ಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ ಎನ್‌ಐಎ ದಾಳಿ

Date:

Advertisements
  • ಬೆಂಗಳೂರಿನ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ ದಾಳಿ
  • ದಿಢೀರ್ ‌ದಾಳಿ ವೇಳೆ ಎಂಟು ಮಂದಿಯನ್ನು ವಶಕ್ಕೆ ಪಡೆದ ಎನ್‌ಐಎ

ಉದ್ಯಾನ ನಗರಿ ಬೆಂಗಳೂರಿನ ಹಲವೆಡೆ ದೊಡ್ಡ ಮಟ್ಟದಲ್ಲಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಹಲವೆಡೆ ದಿಢೀರ್ ‌ದಾಳಿ ನಡೆಸಿ ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ‌ ಬಾಂಗ್ಲಾ ವಲಸಿಗರು ನೆಲೆ ಕಂಡುಕೊಳ್ಳತೊಡಗಿದ್ದು ಅವರಿಗೆ ಬೇಕಾದ ದಾಖಲೆಗಳನ್ನು ಒದಗಿಸಲು ಕೆಲವರು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಎನ್‌ಐಎ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.

ನಗರದ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು‌ ನಿನ್ನೆ ರಾತ್ರಿ ದಾಳಿ ಮಾಡಿ ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಇನ್ನಿತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ಎನ್ಐಎ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisements

ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಎಕಕಾಲದಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X