ಉಡುಪಿ | ಸಮುದ್ರಕ್ಕೆ ಬಿದ್ದು 43 ಗಂಟೆಗಳ ಕಾಲ ಈಜಿ ಬದುಕುಳಿದ ಮೀನುಗಾರ

Date:

Advertisements

ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಬೋಟ್‌ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದು, 43 ಗಂಟೆಗಳ ಕಾಲ ಈಜಿ ಬದುಕುಳಿದಿದ್ದಾರೆ. ಅವರನ್ನು ಗೊಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ತಮಿಳುನಾಡು ಮೂಲದ ಎಂಟು ಮಂದಿ ಮೀನುಗಾರರು ಬುಧವಾರ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅಂದು ರಾತ್ರಿ, ಮುರುಗನ್ ಎಂಬಾತ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾನೆ. ಆದರೆ, ಕತ್ತಲೆಯಲ್ಲಿ ಆತ ಸಮುದ್ರಕ್ಕೆ ಬಿದ್ದಿರುವುದು ಇತರರಿಗೆ ಗೊತ್ತಾಗಿಲ್ಲ ಎಂದು ಹೇಳಲಾಗಿದೆ.

ಬಳಿಕ, ಆತ ಇಲ್ಲದಿರುವುದನ್ನು ಗಮನಿಸಿದ ಮೀನುಗಾರರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಆತ ಸಮುದ್ರಕ್ಕೆ ಬಿದ್ದು, ಮೃತಪಟ್ಟಿದ್ದಾನೆಂದು ಭಾವಿಸಿ, ವಾಪಸ್‌ ತೆರಳಿದ್ದರು ಎಂದು ತಿಳಿದುಬಂದಿದೆ.

Advertisements

ಶುಕ್ರವಾರ ಸಂಜೆ ಗಂಗೊಳ್ಳಿಯ ಮೀನುಗಾರರು ಅದೇ ಭಾಗದಲ್ಲಿ ಮೀನುಗಾರಿಕೆಗೆ ತೆರಳಿದ್ದಾರೆ. ಅಲ್ಲಿ ಮುರುಗನ್ ಈಜುತ್ತಿರುವುದನ್ನು ಗಮನಿಸಿದ್ದು, ಆತನನ್ನು ಬೋಟ್‌ಗೆ ಹತ್ತಿಸಿಕೊಂಡಿದ್ದಾರೆ. ಆಳ ಸಮುದ್ರದಲ್ಲಿ ಬರೋಬ್ಬರಿ ಎರಡು ದಿನಗಳ ಮುರುಗನ್ ಈಜುತ್ತಲೇ ಜೀವ ಉಳಿಸಿಕೊಂಡಿದ್ದಾರೆ.

ಸಂಪೂರ್ಣ ನಿತ್ರಾಣಗೊಂಡಿದ್ದ ಮುರುಗನ್‌ಗೆ ಗಂಗೊಳ್ಳಿ ಮೀನುಗಾರರು ಪ್ರಥಮ ಚಿಕಿತ್ಸೆ ನೀಡಿ, ಊಟ ಕೊಟ್ಟಿದ್ದಾರೆ. ತಮಿಳುನಾಡು ಬೋಟ್‌ನವರನ್ನು ಸಂಪರ್ಕಿಸಿ, ಅವರೊಂದಿಗೆ ಕಳುಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X