ಕೇಂದ್ರದ ಐಟಿ ನಿಯಮಗಳ ತಿದ್ದುಪಡಿ ಸೆನ್ಸಾರ್‌ಶಿಪ್‌ಗೆ ಸಮಾನ: ಎಡಿಟರ್ಸ್‌ ಗಿಲ್ಡ್‌ ಕಳವಳ

Date:

Advertisements
  • ಐಟಿ ತಿದ್ದುಪಡಿ ವಿರೋಧಿಸಿ ಎಡಿಟರ್ಸ್‌ ಗಿಲ್ಡ್‌ ಕೇಂದ್ರ ಸರ್ಕಾರಕ್ಕೆ ಪತ್ರ
  • ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ ಐಟಿ ನಿಯಮಗಳ ತಿದ್ದುಪಡಿ ವಿರೋಧ

ಕೇಂದ್ರ ಸರ್ಕಾರ ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ತಿದ್ದುಪಡಿ ಮಾಡಿ ‘ಫ್ಯಾಕ್ಟ್‌ಚೆಕ್‌ ಸಂಸ್ಥೆ’ ರಚಿಸಲು ನಿರ್ಧರಿಸಿರುವುದು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತದೆ. ಇಂಥ ನಡೆ ಸ್ವಾಭಾವಿಕ ನ್ಯಾಯಕ್ಕೆ ವಿರುದ್ಧ ಮತ್ತು ಸೆನ್ಸಾರ್‌ಶಿಪ್‌ಗೆ ಸಮಾನ ಎಂದು ಭಾರತದ ಸಂಪಾದಕರ ಒಕ್ಕೂಟ (ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ) ಶುಕ್ರವಾರ (ಏಪ್ರಿಲ್‌ 7) ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಗುರುವಾರ (ಏಪ್ರಿಲ್‌ 6) ವಿವಾದಾತ್ಮಕ 2021ರ ಐಟಿ ನಿಯಮಗಳು ಕಾಯಿದೆಗೆ ಹೊಸ ತಿದ್ದುಪಡಿ ತಂದಿದೆ. ಈ ತಿದ್ದುಪಡಿಗೆ ಗಿಲ್ಡ್‌ ಆಕ್ಷೇಪ ವ್ಯಕ್ತಪಡಿಸಿದೆ.

ಸತ್ಯಶೋಧನಾ ಸಂಸ್ಥೆ ತಪ್ಪು ಮಾಹಿತಿಯನ್ನು ಪತ್ತೆಹಚ್ಚಲು ಉದ್ದೇಶಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ದುರುದ್ದೇಶಪೂರಿತವಾಗಿ ಸತ್ಯಶೋಧನೆಯ ಹೆಸರಿನಲ್ಲಿ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಕಿರುಕುಳ ನೀಡುವ ಸಾಧ್ಯತೆಯ ಬಗ್ಗೆ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ.

Advertisements

ಸರ್ಕಾರದ ಕುರಿತ ಸುದ್ದಿಗಳನ್ನು ಸ್ವತಃ ಸರ್ಕಾರವೇ ಪರಿಶೀಲಿಸಿ ‘ಸತ್ಯ’ ಅಥವಾ ‘ಸುಳ್ಳು’ ಎಂದು ನಿರ್ಧರಿಸಿ ಯಾವುದೇ ಮಾಧ್ಯಮ ಸಂಸ್ಥೆಯಿಂದ ಪ್ರಕಟವಾದ ಸುದ್ದಿ, ಲೇಖನಗಳು ಅಥವಾ ವಿಡಿಯೊಗಳನ್ನು ಪ್ರಕಟಣೆಯಲ್ಲಿ/ ಪ್ರಸಾರದಲ್ಲಿ ಉಳಿಸಿಕೊಳ್ಳದಂತೆ ಆದೇಶಿಸುವ ಹಕ್ಕನ್ನು ಸರ್ಕಾರ ತನಗೆ ದಯಪಾಲಿಸಿಕೊಂಡಿದೆ ಎಂದು ಎಡಿಟರ್ಸ್ ಗಿಲ್ಡ್ ಅಭಿಪ್ರಾಯಪಟ್ಟಿದೆ.

ಈ ಕುರಿತು ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಪತ್ರಬರೆದಿರುವ ಎಡಿಟರ್ಸ್‌ ಗಿಲ್ಡ್‌, ಪತ್ರವನ್ನು ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

“2021ರ ಐಟಿ ನಿಯಮಗಳು ಕಾಯಿದೆಗೆ ಸೂಚಿಸಲಾದ ಹೊಸ ತಿದ್ದುಪಡಿ ಮಾಧ್ಯಮ ಸ್ವಾತಂತ್ರ್ಯಕ್ಕೆ ಹಾನಿಯುಂಟು ಮಾಡಿದೆ. ತಿದ್ದುಪಡಿಯಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ‘ಸತ್ಯಶೋಧನಾ ಸಂಸ್ಥೆ’ ಸ್ಥಾಪನೆಗೆ ಅಧಿಕಾರ ನೀಡುತ್ತದೆ. ಈ ಸಂಸ್ಥೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಯಾವುದೇ ಬರಹವನ್ನು/ಪ್ರಸಾರವನ್ನು ‘ಸುಳ್ಳು ಅಥವಾ ನಕಲಿ’ ಎಂದು ನಿರ್ಧರಿಸುವ ಮತ್ತು ಅದನ್ನು ಅಳಿಸುವಂತೆ ಆದೇಶಿಸುವ ಹೆಚ್ಚಿನ ಅಧಿಕಾರವನ್ನು ಹೊಂದಿರುತ್ತದೆ” ಎಂದು ಗಿಲ್ಡ್‌ ಪತ್ರದಲ್ಲಿ ಹೇಳಿದೆ.

“ಯಾವುದು ‘ನಕಲಿ ಅಥವಾ ಅಲ್ಲ’ ಎಂಬುದನ್ನು ನಿರ್ಧರಿಸಲು ಸರ್ಕಾರ ಈ ಸತ್ಯಶೋಧನಾ ಸಂಸ್ಥೆಗೆ ಸಂಪೂರ್ಣ ಅಧಿಕಾರ ನೀಡಿದೆ. ಇದು ಅಪಾಯಕಾರಿ” ಎಂದು ಗಿಲ್ಡ್ ಅಭಿಪ್ರಾಯಪಟ್ಟಿದೆ.

ಅಂತಹ ಸತ್ಯಶೋಧನಾ ಸಂಸ್ಥೆಗೆ ಮೇಲ್ವಿಚಾರಣಾ ಕಾರ್ಯವ್ಯಾಪ್ತಿಯನ್ನು ವಿವರಿಸಿಲ್ಲ. ನ್ಯಾಯಾಂಗ ದೂರದೃಷ್ಟಿ, ಕುಂದು ಕೊರತೆ ಆಲಿಕೆ ಹೇಗೆ ಎಂದು ತಿಳಿಸಿಲ್ಲ. ಸಾಮಾಜಿಕ ಜಾಲತಾಣಗಳನ್ನು ಬ್ಲಾಕ್‌ ಮಾಡಿಸಿರುವ ವಿರುದ್ಧ ಶ್ರೇಯಾ ಸಿಂಘಾಲ್ ಮತ್ತು ಭಾರತ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮುಂದಿಟ್ಟಿರುವ ನಿರ್ದೇಶನಗಳನ್ನು ಹೇಗೆ ಅನುಸರಿಸಲಾಗಿದೆ ಎಂದು ತಿಳಿಸಿಲ್ಲ. ಇದೆಲ್ಲವೂ ಸ್ವಾಭಾವಿಕ ನ್ಯಾಯಕ್ಕೆ ವಿರುದ್ಧ ಮತ್ತು ಸೆನ್ಸಾರ್‌ಶಿಪ್‌ಗೆ ಸಮಾನ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ವಿವಾದಾತ್ಮಕ ಮೋದಿ ಆಪ್ತ ಕಿರಣ್ ಪಟೇಲ್‌ ಬಂಧಿಸಿದ ಪೊಲೀಸರು

ನಾಗರಿಕ ಹಕ್ಕುಗಳ ಸಂಸ್ಥೆ ‘ಇಂಟರ್‌ನೆಟ್ ಫ್ರೀಡಂ ಫೌಂಡೇಶನ್’ ಹೇಳಿಕೆ ನೀಡಿ, “ಹೊಸ ತಿದ್ದುಪಡಿ ಗಂಭೀರ ಬೆದರಿಕೆ ಉಂಟು ಮಾಡುವ ಸಾಧ್ಯತೆ ಇದೆ” ಎಂದು ಅಭಿಪ್ರಾಯಪಟ್ಟಿದೆ.

ಬಳಕೆದಾರರು ಕೇಂದ್ರ ಸರ್ಕಾರವನ್ನು ವಿರೋಧಿಸಿ ಯಾವುದೇ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್‌, ಟ್ವಿಟರ್‌ ಮೊದಲಾದವುಗಳಲ್ಲಿ ಪೋಸ್ಟ್‌ ಮಾಡದಂತೆ ಖಚಿತಪಡಿಸಿಕೊಳ್ಳಲು ಫ್ಯಾಕ್ಟ್‌ಚೆಕ್ ಸಂಸ್ಥೆ ಸ್ಥಾಪಿಸಲು ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X