ಸುಸ್ಥಿರ ನಗರಗಳ ಜಾಗತಿಕ ಸ್ಪರ್ಧೆಯಲ್ಲಿ ಬೆಂಗಳೂರು ಆಯ್ಕೆ

Date:

Advertisements

“ಟೊಯೋಟಾ ಮೊಬಿಲಿಟಿ ಫೌಂಡೇಶನ್ ಜಾಗತಿಕವಾಗಿ ನಡೆಸಿದ ಸುಸ್ಥಿರ ನಗರಗಳ ಸ್ಪರ್ಧೆಯಲ್ಲಿ ಬೆಂಗಳೂರು ಆಯ್ಕೆಯಾಗಿರುವುದು ನಮಗೆಲ್ಲ ಹೆಮ್ಮೆ ತರಿಸಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಬಿಎಂಪಿ, “ವಿಶ್ವದ  46 ನಾನಾ ದೇಶಗಳ 150 ನಗರಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಅದರಲ್ಲಿ ಬೆಂಗಳೂರು ಸೇರಿದಂತೆ 10 ನಗರಗಳನ್ನು ಈ ಸುಸ್ಥಿರ ನಗರಗಳ ಸ್ಪರ್ಧೆಯಲ್ಲಿ ಆಯ್ಕೆ ಮಾಡಲಾಗಿದೆ” ಎಂದು ಹೇಳಿದೆ.

“ಸಂಚಾರ ದಟ್ಟಣೆ ನಿರ್ವಹಣೆ, ಮೂಲಭೂತ ಸೌಕರ್ಯಗಳ ಆಧುನೀಕರಣ, ಅಪಘಾತಗಳ ತಡೆಗಟ್ಟುವ ಸಲುವಾಗಿ ಬ್ರ್ಯಾಂಡ್ ಬೆಂಗಳೂರು, ಸುಗಮ ಸಂಚಾರ ಬೆಂಗಳೂರು ವರದಿಯಂತೆ ಬೆಂಗಳೂರಿನ ಸಂಚಾರ ವ್ಯವಸ್ಥೆಯ ಆಧುನೀಕರಣಕ್ಕೆ ಟೊಯೋಟಾ ಮೊಬಿಲಿಟಿ ಫೌಂಡೇಶನ್ ಮುಂದಿನ 5 ವರ್ಷಗಳವರೆಗೆ ಸಹಾಯ ಮಾಡಲಿದೆ” ಎಂದು ಮಾಹಿತಿ ನೀಡಿದೆ.

Advertisements

“ಪಾದಚಾರಿಗಳಿಗೆ, ಸೈಕಲ್ ಬಳಕೆದಾರರಿಗೆ ಸುರಕ್ಷತೆ ಒದಗಿಸುವುದು ಮತ್ತು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಬಳಸಿಕೊಳ್ಳುವ ಮೂಲಕ ಸುಗಮ ಸಂಚಾರಕ್ಕೆ ಹೊಸ ವ್ಯವಸ್ಥೆ ಮಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರೆಷರ್ ಕುಕ್ಕರ್‌ನಲ್ಲಿ ಡ್ರಗ್ಸ್‌ ತಯಾರು ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

ಸ್ಪರ್ಧೆಯಲ್ಲಿ ಆಯ್ಕೆಗೊಂಡ 10 ನಗರಗಳು

  • ಡೆಟ್ರಾಯಿಟ್, ಯುನೈಟೆಡ್ ಸ್ಟೇಟ್ಸ್
  • ಫೋರ್ಟಲೆಜಾ, ಬ್ರೆಜಿಲ್
  • ಮೆಡೆಲಿನ್, ಕೊಲಂಬಿಯಾ
  • ಮೆಕ್ಸಿಕೋ ಸಿಟಿ, ಮೆಕ್ಸಿಕೋ
  • ನ್ಯೂ ಓರ್ಲಿಯನ್ಸ್, ಯುನೈಟೆಡ್ ಸ್ಟೇಟ್ಸ್
  • ಸೆಬೆರಾಂಗ್ ಪೆರೈ, ಮಲೇಷ್ಯಾ
  • ವಾರಣಾಸಿ, ಭಾರತ
  • ವೆನಿಸ್, ಇಟಲಿ
  • ಯಾರ್ಕ್, ಯುನೈಟೆಡ್ ಕಿಂಗ್ಡಮ್
  • ಬೆಂಗಳೂರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X