ನನ್ನ ರಾಜಕೀಯ ನಿವೃತ್ತಿ ಬಗ್ಗೆ ಯಡಿಯೂರಪ್ಪನವರ ಹೇಳಿಕೆ ಅಪ್ಪಟ ಸುಳ್ಳು: ಡಿ ವಿ ಸದಾನಂದ ಗೌಡ

Date:

Advertisements

ಹೈಕಮಾಂಡ್ ಸೂಚನೆಯ ಮೇರೆಗೆ ಸದಾನಂದ ಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ ವಿ ಸದಾನಂದ ಗೌಡ, ‘ಯಡಿಯೂರಪ್ಪನವರ ಹೇಳಿಕೆ ಬೇಸರ ಉಂಟು ಮಾಡಿದೆ, ಅದು ಅಪ್ಪಟ ಸುಳ್ಳು’ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.

ಡಿ ವಿ ಸದಾನಂದ ಗೌಡ ರಾಜಕೀಯ ನಿವೃತ್ತಿ ಘೋಷಿಸಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ, ‘ಸದಾನಂದ ಗೌಡರು ಚುನಾವಣಾ ರಾಜಕೀಯ ಮಾತ್ರ ತೊರೆಯಲಿದ್ದಾರೆ. ಅದು ಹೈಕಮಾಂಡ್ ಕೂಡ ಸೂಚಿಸಿತ್ತು. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಅವರು ಇನ್ನು ಮುಂದೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ’ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯ ಬಗ್ಗೆ ಖಾಸಗಿ ಮಾಧ್ಯಮವೊಂದರ ಪ್ರತಿನಿಧಿಯ ಜೊತೆಗೆ ಮಾತನಾಡಿದ ಡಿ ವಿ ಸದಾನಂದ ಗೌಡ, ನಮ್ಮ ಪಕ್ಷದವರೇ ಆದ ಬಿ ಎಸ್ ಯಡಿಯೂರಪ್ಪ ದೊಡ್ಡ ರಾಜಕಾರಣಿ. ಅವರು ಈ ರೀತಿಯ ಸುಳ್ಳುಗಳನ್ನು ಹೇಳುವಂಥದ್ದು ಅದು ಒಳ್ಳೆಯದಲ್ಲ. ನನಗೆ ಬಹಳ ಬೇಸರವಾಗಿದೆ’ ಎಂದು ತಿಳಿಸಿದ್ದಾರೆ.

Advertisements

Sadaananda gowda

‘ನನ್ನ ನಿವೃತ್ತಿ ಬಗ್ಗೆ ಎಲ್ಲಿ ಬೇಕಾದರೂ ಪ್ರಮಾಣ ಮಾಡಿ ಹೇಳ್ತೀನಿ. ಯಡಿಯೂರಪ್ಪ ಏಕಾಏಕಿಯಾಗಿ ಈ ರೀತಿ ಹೇಳಬಾರದಿತ್ತು. ಪ್ರಾಯಶಃ ಅವರಿಗೆ ಈ ಹಿಂದೆ ಹೈಕಮಾಂಡ್‌ನವರು ಈ ಹಿಂದೆ ಅವರಿಗೆ ಈ ರೀತಿಯ ಎಚ್ಚರಿಕೆ ನೀಡಿ, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ಹೇಳಿರಬಹುದು.ಅದೇ ರೀತಿ ನನಗೂ ಹೇಳಿರಬಹುದೆಂದು ಭಾವಿಸಿ, ಹೇಳಿಕೆ ನೀಡಿರಲೂಬಹುದು. ಆದರೆ, ಅವರ ಈ ಹೇಳಿಕೆ ನನಗೆ ಬಹಳ ಬೇಸರ ಉಂಟು ಮಾಡಿದೆ.

‘ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ನನಗೆ ತಿಳಿಸಿದಾಗ ನೇರವಾಗಿ ರಾಜೀನಾಮೆ ಕೊಡಲು ಒಪ್ಪಿಕೊಂಡಿದ್ದೆ. ನಾನು ರಾಜೀನಾಮೆ ನೀಡಬಾರದು ಅಂತ ಸುಮಾರು 65 ಶಾಸಕರು ನನ್ನ ಕಾರಿಗೆ ಅಡ್ಡ ಮಲಗಿದ್ದರು. ಮನೆಯಲ್ಲಿ ಸಭೆ ಕೂಡ ಸೇರಿದ್ದರು. ನಾನು ಮುಖ್ಯಮಂತ್ರಿ ಸ್ಥಾನ ಬಿಡುವಾಗ ಕಣ್ಣೀರು ಹಾಕಿರಲಿಲ್ಲ. ನಾನು ಯಾವುದೇ ಭ್ರಷ್ಟಾಚಾರದಲ್ಲೂ ತೊಡಗಲಿಲ್ಲ. ನಾನು ಯಾವತ್ತಿಗೂ ಸ್ವಾಭಿಮಾನದ ರಾಜಕೀಯ ನಡೆಸಿದ್ದೇನೆಯೇ ಹೊರತು ಇನ್ನೊಬ್ಬನ ಕೈಗೊಂಬೆಯಾಗಿ ಕೆಲಸ ಮಾಡಲಿಲ್ಲ. ನನ್ನ ರಾಜಕೀಯ ನಿವೃತ್ತಿಗೆ ಹೈಕಮಾಂಡ್ ಸೂಚಿಸಿತ್ತು ಎನ್ನುವುದು ಅಪ್ಪಟ ಸುಳ್ಳು. ಯಡಿಯೂರಪ್ಪನವರು ಈ ರೀತಿಯ ಹೇಳಿಕೆ ನೀಡುವುದು ಸೂಕ್ತವಲ್ಲ ಎಂಬುದು ನನ್ನ ಅಭಿಪ್ರಾಯ’ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಮಾಜಿ ಸಿಎಂ ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.

ಕಳೆದ ವಿಧಾನಸಭೆಯ ಫಲಿತಾಂಶದ ಬಳಿಕ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ರಾಜ್ಯದಲ್ಲಿ ವಿಪಕ್ಷವಾಗಿರುವ ಬಿಜೆಪಿ ಇನ್ನೂ ಕೂಡ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡಿಲ್ಲ. ಈ ನಡುವೆ ಮುಂಬರುವ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭವಾಗುತ್ತಿದ್ದರೂ ಪಕ್ಷದ ಹಿರಿಯ ನಾಯಕರೊಳಗಡೆಯೇ ಈ ರೀತಿಯ ಬೆಳವಣಿಗೆ ನಡೆದಿರುವುದು ವಿವಾದ ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ಏನೆಲ್ಲ ಬೆಳವಣಿಗೆ ನಡೆಯಲಿದೆ ಎಂದು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X