ಗದಗ | ಜಿಮ್ಸ್ ನಿರ್ದೇಶಕರನ್ನು ವಜಾಗೊಳಿಸಿ; ದಲಿತಪರ ಸಂಘಟನೆಗಳ ಒಕ್ಕೂಟ ಒತ್ತಾಯ

Date:

Advertisements

ಜಿಮ್ಸ್ ನಿರ್ದೇಶಕರಾದ ಬಸವರಾಜ ಬೊಮ್ಮನಹಳ್ಳಿ ಅವರನ್ನು ಸೇವೆಯಿಂದ ವಜಾಗೊಳಿಸಲು ದಲಿಪರ ಸಂಘಟನೆಗಳ ಒಕ್ಕೂಟ ಮತ್ತು ಮಾನವ ಬಂದುತ್ವ ವೇದಿಕೆ ಸಹಯೋಗದಲ್ಲಿ ಶಿರಹಟ್ಟಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.

ಮನವಿ ಸಲ್ಲಿಸಿ ಮಾತನಾಡಿದ ದಲಿತಪರ ಮುಖಂಡ ದೇವರಾಜ ಕಟ್ಟಿಮನಿ, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗದಗದ ಜಿಮ್ಸ್‌ ಪಕ್ಕದಲ್ಲಿರುವ, ಆಸ್ಪತ್ರೆಯ ಉದ್ಘಾಟನೆಯ ಸಲುವಾಗಿ ಆಗಮಿಸಿದಾಗ, ಅವರಿಗೆ ಬಿ.ಆರ್. ಅಂಬೇಡ್ಕರವರ ಭಾವಚಿತ್ರ ನೀಡಲು ದಲಿತ ಸಿಬ್ಬಂದಿಗಳು ಹೋದಾಗ, ಜಿಮ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ ಅವರು ದಲಿತ ಸಮುದಾಯವನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಅಪಚಾರ, ಪದಗಳಿಂದ ಗದರಿಸಿ ಹೊರಗೆ ಹೋಗುವಂತೆ ಬೆದರಿಸಿದ್ದಾರೆ” ಎಂದರು.

“ನೀವು ಈ ಕಾರ್ಯಕ್ರಮದಲ್ಲಿ ಅಂತಹ ಯಾವುದೇ ಫೋಟೋವನ್ನು ಸಿದ್ದರಾಮಯ್ಯನವರಿಗೆ ಕೊಡತಕ್ಕದ್ದಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಸಮುದಾಯದವರಿಗೆ ಅನ್ಯಾಯ ಮತ್ತು ಅಪಚಾರವನ್ನು ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಈ ಮೂಲಕ ಅಗ್ರಹಿಸುತ್ತಿದ್ದೇವೆ, ಇಲ್ಲವಾದಲ್ಲಿ ಗದಗ ಜಿಲ್ಲಾದ್ಯಂತ ದಲಿತ ಸಮುದಾಯದವರೆಲ್ಲ ಸೇರಿಕೊಂಡು ತಮ್ಮ ಕಚೇರಿಯ ಮುಂದೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ” ಎಂದರು.

Advertisements

ಈ ಸಂದರ್ಭದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟ ಮತ್ತು ಮಾನವ ಬಂದುತ್ವ ವೇದಿಕೆಯ ಕಾರ್ಯಕರ್ತರು, ದಲಿತಪರ ಹೋರಾಟಗಾರರು, ಮತ್ತಿತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X