ಗಾಜಾದಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ: ಪ್ರಿಯಾಂಕಾ ಗಾಂಧಿ ಆಘಾತ

Date:

Advertisements

ಗಾಜಾದಲ್ಲಿ 10 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ”ಎಂತಹ ಶೋಚನೀಯ ಮತ್ತು ಅವಮಾನಕರ ಘಟನೆ. ಗಾಜಾದಲ್ಲಿ ಕೊಲ್ಲಲ್ಪಟ್ಟ 10 ಸಾವಿರ ಮಂದಿಯಲ್ಲಿ ಅರ್ಧದಷ್ಟು ಮಂದಿ ಮಕ್ಕಳಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ವರದಿಯ ಪ್ರಕಾರ ಪ್ರತಿ ಹತ್ತು ನಿಮಿಷಕ್ಕೆ ಒಂದು ಮಗುವನ್ನು ಸಾಯಿಸಲಾಗಿದೆ. ಇನ್ನು ಆಮ್ಲಜನಕದ ಕೊರತೆಯಿಂದ ಇನ್ಕ್ಯುಬೇಟರ್‌ಗಳಿಂದ ತೆಗೆದುಹಾಕಿ ಸಾಯಲು ಬಿಡಲಾಗಿದೆ. ಈ ನರಹತ್ಯೆಯನ್ನು ಬೆಂಬಲಿಸುವವರಿಗೆ ಆಘಾತವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಯುದ್ಧ ವಿರಾಮವಿಲ್ಲ, ಬಾಂಬುಗಳನ್ನು ಸುರಿಯಲಾಗುತ್ತಿದೆ. ಹೆಚ್ಚು ಹಿಂಸಾಚಾರ, ಹೆಚ್ಚು ಕೊಲೆ, ಹೆಚ್ಚೆಚ್ಚು ನೋವು. ಈ ವಿನಾಶವನ್ನು ಬೆಂಬಲಿಸುವ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಈ ಹಿಂಸೆ ಯಾವಾಗ ಕೊನೆಗೊಳ್ಳುತ್ತದೆ” ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

ಹಮಾಸ್ ಹೋರಾಟಗಾರರು ಇಸ್ರೇಲಿ ಗಡಿ ಮೇಲೆ ಹಠಾತ್ ದಾಳಿ ನಡೆಸಿದಾಗ 1,200 ಕ್ಕೂ ಹೆಚ್ಚು ಇಸ್ರೇಲಿಗಳು ಕೊಲ್ಲಲ್ಪಟ್ಟರು. ಇದರಿಂದ ಪ್ರತಿದಾಳಿ ನಡೆಸಿದ ಇಸ್ರೇಲ್ ಪಡೆ ಅಮಾಯಕರನ್ನು ಲೆಕ್ಕಿಸದೆ ಸಾಮಾನ್ಯ ನಾಗರಿಕರನ್ನು ಹತ್ಯೆ ಮಾಡಿದೆ.

ಗಾಜಾದಲ್ಲಿ ಹಮಾಸ್ ಕೇಂದ್ರಿತ ಆರೋಗ್ಯ ಸಚಿವಾಲಯದ ಪ್ರಕಾರ ಇಸ್ರೇಲ್‌ ದಾಳಿಯಲ್ಲಿ 11 ಸಾವಿರಕ್ಕೂ ಹೆಚ್ಚು ಜನರನ್ನು ಕೊಲ್ಲಲಾಗಿದೆ. ಸತ್ತವರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ಅಮೆರಿಕದ ವರದಿಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X