ವೈಎಸ್‌ವಿ ದತ್ತಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನ

Date:

Advertisements
  • ಏಪ್ರಿಲ್‌ 9ಕ್ಕೆ ಅಭಿಮಾನಿಗಳ ಸಭೆ ಕರೆದ ದತ್ತ
  • ಕಡೂರಿನಲ್ಲಿ ಆನಂದ್‌ಗೆ ಮಣೆ ಹಾಕಿದ ಕಾಂಗ್ರೆಸ್

ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಹಿರಿಯ ನಾಯಕ ವೈಎಸ್‌ವಿ ದತ್ತ ಅವರು ತಮ್ಮ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಸಭೆಗೆ ಆಹ್ವಾನಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಪಕ್ಷಕ್ಕೆ ಬಂಡಾಯದ ಬಿಸಿ ತಗುಲಿದೆ. ಕಾಂಗ್ರೆಸ್ ಟಿಕೆಟ್ ಸಿಗಬಹುದು ಎನ್ನುವ ಭಾರೀ ನಿರೀಕ್ಷೆಯೊಂದಿಗೆ ದತ್ತ ಅವರು ಜೆಡಿಎಸ್‌ ತೊರೆದು ಕೈ ಹಿಡಿದಿದ್ದರು. ಆದರೆ, ಕಾಂಗ್ರೆಸ್ ಕಡೂರಿನಿಂದ ಆನಂದ್ ಅವರಿಗೆ ಟಿಕೆಟ್ ಘೊಷಿಸಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ದತ್ತಾ ಅವರು ತಮ್ಮ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ.

ದತ್ತ ಅವರು ತಮ್ಮ ಅಭಿಮಾನಿಗಳೊಂದಿಗೆ ಚರ್ಚಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ. ಬಹುತೇಕ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂಬ ಸುದ್ದಿಯೂ ಇದೆ.

Advertisements

ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿರುವ ದತ್ತ, “ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ. ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ದತ್ತಣ್ಣ, ನಮ್ಮ ದತ್ತಣ್ಣ ಎಂದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ, ನಿಮ್ಮ ಜೊತೆಗೆ ನಾನಿರಬೇಕು. ನನ್ನ ಜೊತೆಗೆ ನೀವಿರಬೇಕು ಎಂಬುದು ಅನಿವಾರ್ಯ” ಎಂದು ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೌಡಿ ಶೀಟರ್‌ ಫಯಾಜ್‌ ಜೊತೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗುಪ್ತ ಸಭೆ

“ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅಪಮಾನ. ಆದ್ದರಿಂದ ಮುಂದಿನ ನಿರ್ಧಾರ ಕೈಗೊಳ್ಳಲು ಕಡೂರು ಪಟ್ಟಣದಲ್ಲಿ ಏಪ್ರಿಲ್ 9ರಂದು ಬೆಳಗ್ಗೆ 11 ಗಂಟೆಗೆ ಅಭಿಮಾನಿಗಳ ಸಭೆಗೆ ಬನ್ನಿ. ನೀವು ಬಂದು ನನಗೆ ಹಾರೈಸಬೇಕು” ಎಂದು ಆಹ್ವಾನಿಸಿದ್ದಾರೆ.

ಇತರೆ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರಿದ್ದ ಎನ್ ವೈ ಗೋಪಾಲಕೃಷ್ಣ, ದೇವರಾಜ್, ಗುಬ್ಬಿ ಶ್ರೀನಿವಾಸ್, ಪುಟ್ಟಣ್ಣ, ಎಚ್ ನಾಗೇಶ್, ವೀರೇಂದ್ರ ಪಪ್ಪಿ, ಬಾಬುರಾವ್ ಚಿಂಚನಸೂರು, ಕಾಂತರಾಜು, ಎಂ ಸಿ ಸುಧಾಕರ್, ಕಿರಣ್ ಕುಮಾರ್‌ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ, ವೈಎಸ್‌ವಿ ದತ್ತ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ.

ಇದ್ದ ಪಕ್ಷವನ್ನೂ ಬಿಟ್ಟು ಕಾಂಗ್ರೆಸ್ ಸೇರಿರುವ ವೈಎಸ್‌ವಿ ದತ್ತ ಅವರ ಮುಂದಿನ ನಡೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

ವೈಎಸ್‌ವಿ ಅವರು ಬರೆದ ಪತ್ರ ಇಲ್ಲಿದೆ..ವೈಎಸ್‌ವಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X