ಧಾರವಾಡ | ರೆಡಿಮೇಡ್ ಬಟ್ಟೆ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

Date:

Advertisements

ಸ್ಯಾಮ್ ಔಟ್‍ಫಿಟ್ ಫ್ಯಾಶನ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಗ್ರಾಹಕರ ಆಯೋಗ, ಒಂದು ತಿಂಗಳೊಳಗಾಗಿ ದೂರುದಾರ ಗ್ರಾಹಕ ಸಂದಾಯ ಮಾಡಿದ 38,640 ರೂ.ಗಳನ್ನು, ಹಣ ಕೊಟ್ಟ ದಿನದಿಂದ ಶೇ.8ರಂತೆ ಬಡ್ಡಿ ಸಹಿತ ಪೂರ್ತಿ ಹಣ ಸಂದಾಯ ಮಾಡುವಂತೆ ಆದೇಶಿಸಿದೆ.

ಜಿಲ್ಲೆಯ ಕಲಘಟಗಿ ತಾಲೂಕಿನ ಅಕ್ಕಿ ಓಣಿಯ ನಿವಾಸಿ ಅರುಣ್ ಕುಂಬಾರ ಎನ್ನುವವರು 2022ಆಗಸ್ಟ್ 28ರಂದು ಮಲೀಕ್ ಇಸ್ಮಾಯಿಲ್ ಎನ್ನುವವರ ಮಧ್ಯಸ್ಥಿಕೆಯಲ್ಲಿ, ಹುಬ್ಬಳ್ಳಿಯ ಸ್ಯಾಮ್ ಔಟ್‍ಫಿಟ್ ಫ್ಯಾಶನ್ ಪ್ರೈವೇಟ್ ಲಿಮಿಟೆಡ್ ಇವರಿಂದ ರೂ. 38,640 ರೂ. ಮೌಲ್ಯದ ಬಟ್ಟೆಗಳ ಬಾಕ್ಸ್‌ಗಳನ್ನು ಖರೀದಿಸಿದ್ದರು.

ಆದರೆ, ಸ್ಯಾಮ್ ಔಟ್‍ಫಿಟ್ ಫ್ಯಾಶನ್‌ನವರು ಒಪ್ಪಂದದಂತೆ ಬಟ್ಟೆಗಳ ಬಾಕ್ಸ್ ತಲುಪಿಸಿರಲಿಲ್ಲ. ಈ ಕುರಿತು ವಿಚಾರಿಸಿದಾಗ 2022ಸೆಪ್ಟೆಂಬರ್ 20ರಂದು ಕೇವಲ 9,396 ರೂ. ರಸೀದಿ ಕೊಟ್ಟಿದ್ದರು. ಹಲವು ಬಾರಿ ವಿಚಾರಿಸಿದರೂ ಅರುಣ್​ ಕುಂಬಾರ ಅವರಿಗೆ ಬಟ್ಟೆಗಳ ಬಾಕ್ಸ್ ಕೊಟ್ಟಿರಲಿಲ್ಲ.

Advertisements

ಇದರಿಂದ ತನಗೆ ಮೋಸವಾಗಿದೆ. ಕಂಪನಿಯವರ ನಡುವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಂದು ಅರುಣ್​ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ ಅವರು ವಿಚಾರಣೆ ನಡೆಸಿ, “ಕಂಪನಿಯವರು ಅರುಣ್​ ಅವರಿಂದ ಹಣ ಪಡೆದ ವಿಷಯವನ್ನು ಅಲ್ಲಗಳೆದಿಲ್ಲ. ಹಣ ಪಡೆದ ನಂತರ ಆ ಮೊತ್ತದ ಬಟ್ಟೆಗಳ ಬಾಕ್ಸ್‌ ಕೊಡುವುದು ಅವರ ಕರ್ತವ್ಯವಾಗಿರುತ್ತದೆ. ಬಟ್ಟೆಗಳ ಬಾಕ್ಸ್ ಸರಬರಾಜು ಮಾಡದೇ ಮೋಸ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ,” ಎಂದು ಅಭಿಪ್ರಾಯಪಟ್ಟಿದೆ.

ಸುದೀರ್ಘ ವಿಚಾರಣೆಯ ನಂತರ ಗ್ರಾಹಕರ ಆಯೋಗ ತೀರ್ಪು ನೀಡಿದ್ದು, ಒಂದು ತಿಂಗಳೊಳಗೆ ಅರುಣ್​ ಕುಂಬಾರ ಸಂದಾಯ ಮಾಡಿದ 38,640 ರೂ.ಗಳನ್ನು, ಹಣ ಕೊಟ್ಟ ದಿನದಿಂದ ಶೇ.8ರಂತೆ ಬಡ್ಡಿ ಸೇರಿಸಿ ಪೂರ್ತಿ ಹಣ ಸಂದಾಯ ಮಾಡುವಂತೆ ಆದೇಶಿಸಿದೆ. ಅರುಣ್​ ಅವರಿಗಾದ ಅನಾನುಕೂಲ ಮತ್ತು ಮಾನಸಿಕ ತೊಂದರೆಗಾಗಿ 10ಸಾವಿರ ರೂ. ಪರಿಹಾರ ಮತ್ತು ಪ್ರಕರಣದ ಖರ್ಚು ಐದು ಸಾವಿರ ರೂ. ಕೊಡುವಂತೆ ಆಯೋಗ ತೀರ್ಪು ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X