ಗದಗ | ಪೌರ ಕಾರ್ಮಿಕರಿಗೆ ʼಭೀಮಾಶ್ರಮʼ ಕೊಠಡಿ ನಿರ್ಮಿಸಲು ಒತ್ತಾಯ

Date:

Advertisements

ಹುಬ್ಬಳ್ಳಿಯ ಪೂರ್ವ ವಿಭಾಗದ ಶಾಸಕ ಪ್ರಸಾದ ಅಬ್ಬಯ್ಯ ಅವರು ನಗರವನ್ನು ಸ್ವಚ್ಛಗೊಳಸುವ ಪೌರ ಕಾರ್ಮಿಕರ ವಿಶ್ರಾಂತಿಗಾಗಿ ಭೀಮಾಶ್ರಯ ಎಂಬ ಕೊಠಡಿಯನ್ನು ನಿರ್ಮಿಸಿದ್ದಾರೆ. ಇದೇ ಮಾದರಿಯಲ್ಲಿ ಗದಗ ಪಟ್ಟಣದಲ್ಲಿ ‘ಭೀಮಾಶ್ರಮ’ ಕೊಠಡಿ ನಿರ್ಮಿಸಬೇಕು ಎಂದು ಹೋರಾಟಗಾರ ಮುತ್ತು ಬಿಳಿಯಲಿ ಆಗ್ರಹಿಸಿದ್ದಾರೆ.

ಗದಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಗದಗ ನಗರದಲ್ಲಿ ನಡೆದ ಕರ್ನಾಟಕ ಸುವರ್ಣ ಮಹೋತ್ಸವ 50ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಆ ವಿಜೃಂಭಣೆಗೆ ಮೂಲ ಕಾರಣ, ಪೌರ ಕಾರ್ಮಿಕರು. ಅವರು ಸತತ ಒಂದು ತಿಂಗಳಿನಿಂದ ಇಡೀ ನಗರವನ್ನು ಸ್ವಚ್ಛಗೊಳಸಿ ಗದಗ ನಗರದ ಮೆರುಗನ್ನ ಬದಲಾಯಿಸಿದ್ದಾರೆ. ಮೂರು ದಿನಗಳು ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಕನಿಷ್ಠ ಪಕ್ಷ ವೇದಿಕೆಯಲ್ಲಾದರೂ ನಮ್ಮ ಪೌರ ಕಾರ್ಮಿಕರಿಗೆ ಅಭಿನಂದನೆಯ ಮಾತುಗಳನ್ನಾಡಿದ್ದರೂ ಸಾಕಾಗಿತ್ತು. ಅದ್ಯಾವುದು ಆಗಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಪೌರ ಕಾರ್ಮಿಕರಿಗೆ ಸುರಕ್ಷಿತ ಪರಿಕರಗಳನ್ನ ಕೊಡದೆ, ಅವರನ್ನು ದುಡಿಸಿಕೊಳ್ಳುತ್ತಿರುವುದರಿಂದ ಅನೇಕ ಆರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕನಿಷ್ಠ ಮೂರು ತಿಂಗಳಿಗೊಮ್ಮೆ ಆರೊಗ್ಯ ತಪಾಸಣೆ ಮಾಡಬೇಕು. ಭೀಮಾಶ್ರಯ ಕೊಠಡಿ ನಿರ್ಮಾಣ ಮಾಡುವುದರಿಂದ ಅಲ್ಲಿ ಪೌರಕಾರ್ಮಿಕರು ವಿಶ್ರಾಂತಿ ತೆಗದುಕೊಳ್ಳಲು ಅನುಕೂಲವಾಗುತ್ತದೆ ಎಂದರು.

Advertisements

ಈಗಲಾದರೂ ಜಿಲ್ಲಾಡಳಿತ ದಲಿತ, ಅಲ್ಪಸಂಖ್ಯಾತ ಹಾಗೂ ಬಡವರ ಮೇಲೆ ವಿಶೇಷ ಕಾಳಜಿ ಇರುವ ನಮ್ಮ ಸಚಿವರಾದ ಡಾ. ಎಚ್.ಕೆ. ಪಾಟೀಲ್ ಅವರು ನಮ್ಮ ಪೌರ ಕಾರ್ಮಿಕರ ವಿಶ್ರಾಂತಿಗಾಗಿ ಕನಿಷ್ಠ ಎರಡು ಭೀಮಾಶ್ರಯ ಕೊಠಡಿಯನ್ನು ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X