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಒಂದರಿಂದ 7ನೇ ತರಗತಿವರೆಗೆ ಒಟ್ಟು 441 ಮಕ್ಕಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಿದ್ದರೂ ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ಅವರು ಮಕ್ಕಳ ಹಿತ ಕಾಪಾಡುತ್ತಿಲ್ಲ, ನಮ್ಮೂರ ಶಾಲೆಗೆ ಇಂಥಹ ಶಿಕ್ಷಕರು ಬೇಡ ಎಂದು ಮಕ್ಕಳು ಪಟ್ಟು ಹಿಡಿದಿದ್ದಾರೆ.