ವಿಶ್ವಕಪ್ | ಶ್ರೀಲಂಕಾ ವಿರುದ್ಧ ಗೆದ್ದು ಸೆಮಿ ಹಾದಿ ಭದ್ರಪಡಿಸಿಕೊಂಡ ಕಿವೀಸ್

Date:

Advertisements

ನ್ಯೂಜಿಲೆಂಡ್ ತಂಡ ಐಸಿಸಿ ವಿಶ್ವಕಪ್‌ ಟೂರ್ನಿಯ ತನ್ನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಅಂತರದಲ್ಲಿ ಜಯಗಳಿಸಿತು. ಈ ಗೆಲುವಿನೊಂದಿಗೆ ಕಿವೀಸ್ ಪಡೆ ತನ್ನ ಸೆಮಿ ಹಾದಿಯನ್ನು ಉತ್ತಮ ರನ್‌ರೇಟ್‌ನೊಂದಿಗೆ ಭದ್ರಪಡಿಸಿಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 172 ರನ್‌ಗಳ ಸವಾಲನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 23.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ಮುಟ್ಟಿತು.

ನ್ಯೂಜಿಲೆಂಡ್ ಪರ ಡೇರಿಲ್ ಮಿಚೆಲ್ (43), ಟೆವೊನ್‌ ಕಾನ್ವೆ (45), ರಚಿನ್‌ ರವೀಂದ್ರ (42) ಗೆಲುವಿನ ರೂವಾರಿಗಳಾದರು.

Advertisements

ಶ್ರೀಲಂಕಾ 7 ಸೋಲು ಹಾಗೂ 2 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9 ನೇ ಸ್ಥಾನದೊಂದಿಗೆ ಟೂರ್ನಿಯಿಂದ ನಿರ್ಗಮಿಸಿತು.

ಐದನೇ ಗೆಲುವಿನೊಂದಿಗೆ ಉತ್ತಮ ರನ್‌ರೇಟ್‌ನಲ್ಲಿರುವ ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನ ಸೆಮಿಫೈನಲ್‌ ಪ್ರವೇಶಿಸಬೇಕಾದರೆ ಉತ್ತಮ ರನ್‌ ಸರಾಸರಿಯಲ್ಲಿ ತನ್ನ ಎದುರಾಳಿ ತಂಡದ ವಿರುದ್ಧ ಅಮೋಘವಾಗಿ ಜಯ ಸಾಧಿಸಬೇಕಾಗಿದೆ.

ಈ ಸುದ್ದಿ ಓದಿದ್ದೀರಾ? ಒಂದೇ ಬಾಲ್‌ಗೆ ಎರಡು ವಿಕೆಟ್: ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ‘ಟೈಮ್ಡ್ ಔಟ್’ಗೆ ಮ್ಯಾಥ್ಯೂಸ್ ಔಟ್

ಈ ಮೊದಲು ಟಾಸ್‌ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್‌ ವಿಲಿಯಮ್ಸ್‌ನ್ ಶ್ರೀಲಂಕಾ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಕೇನ್‌ ವಿಲಿಯಮ್ಸನ್‌ ಲೆಕ್ಕಾಚಾರ ಕೈಹಿಡಿಯಿತು. ಚಿನ್ನಸ್ವಾಮಿಯ ಬ್ಯಾಟಿಂಗ್‌ ಪಿಚ್‌ನಲ್ಲಿ ಬ್ಯಾಟ್‌ ಬೀಸಿದ ಲಂಕಾ ಒಂದರ ಮೇಲೊಂದರಂತೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು.

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ಕಿವೀಸ್‌ ಬೌಲರ್‌ಗಳ ದಾಳಿಗೆ ತತ್ತರಿಸಿ 46.4 ಓವರ್‌ಗಳಲ್ಲಿ 171 ರನ್‌ ಗಳಿಸಿ ಆಲೌಟ್ ಆಯಿತು.

ಕುಸಾಲ್‌ ಪೆರೇರಾ (51), ಮಹೇಶ್ ತೀಕ್ಷಣ (38) ರನ್‌ ಗಳಿಸಿದ್ದನ್ಬು ಬಿಟ್ಟರೆ ಉಳಿದ ಬ್ಯಾಟ್ಸ್ಮನ್‌ಗಳ್ಯಾರು 20ರ ಗಡಿ ದಾಟಲಿಲ್ಲ.

ಕಿವೀಸ್‌ ಪರ ಬೋಲ್ಟ್‌ 3 ವಿಕೆಟ್‌ ಪಡೆದರೆ, ಫರ್ಗ್ಯಸನ್‌, ಸ್ಯಾಂಟ್ನರ್‌ ಹಾಗೂ ರವೀಂದ್ರ ತಲಾ 2 ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

Download Eedina App Android / iOS

X