ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ: ಸಿಎಂ ಸಿದ್ದರಾಮಯ್ಯ

Date:

Advertisements
  • ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳದ ಪಾತ್ರ ದೊಡ್ಡದು
  • ಹುತಾತ್ಮರಿಗೆ ವಂದನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ. ಕಾಂಗ್ರೆಸ್ ಮತ್ತು ಸೇವಾದಳ ಮಾತ್ರ ಸಾಮಾಜಿಕ ನ್ಯಾಯ, ಹೋರಾಟ, ದೇಶದ ಸಮಗ್ರತೆ ಬಗ್ಗೆ ನಂಬಿಕೆ ಇಟ್ಟಕೊಂಡು ದೇಶವನ್ನು, ಸಮಾಜವನ್ನು ಬೆಸೆಯುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಅರಮನೆ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಸೇವಾದಳ ಶತಮಾನೋತ್ಸವ ಮತ್ತು ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

“ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡ ಚರಿತ್ರೆಯಾಗಲಿ, ಇತಿಹಾಸವಾಗಲಿ ಇಲ್ಲ. ಸೇವಾದಳ ತ್ಯಾಗ ಬಲಿದಾನಗಳ ಮೂಲಕ‌ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿತ್ತು” ಎಂದರು.

Advertisements

“ಗ್ರಾಮ ಸ್ವರಾಜ್ಯ ಮಹಾತ್ಮ ಗಾಂಧಿ ಅವರ ಕನಸು. ನೆಹರೂ ಮತ್ತು ಇಂದಿರಾಗಾಂಧಿ ಅವರ ಕಾಲದಲ್ಲಿ ಗ್ರಾಮಗಳ ಪ್ರಗತಿಗೆ ಹತ್ತಾರು ಕಾರ್ಯಕ್ರಮ ಹಮ್ಮಿಕೊಂಡರು. ನಮ್ಮ ಸರ್ಕಾರ ಕೂಡ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಚುನಾವಣೆಯಲ್ಲಿ ನಾವು ಕೊಟ್ಟ ಎಲ್ಲ ಭರವಸೆಗಳನ್ನು ಹಿಂದಿನ ಬಾರಿಯೂ ಈಡೇರಿಸಿದ್ದೇವೆ. ಈ ಬಾರಿಯೂ ಈಡೇರಿಸುತ್ತೇವೆ” ಎಂದು ತಿಳಿಸಿದರು.

“ಸೇವಾದಳ ಕಾರ್ಯಕರ್ತರ ನಿಸ್ವಾರ್ಥ ಸೇವೆಯಿಂದ, ಪ್ರಾಮಾಣಿಕ ಹೋರಾಟದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಬುಡಸಮೇತ ಕಿತ್ತೊಗೆದು ಭಾರತವನ್ನು ಕಾಪಾಡಿಕೊಳ್ಳುವ ರಾಹುಲ್ ಗಾಂಧಿ ಅವರ ಗುರಿಯನ್ನು ಸಾಧಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಸಂಸದರು, ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ವಿಚಾರಣೆಗಳಿಗೆ ವಿಶೇಷ ಪೀಠ ರಚಿಸಿ: ಸುಪ್ರೀಂ ನಿರ್ದೇಶನ

ಬಿಜೆಪಿಯವರಿಗೆ ದೇಶದ ಇತಿಹಾಸ ಗೊತ್ತಿಲ್ಲ: ಡಿಕೆಶಿ

ಬಿಜೆಪಿಯವರಿಗೆ ಈ ದೇಶದ ಇತಿಹಾಸವೇ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಈ ದೇಶದ ಇತಿಹಾಸವನ್ನು ಗೌರವಿಸಿ, ಕಾಪಾಡಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

“ಈ ದೇಶದ ಇತಿಹಾಸ ಗೊತ್ತಿಲ್ಲದವರು ಈಗ ಭಾರತ ಎಂದು ಹೆಸರು ಬದಲಾಯಿಸಲು ಹೊರಟಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬರುವ ಮುಂಚಿತವಾಗಿಯೇ, ಪಕ್ಷದ ಸಂಸ್ಥೆಗೆ ‘ಭಾರತ ಸೇವಾದಳ’ ಎಂದು ಹೆಸರಿಟ್ಟವರು ನಾವು” ಎಂದು ಅಭಿಮಾನ ವ್ಯಕ್ತಪಡಿಸಿದರು.

“ಪಕ್ಷವನ್ನು ಅಧಿಕಾರಕ್ಕೆ ತರಲು ತಳಮಟ್ಟದಿಂದ ಸೇವಾದಳದ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಈ ಸಮಾಜಕ್ಕೆ ನಾವುಗಳು ಕೊಟ್ಟು ಹೋಗಬೇಕು ಅಥವಾ ಬಿಟ್ಟು ಹೋಗಬೇಕು, ನಾವು ಭಾವನೆಯ ಜೊತೆ ಆಟವಾಡಿ ಅಧಿಕಾರಕ್ಕೆ ಬಂದಿಲ್ಲ, ಜನರ ಬದುಕಿನಲ್ಲಿ ಬದಲಾವಣೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿದ್ದೇವೆ” ಎಂದರು.

ಪ್ರಧಾನಿ ನೆಹರು ಅವರನ್ನೇ ತಡೆದಿದ್ದ ಸೇವಾದಳದ ಕಾರ್ಯಕರ್ತ

1959 ರಲ್ಲಿ ನಾಸಿಕ್‌ನಲ್ಲಿ ನಡೆದ ಸೇವಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಪ್ರಧಾನಿ ಜವಾಹರಲಾಲ್ ನೆಹರು ಅವರು ಗುರುತಿನ ಚೀಟಿ ಇಲ್ಲದೇ ಪ್ರವೇಶ ಮಾಡಿದ್ದರು. ಆಗ ಸೇವಾದಳದ ಕಾರ್ಯಕರ್ತ ಕಮಲಾಕರ ಶರ್ಮಾ ನೆಹರು ಅವರನ್ನು ತಡೆದ ಕಾರಣ, ಸುತ್ತಲಿದ್ದ ಕಾರ್ಯಕರ್ತರು ಕೋಪಗೊಂಡು, ಇವರು ಯಾರು ಗೊತ್ತಾ? ಇವರನ್ನು ತಡೆಯಲು ಎಷ್ಟು ಧೈರ್ಯ ನಿನಗೆ ಎಂದು ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡರು.

ಆಗ ಶರ್ಮಾ ಅವರು, “ಇವರು ಯಾರೆಂದು ನನಗೆ ಚನ್ನಾಗಿ ಗೊತ್ತಿದೆ. ಪ್ರಧಾನ ಮಂತ್ರಿ ಜವಹರಲಾಲ್ ನೆಹರೂ ಅವರು. ಅಂತಹ ಹಿರಿಯ ನಾಯಕರೇ ನಿಯಮ ಉಲ್ಲಂಘಿಸಬಾರದು ಎಂದು ಅವರನ್ನು ತಡೆದೆ” ಎಂದು ಉತ್ತರಿಸಿದರು. ಇದರಿಂದ ಪ್ರಭಾವಿತರಾದ ನೆಹರೂ ಅವರು ಅಂದಿನಿಂದ ಸೇವಾದಳದವರನ್ನು “ತಿರಂಗ ಕಾ ಪ್ರಹರಿ” ಅಂದರೆ “ತ್ರಿವರ್ಣ ಧ್ವಜದ ರಕ್ಷಕರು” ಎಂದು ಕರೆದರು ಎಂದು ಶಿವಕುಮಾರ್ ನೆನಪಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X