ಬೆಂಗಳೂರು | ಐಎಂಎ ಬಹುಕೋಟಿ ಹಗರಣ: ಅಂತೂ ಸಂತ್ರಸ್ತ ಗ್ರಾಹಕರ ಕೈಸೇರಿದ ಹಣ

Date:

Advertisements

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಐಎಂಎ ಬಹುಕೋಟಿ ಹಗರಣ ಪ್ರಕರಣದಲ್ಲಿ ಹಣ ಕಳೆದುಕೊಂಡಿದ್ದ ಸಂತ್ರಸ್ತ ಗ್ರಾಹಕರಿಗೆ ಅಂತೂ ಹಣ ಕೈಸೇರಿದೆ. ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ಒಡೆತನದ ಆಸ್ತಿಗಳನ್ನು 2023ರ ಫೆಬ್ರವರಿಯಲ್ಲಿ ‘ಕಾಂಪಿಟೆಂಟ್ ಅಥಾರಿಟಿ’ ಇ-ಹರಾಜು ಪ್ರಕ್ರಿಯೆ ನಡೆಸಿತ್ತು. ಅದರಿಂದ ಬಂದ ಹಣವನ್ನು ಸಂತ್ರಸ್ತ ಗ್ರಾಹಕರ ಖಾತೆಗೆ ಹಂತ-ಹಂತವಾಗಿ ಜಮೆ ಮಾಡುತ್ತಿದೆ.

ಮನ್ಸೂರ್ ಅಲಿಖಾನ್ ಒಡೆತನದ ಐಎಂಎ ಜುವೆಲ್ಲರಿಯಲ್ಲಿದ್ದ ವಜ್ರ, ಚಿನ್ನ, ಬೆಳ್ಳಿಯನ್ನು ಜಪ್ತಿ ಮಾಡಿದ್ದ ಸರ್ಕಾರವು ಕಾಂಪಿಟೆಂಟ್ ಅಥಾರಿಟಿ ಮೂಲಕ ಇ-ಹರಾಜು ಮಾಡಿತ್ತು. ಅದರಿಂದ ಬಂದ ಒಟ್ಟು 68 ಕೋಟಿ ರೂ. ಹಣವನ್ನು ಸಂತ್ರಸ್ತ ಗ್ರಾಹಕರಿಗೆ ಹಂಚಿಕೆ ಮಾಡುತ್ತಿದೆ.

ಮರಳಿ ಹಣ ಪಡೆದ ಸಂತ್ರಸ್ತ ಗ್ರಾಹಕರ ಮೊಗದಲ್ಲಿ ಸಂತೋಷ ಕಾಣಿಸುತ್ತಿದೆ. “ನಮ್ಮ ಹಣವನ್ನು ಮರಳಿ ನೀಡುತ್ತಿರುವ ಸರ್ಕಾರಕ್ಕೆ ಧನ್ಯವಾದಗಳು. ಉಳಿದ ಹಣವನ್ನೂ ತ್ವರಿತವಾಗಿ ನೀಡಲಿ” ಎಂದು ಗ್ರಾಹಕರು ಮನವಿ ಮಾಡಿದ್ದಾರೆ.

Advertisements

ಬೆಂಗಳೂರು ಐಎಂಎ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ಜನರಲ್ಲಿ ಆಸೆ ತೋರಿಸಿ, ಹಲವರನ್ನು ಹೂಡಿಕೆಗೆ ಪ್ರೇರೇಪಿಸಲಾಗಿತ್ತು. ಹಲವರು ಅದನ್ನು ನಂಬಿ ಹೂಡಿಕೆ ಮಾಡಿದ್ದರು. ಬರೋಬ್ಬರಿ ಒಟ್ಟು 4,000 ಕೋಟಿ ರೂ. ಹಣವನ್ನು ಹೂಡಿಕೆ ಮೂಲಕ ಸಂಗ್ರಹಿಸಿದ್ದ ಐಎಂಎ ಕಂಪನಿ, ಗ್ರಾಹಕರಿಗೆ ವಂಚಿಸಿತ್ತು.

ವಂಚನೆ ಬೆಳಕಿಗೆ ಬಂದ ಬಳಿಕ ಗ್ರಾಹಕರು ಬೆಂಗಳೂರಿನ ಐಎಂಎ ಕಂಪನಿ ಎದುರು ಪ್ರತಿಭಟನೆಗಳನ್ನು ನಡೆಸಿದ್ದರು. ಆರೋಪಿ ಮನ್ಸೂರ್ ಅಲಿಖಾನ್ ಅವರನ್ನು ಪೊಲೀಸರು ಬಂಧಿಸಿದ್ದರು.

ವಂಚನೆಯ 4,000 ಕೋಟಿ ರೂ. ಹಣದಲ್ಲಿ ಸದ್ಯ ಆಭರಣಗಳ ಹರಾಜಿನಿಂದ 68 ಕೋಟಿ ರೂ. ಸಂಗ್ರಹಿಸಲಾಗಿದ್ದು, ಗ್ರಾಹಕರಿಗೆ ಸ್ವಲ್ವ ಪ್ರಮಾಣದ ಹಣವನ್ನು ವಿತರಣೆ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X