ಸರ್ಕಾರದ ಹಸ್ತಕ್ಷೇಪ ಆರೋಪ: ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನೇ ವಜಾಗೊಳಿಸಿದ ಐಸಿಸಿ!

Date:

Advertisements

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್​ಗೆ ಅರ್ಹತೆ ಪಡೆಯಲು ವಿಫಲವಾಗಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶ್ರೀಲಂಕಾ ಕ್ರಿಕೆಟ್​ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

ಶ್ರೀಲಂಕಾ ಸರ್ಕಾರ ಕ್ರೀಡಾ ಮಂಡಳಿಯಲ್ಲಿ ನಿರಂತರ ಹಸ್ತಕ್ಷೇಪ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಐಸಿಸಿ ತಿಳಿಸಿದೆ.

Advertisements

ಐಸಿಸಿಯ ಉನ್ನತ ಮಂಡಳಿಯು ಶುಕ್ರವಾರ ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಂಡಿದೆ. ಜೊತೆಗೆ ಶ್ರೀಲಂಕಾ ಕ್ರಿಕೆಟ್ ಸದಸ್ಯರಾಗಿ ಅದರ ಜವಾಬ್ದಾರಿಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ ಎನ್ನುವುದನ್ನು ಖಚಿತಪಡಿಸಿದೆ.

ಶ್ರೀಲಂಕಾದಲ್ಲಿ ಕ್ರಿಕೆಟ್ ಹಾಗೂ ಅದರ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸುವ ಅವಶ್ಯಕತೆ ಮತ್ತು ಆಡಳಿತ, ನಿಯಂತ್ರಣ ಅಥವಾ ಆಡಳಿತದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿರಬಾರದು ಎನ್ನುವ ಅಗತ್ಯವನ್ನು ಪೂರೈಸುವಲ್ಲಿ ಮಂಡಳಿ ವಿಫಲವಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

371039.6

ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ. ನವೆಂಬರ್‌ 21 ರಂದು ಐಸಿಸಿ ಮತ್ತೆ ಸಭೆ ಸೇರಲಿದೆ. ಸಭೆಯ ನಂತರ ಮುಂದಿನ ಕ್ರಮವು ಸ್ಪಷ್ಟವಾಗುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಐಸಿಸಿ ಸಂಘಟಿಸುವ ಯಾವುದೇ ಟೂರ್ನಿಯಲ್ಲಿ ಶ್ರೀಲಂಕಾ ಭಾಗವಹಿಸಲು ಅವಕಾಶ ಇಲ್ಲ‌.

2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡ 9 ಪಂದ್ಯಗಳ ಪೈಕಿ ಕೇವಲ 2ರಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 4 ಅಂಕ ಪಡೆದುಕೊಂಡಿತ್ತು. ಬ್ಯಾಟಿಂಗ್‌ ಬೌಲಿಂಗ್‌ ಹಾಗೂ ಕಳಪೆ‌ ಫೀಲ್ಡಿಂಗ್‌ನಿಂದಾಗಿ ವಿಶ್ವಕಪ್‌ನಲ್ಲಿ ಸೋಲು ಅನುಭವಿಸಿದೆ.

ಈ ನಡುವೆ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಿರಿಯ ಆಟಗಾರ ಆ್ಯಂಜೆಲೋ ಮ್ಯಾಥ್ಯೂಸ್‌ ‘ಟೈಮ್ಡ್ ಔಟ್’ ವಿವಾದವು ಭಾರೀ ಸುದ್ದಿಯಾಗಿತ್ತು.

ಶ್ರೀಲಂಕಾದ ಎಲ್ಲ ಲೀಗ್‌ ಪಂದ್ಯಗಳು ಮುಗಿದ ಹಿನ್ನೆಲೆಯಲ್ಲಿ ಶ್ರೀಲಂಕಾ ತಂಡ ತವರಿಗೆ ಮರಳಿದೆ.

ಏಕದಿನ ವಿಶ್ವಕಪ್‌ನಲ್ಲಿ ಶ್ರೀಲಂಕಾದ ಹೀನಾಯ ಪ್ರದರ್ಶನವು “ಹೊರಗಿನ ಪಿತೂರಿಯ ಫಲಿತಾಂಶ” ಎಂದು ಮುಖ್ಯ ಆಯ್ಕೆಗಾರ ಪ್ರಮೋದಯ ವಿಕ್ರಮಸಿಂಘೆ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X