ವಿಜಯಪುರ | ನೇರ ನೇಮಕವಾದರೂ ಬೇಕು ಸಿಂಧುತ್ವ; ಶಿಕ್ಷಕ ಅಭ್ಯರ್ಥಿಗಳ ಪ್ರತಿಭಟನೆ

Date:

Advertisements

ಜಿಪಿಟಿ ಶಿಕ್ಷಕರ ನೇಮಕಾತಿ 2022ನೇ ಸಾಲಿನಲ್ಲಿ ಸಾಮಾನ್ಯ ವರ್ಗದ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ, ನೇಮಕಾತಿ ಆದೇಶ ಪ್ರತಿ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಶಿಕ್ಷಕ ಅಭ್ಯರ್ಥಿಗಳು ಪ್ರತಿಭಟಿಸಿದ್ದಾರೆ.

ಹಿಂದುಳಿದ ವರ್ಗದ ಅಭ್ಯರ್ಥಿಗಳು ಮೀಸಲಾತಿ ಪಡೆಯದೇ ಸಾಮಾನ್ಯ ವರ್ಗದಲ್ಲಿ ಆಯ್ಕೆ ಆದರೂ, ಅಧಿಕಾರಿಗಳು ಸಿಂಧುತ್ವ ಕೇಳುತ್ತಿರುವುದನ್ನು ಪ್ರಶ್ನಿಸಿ ವಿಜಯಪುರದ ಡಿಡಿಪಿಐ ಕಚೇರಿ ಎದುರು ನೂರಾರು ಶಿಕ್ಷಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಸಾಮಾನ್ಯ ಕೆಟಗೆರಿಯಲ್ಲಿ ಆಯ್ಕೆ ಆದವರಿಗೆ ಸಿಂಧುತ್ವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿಗಳ ಆದೇಶವಿದ್ದರೂ, ಅಧಿಕಾರಿಗಳು ಸಿಂಧುತ್ವ ಕೇಳುತ್ತಿದ್ದಾರೆ. ಇದರಿಂದ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಜಿಲ್ಲೆಯ 700ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಪ್ರತಿಭಟನಾನಿರತರು.

ರಾಜ್ಯ ನಾಗರಿಕ ಸೇವಾದ ಸಾಮಾನ್ಯ ವರ್ಗದ ಹುದ್ದೆಗಳಿಗೆ ಮೀಸಲಾತಿ ಪಡೆಯದೇ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಕಡ್ಡಾಯಗೊಳಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿ ಸೂಚಿಸಿದ್ದರು.

Advertisements

ರಾಜ್ಯದ ಅನುಸೂಚಿತ ಜಾತಿಗಳು, ಬುಡಕಟ್ಟುಗಳು ಹಾಗೂ ಇತರೆ ಹಿಂದುಳಿದ ವರ್ಗಗಳ ನಿಯಮಗಳು 1992ರ ಅನ್ವಯ, ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಅಂತಿಮ ಆಯ್ಕೆ ಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯಿತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ.

ಕೆಲವೊಂದು ಸಮಸ್ಯೆಗಳನ್ನು ನಮಗೆ ತಿಳಿಸದೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೇಮಕಾತಿ ಆದೇಶ ಪ್ರತಿ ನೀಡುತ್ತಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದೆ. ತಕ್ಷಣವೇ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಡಿಡಿಪಿಐ ಮೂಲಕ ಅಭ್ಯರ್ಥಿಗಳು ಸರ್ಕಾರಕ್ಕೆ ಆಗ್ರಹಿಸಿದರು.

2022ನೇ ಸಾಲಿನ ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಸಾಮಾನ್ಯ ವರ್ಗದಲ್ಲಿ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇವರ ನೇಮಕಾತಿ ಆದೇಶ ಕೊಡುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಭಾವಿ ಶಿಕ್ಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

df00500b086548aea6fcb813041e5bf0?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X