ಯಾದಗಿರಿ | ‘ಬುದ್ಧ ಮಲಗಿದ ಬೆಟ್ಟ’ ಯೋಜನೆ ತ್ವರಿತ ಅನುಷ್ಠಾನಕ್ಕೆ ಆಗ್ರಹ

Date:

Advertisements

ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ವಿಶ್ವ ಪ್ರಸಿದ್ಧ ಪ್ರವಾಸೋದ್ಯಮ ತಾಣವಾದ ‘ಬುದ್ಧ ಮಲಗಿದ ಬೆಟ್ಟ’ದ ಯೋಜನೆಯನ್ನು ಜನೋಪಯೋಗಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಾಹಾಸಭಾದ ಮುಖಂಡರು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

“ಬುದ್ಧ ಮಲಗಿದ ಬೆಟ್ಟವು ಕರ್ನಾಟಕ ರಾಜ್ಯಕ್ಕೆ ವಿಶ್ವಮಟ್ಟದ ಖ್ಯಾತಿ ತಂದುಕೊಟ್ಟ ನಿಸರ್ಗದ ಅದ್ಭುತ ಪ್ರವಾಸಿತಾಣವಾಗಿದೆ. ಸಗರಾದ್ರಿ ಬೆಟ್ಟದಲ್ಲಿರುವ ಪ್ರಾಚೀನ, ಐತಿಹಾಸಿಕ, ಸಾಂಸ್ಕೃತಿಕ ನೆಲೆಗಳು, ಬೌದ್ಧ, ಶೈವ, ವೈಷ್ಣವ, ಸೂಫಿ ಶರಣ ಪರಂಪರೆಯ ಕುರುಹುಗಳ ತಾಣವಾಗಿದೆ. ಇಲ್ಲಿನ ಪರಿಸರ ಖನಿಜ, ಸಸ್ವರಾಶಿ, ಜೀವಸಂಪತ್ತು ಸಹ ವೈಶಿಷ್ಟಪೂರ್ಣವಾಗಿದೆ” ಎಂದು ಮಹಾಸಭಾ ಹೇಳಿದೆ.

“ಸರ್ಕಾರವು ಬುದ್ಧ ಮಲಗಿದ ಬೆಟ್ಟವನ್ನು ಪ್ರವಾಸಿತಾಣವೆಂದು ಘೋಷಿಸಿ ಕೋಟ್ಯಾಂತರ ರೂಪಾಯಿ ಅನುದಾನ ಖರ್ಚುಮಾಡುತ್ತಾ ಬಂದಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷತನದಿಂದ ಈ ತಾಣದ ಅಭಿವೃದ್ಧಿ ಯೋಜನೆ ದಶಕಗಳಿಂದ ತೆವಳುತ್ತಿದೆ. ಅಲ್ಲದೆ, ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಕಳಪೆ ಕಾಮಗಾರಿಗಳು ಸಾಕ್ಷಿಯಾಗಿವೆ. ಇಲ್ಲಿನ ಅವ್ಯವಸ್ಥೆ ಮತ್ತು ಕಾನೂನು ಬಾಹಿರ ಜನವಿರೋಧಿ ಚಟುವಟಿಕೆಗಳ ಬಗ್ಗೆ ಹಲವಾರು ಸಂಘ ಸಂಸ್ಥೆಗಳು ಹಲವು ಭಾರಿ ಮನವಿ ಸಲ್ಲಿಸಿದರು. ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ” ಎಂದು ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

ಮನವಿ ಸಲ್ಲಿಸುವ ವೇಳೆ ಸುರೇಶ ಎಸ್, ವೆಂಕಟೇಶ್‌ ಹೊಸಮನಿ, ರಣವೀರ ಹೊಸಮನಿ, ಬುದ್ಧಘೋಷ ದೇವಿಂದ್ರ ಹೆಗಡೆ, ಬಾಬುರಾವ್ ಭೂತಾಳಿ, ಮಲ್ಲಣ್ಣ ಕುರಕುಂದಿ, ಬಸವರಾಜ ಗುಡಿಮನಿ, ವಿಶ್ವ ನಾಟೇಕರ್ ಇದ್ದರು.

ವರದಿ: ಮಿಲಿಂದ್ ಸಾಗರ, ಸಿಟಿಜನ್ ಜರ್ನಲಿಸ್ಟ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X