ಗದಗ | ಉಳ್ಳಟ್ಟಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ

Date:

Advertisements

ಅಂಗನವಾಡಿಯಲ್ಲಿ ಮಕ್ಕಳಿಗೆ ಕಲಿಕೆಯೊಂದಿಗೆ ಉತ್ತಮ ಪೌಷ್ಟಿಕ ಆಹಾರ ಒದಗಿಸುವುದರ ಮೂಲಕ ಅವರನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಬೇಕುʼ ಎಂದು ಶಾಸಕ ಚಂದ್ರು ಕೆ ಲಮಾಣಿ ತಿಳಿಸಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಳ್ಳಟ್ಟಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

“ನಾನು ನೂತನವಾಗಿ ಶಾಸಕನಾಗಿ ತಮಗೆಲ್ಲರಿಗೂ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತು. ಆದರೆ ಆ ಕಾರ್ಯ ವಿಳಂಬವಾಗಿದೆ. ಈ ಅಂಗನವಾಡಿ ಉದ್ಘಾಟನೆ ಕಾರ್ಯಕ್ರಮ ಖುಷಿ ತಂದಿದೆ” ಎಂದರು.

Advertisements

“ಅಂಗನವಾಡಿಗೆ ಒಂದು ಫ್ಯಾನ್, ಶೌಚಾಲಯ, ವಿದ್ಯುತ್, ನೀರಿನ ಸರಬರಾಜು ಬಹಳ ಮುಖ್ಯ, ಅವೆಲ್ಲವೂ ಅಚ್ಚುಕಟ್ಟಾಗಿವೆ. ಹಾಗೆಯೇ ಕಟ್ಟಡವನ್ನೂ ಕೂಡ ಬಹಳ ಸುಸಜ್ಜಿತವಾಗಿ ಕಟ್ಟಿದ್ದಾರೆ” ಎಂದು ಅಭಿನಂದಿಸಿದರು.

ಯುವನಾಯಕ ಕೃಷ್ಣ ಲಮಾಣಿಯವರ ಕಾರ್ಯವನ್ನು ಸಾಘ್ಲಿಸಿ ಮಾತನಾಡಿದ ಅವರು,          ಊರಿನ ಹಿರಿಯರು ನನ್ನ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆಂದು ಭರವಸೆ ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿ ಮೃತ್ಯುಂಜ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲೂರ, ದೊಡ್ಡೂರ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಚಂದ್ರಶೇಖರ ಈಳಿಗೇರ, ನಿಂಗಪ್ಪ ಬಂಕಾಪೂರ, ಕೃಷ್ಣ ಲಮಾಣಿ, ಊರಿನ ಹಿರಿಯರು ಎಲ್ ಪಿ ಲಮಾಣಿ, ಶೇಖರಪ್ಪ ಲಮಾಣಿ, ಶೇಖರಗೌಡ ಪಾಟೀಲ್, ಮುದಕನಗೌಡ ಪಾಟೀಲ್, ಬಸವನಗೌಡ ಪಾಟೀಲ್, ರಮೇಶ ಲಮಾಣಿ, ಅಪ್ಪು ಲಮಾಣಿ, ಎನ್ ಎಚ್ ಹಡಪದ, ಗುಡ್ಡಪ್ಪ ಹಡಪದ, ರವಿ ಭಜಕ್ಕನವರು, ರವಿರಾಜ ಈಳಿಗೇರ, ಅಂಗನವಾಡಿಯ ಶಿಕ್ಷಕಿಯವರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್: ಮಲ್ಲೇಶ ಮಣ್ಣಮ್ಮನವರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X