ವಿಜಯೇಂದ್ರ ನೇಮಕ ಬಿ.ಎಲ್ ಸಂತೋಷ್‌ಗೆ ಸ್ಪಷ್ಟ ಸಂದೇಶ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಬಿಜೆಪಿಗೆ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡುವ ಮೂಲಕ ಬಿ.ಎಲ್‌ ಸಂತೋಷ್‌ಗೆ ಸ್ಪಷ್ಟ ಸಂದೇಶ ನೀಡಿದೆ. ಸಂತೋಷ್‌ ಅವರಿಗೆ ನೀವು ಕೇಶವ ಕೃಪಾದಲ್ಲೇ ಇರಿ ಎಂದು ಹೈಕಮಾಂಡ್‌ ಸಂದೇಶ ಕಳುಹಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಜಯೇಂದ್ರ ನೇಮಕದ ಮೂಲಕ ಬಿ.ಎಲ್. ಸಂತೋಷ್ ಅವರ ತಂತ್ರಗಾರಿಕೆ ತಮಗೆ ಸಂತೋಷ ತಂದಿಲ್ಲವೆಂದು ಹೈಕಮಾಂಡ್‌ ಸಂದೇಶ ಕೊಟ್ಟಿದೆ” ಎಂದು ಹೇಳಿದ್ದಾರೆ.

“ವಿಜಯೇಂದ್ರ ನನಗಿಂತ ನಾಲ್ಕೈದು ವರ್ಷ ದೊಡ್ಡವರು. ಅವರಿಗೆ ಒಳ್ಳೆಯದಾಗಲಿ. ಅವರ ಬಗ್ಗೆ ವೈಯಕ್ತಿಕವಾಗಿ ನಾನು ಏನು ಹೇಳುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಂಡಿದೆ. ಆ ಪಕ್ಷಕ್ಕೆ ಜೀವ ತುಂಬುವ ಶಕ್ತಿಯನ್ನ ಅವರಿಗೆ ಕೊಡಲಿ” ಎಂದಿದ್ದಾರೆ.

Advertisements

“ಕುಟುಂಬ ರಾಜಕಾರಣ ತೊಲಗಬೇಕು. ಓಲೈಕೆ ರಾಜಕಾರಣ, ಭ್ರಷ್ಟಾಚಾರವನ್ನ ನಾವು ಸಹಿಸಲ್ಲ ಅಂತ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಈಗ ವಿಜಯೇಂದ್ರ ಆಯ್ಕೆಯನ್ನು ಏನೆಂದು ಕರೆಯಬೇಕು. ನಾನು ಏನೇ ಮಾಡಿದರೂ ಖರ್ಗೆ ಮಗ ಎನ್ನುತ್ತಾರೆ. ನಾನು ಯುವ ಕಾಂಗ್ರೆಸ್‌ ಕಟ್ಟಿ ಶಾಸಕನಾದೆ. ಆದರೂ, ಖರ್ಗೆ ಮಗ ಎಂದೇ ಹೇಳಿದರು. ಕುಟುಂಬ ರಾಜಕಾರಣ ಎಂದರು. ಈಗ ಯಡಿಯೂರಪ್ಪ ಮಗ ಬಿಜೆಪಿ ರಾಜ್ಯಾಧ್ಯಕ್ಷ ಆಗಿದ್ದಾರೆ. ಕುಟುಂಬ ರಾಜಕಾರಣದ ವಿರುದ್ಧದ ಮೋದಿ, ಅಮಿತ್ ಶಾ ಮಾತುಗಳು ಏನಾದವು” ಎಂದು ಪ್ರಶ್ನಿಸಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X