ನಮ್ಮ ಮೆಟ್ರೋ | ರಿಯಾಯಿತಿ ದರದಲ್ಲಿ ನ.16 ರಿಂದ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್‌ ಪರಿಚಯ

Date:

Advertisements

ವಿಶ್ವದಲ್ಲಿ ವಾಹನ ಸಂಚಾರ ದಟ್ಟಣೆಗೆ ರಾಜಧಾನಿ ಬೆಂಗಳೂರು ಕುಖ್ಯಾತಿ ಗಳಿಸಿದೆ. ಸದ್ಯ ನಗರದಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆಯನ್ನು ನಿಭಾಯಿಸುವಲ್ಲಿ ‘ನಮ್ಮ ಮೆಟ್ರೋ’ ಪಾತ್ರ ಬಹುದೊಡ್ಡದಾಗಿದೆ. ನಿತ್ಯ ಮೆಟ್ರೋದಲ್ಲಿ 7 ಲಕ್ಷಕ್ಕೂ ಹೆಚ್ಚು ಜನ ಸಂಚರಿಸುತ್ತಿದ್ದಾರೆ. ಹೆಚ್ಚು ಜನಸಂದಣಿ ಇರುವ ನಮ್ಮ ಮೆಟ್ರೋದಲ್ಲಿ ಟಿಕೆಟ್‌ ಖರೀದಿಗಾಗಿ ಜನರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮುಂದಾಗಿದ್ದು, ಟೋಕನ್‌ ದರಕ್ಕಿಂತ ಶೇ.5 ರಿಯಾಯಿತಿಯಲ್ಲಿ ನವೆಂಬರ್ 16 ರಿಂದ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್‌ಗಳ ಪರಿಚಯ ಮಾಡಲಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಪ್ರಸ್ತುತ ಮೊಬೈಲ್ ಕ್ಯೂಆರ್ ಟಿಕೆಟ್‌ಗಳನ್ನು ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ (ನಮ್ಮ ಮೆಟ್ರೋ, ಪೇಟಿಎಂ, ವಾಟ್ಸ್‌ಆಪ್ ಮತ್ತು ಯಾತ್ರಾ) ಒಬ್ಬ ಪ್ರಯಾಣಿಕನಿಗೆ ಒಂದು ಪ್ರಯಾಣಕ್ಕೆ ನೀಡಲಾಗುತ್ತಿದೆ” ಎಂದು ಹೇಳಿದೆ.

“ಆದರೆ, ಪ್ರಯಾಣಿಕರ ಬೇಡಿಕೆಯ ಆಧಾರದ ಮೇಲೆ ನ.16 ರಿಂದ ಜಾರಿಗೆ ಬರುವಂತೆ ಒಮ್ಮೆ ಆರು ಜನರ ಕುಟುಂಬ/ಗುಂಪು ಪ್ರಯಾಣಿಸಲು ಅನುಕೂಲವಾಗುವಂತೆ ಮೊಬೈಲ್ ಕ್ಯೂಆರ್ ಟಿಕೆಟ್‌ಗಳನ್ನು ಪರಿಚಯಿಸುತ್ತಿದೆ. ಮೊಬೈಲ್ ಕ್ಯೂಆರ್ ಟಿಕೆಟ್‌ಗಳು ಟೋಕನ್ ದರಕ್ಕಿಂತ ಶೇ.5 ರಿಯಾಯಿತಿಯನ್ನು ಹೊಂದಿರುತ್ತವೆ” ಎಂದು ತಿಳಿಸಿದೆ.

Advertisements

“ಈ ಸೌಲಭ್ಯವನ್ನು ಬಳಸುವ ಪ್ರಯಾಣಿಕರು ಪ್ರಯಾಣಿಕರ ಸಂಖ್ಯೆ, ಎನ್‌ಕ್ರಿಪ್ಟ್ ಮಾಡಿದ ಒಂದು ಕ್ಯೂಆರ್ ಟಿಕೆಟ್ ಅನ್ನು ಸ್ವೀಕರಿಸುತ್ತಾರೆ. ಬಳಕೆಗಾಗಿ, ಈ ಕ್ಯೂಆರ್ ಟಿಕೆಟ್ ಅನ್ನು ಗುಂಪಿನ ಪ್ರತಿ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನಕ್ಕಾಗಿ ಎಫ್ ಸಿ ಗೇಟ್‌ಗಳಲ್ಲಿ ಸ್ಕ್ಯಾನ್ ಮಾಡಬೇಕು” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಎರಡು ಬೈಕ್ ಮುಖಾಮುಖಿ ಢಿಕ್ಕಿ; ಇಬ್ಬರು ಸಾವು

“ಟಿಕೆಟ್ ಕೌಂಟರ್‌ಗಳಲ್ಲಿ ಟೋಕನ್‌ಗಳನ್ನು ಖರೀದಿಸಲು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು, ಪಯಾಣಿಕರು ತಮ್ಮ ಅನೂಕೂಲಕ್ಕೆ ತಕ್ಕಂತೆ ಮನೆ/ಕಚೇರಿಯಿಂದ ಮುಂಗಡವಾಗಿ ಮೊಬೈಲ್ ಕ್ಯೂಆರ್ ಟಿಕೆಟ್‌ಗಳನ್ನು ಪಡೆಯಬಹುದು” ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X