ಬೆಳಗಾವಿ | ಕಾಗವಾಡದಲ್ಲಿ ತಾಲೂಕು ಕಚೇರಿಗಳ ಸ್ಥಾಪನೆಗೆ ಅಧಿವೇಶನದಲ್ಲಿ ನಿರ್ಣಯ: ರಾಜು ಕಾಗೆ

Date:

Advertisements

ಬೆಳಗಾವಿ ಜಿಲ್ಲೆಯಲ್ಲಿ ಹೊಸ ತಾಲೂಕಾಗಿ ಕಾಗವಾಡ ರಚನೆಯಾಗಿ ಆರು ವರ್ಷಗಳು ಕಳೆದಿವೆ. ಆದರೂ, ಇನ್ನೂ ತಾಲೂಕು ಮಟ್ಟದ ಯಾವುದೇ ಕಚೇರಿಗಳು ಪ್ರಾರಂಭವಾಗಿಲ್ಲ. ಶೀಘ್ರವೇ ಕಚೇರಿಗಳನ್ನು ಸ್ಥಾಪಿಸುವಂತೆ ಒತ್ತಾಯಗಳು ಕೇಳಿಬಂದಿವೆ. ಈ  ಹಿನ್ನೆಲೆಯಲ್ಲಿ, ಕಚೇರಿಗಳನ್ನು ತೆರೆಯುವ ಕುರಿತು ಮುಂದಿನ ಚಳಿಗಾಲದ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸುತ್ತೇನೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.

ಕಾಗವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕು ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತದ ಅಧಿಕಾರಿಗಳ ಜತೆ ಶಾಸಕ ರಾಜು ಕಾಗೆ ಸಭೆ ನಡೆಸಿದ್ದಾರೆ. “ಈ ಹಿಂದೆಯೂ ನಾನು ಶಾಸಕನಾಗಿದ್ದಾಗ ಕಾಗವಾಡ ತಾಲೂಕು ಘೋಷಣೆಯಾಗಿತ್ತು. ಪ್ರಸ್ತುತ ಮತ್ತೆ ನಾನು ಶಾಸಕನಾಗಿದ್ದೇನೆ. ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಗಳ ಮುಖಂಡರ ನಿಯೋಗದೊಂದಿಗೆ ಮುಖ್ಯಮಂತ್ರಿ, ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡುತ್ತೇನೆ. ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

ಸಭೆಯಲ್ಲಿ ತಹಶೀಲ್ದಾರ್‌ ರಾಜೇಶ ಬುರ್ಲಿ, ಸಂಜೀವಕುಮಾರ್‌ ಸದಲಗೆ, ಮಹಾಂತೇಶ ಕವಲಾಪುರ, ಸುನೀಲ ಬಬಲಾದಿ, ಎಂ.ಎಸ್‌.ಪೂಜಾರಿ,ಪ್ರವೀಣ ಪಾಟೀಲ, ಎಂ.ಆರ್.ಮುಂಜೆ, ಕೆ.ಕೆ.ಗಾವಡೆ, ಕರವೇ ಸಂಘಟನೆಯ ಸಿದ್ದು ಒಡೆಯರ, ನ್ಯಾಯವಾದಿಗಳ ಸಂಘದ ಎಸ್‌.ಆರ್.ನಿಂಬಾಳಕರ, ಅಮರ ಕಮತೆ, ಬಿ.ಜಿ.ಮೋಳೆ ಸೇರಿದಂತೆ ಅನೇಕರು ಉಪಸ್ದಿತರಿದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X