ಕೊಡಗು | ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ತೇಲಪಂಡ ಶಿವಕುಮಾರ್ ಒತ್ತಾಯ

Date:

Advertisements

ಕೊಡಗು ಜಿಲ್ಲೆಯನ್ನು ಜನಪ್ರತಿನಿಧಿಗಳು ಕ್ರೀಡಾ ವಲಯವೆಂದು ಘೋಷಣೆ ಮಾಡಬೇಕು. ಜತೆಗೆ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಸಮಾಜಿಕ ಕಾರ್ಯಕರ್ತ ತೇಲಪಂಡ ಶಿವಕುಮಾರ್ ಒತ್ತಾಯಿಸಿದರು.

ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕೊಡವ ಕ್ರಿಕೆಟ್ ಅಕಾಡೆಮಿಯಿಂದ ಆಯೋಜಿಸಿದ್ದ ಅಂತರ ಕೊಡವ ಸಮಾಜಗಳ ನಡುವಣ ಸೀಮಿತ ಓವರ್‌ಗಳ ಲೆದರ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದರು.

“ಕೊಡವ ಜನಾಂಗದ ಪ್ರತಿಯೊಬ್ಬರಿಗೂ ಹಾಕಿ ಕ್ರೀಡೆಯು ರಕ್ತಗತವಾಗಿ ಬಂದಿದೆ. ಹಾಕಿ ಕ್ರೀಡೆಗೆ ಮಹತ್ವ ನೀಡುವಂತೆ, ಕ್ರಿಕೆಟ್‌ಗೂ ಪ್ರೋತ್ಸಾಹ ನೀಡುವಂತಾಗಬೇಕು. ಕೊಡಗು ಕ್ರೀಡಾ ಜಿಲ್ಲೆಯಾದರು ಕೆಲವು ತಾಂತ್ರಿಕ ಮತ್ತು ದೈಹಿಕ ಸಮಸ್ಯೆಗಳಿಂದಾಗಿ ಜಿಲ್ಲೆಯ ಕ್ರೀಡಾಪಟುಗಳು ದೇಸಿ ಮಟ್ಟದಲ್ಲಿ ಎಡುವುತ್ತಿದ್ದಾರೆ” ಎಂದರು.

Advertisements

ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಕೆ ಸುಬ್ರಮಣಿ ಮಾತನಾಡಿ, “ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳುವ ಕ್ರೀಡಾಪಟುಗಳು ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಬಹುತೇಕ ಯುವಜನರು ಇಂದು ಮೊಬೈಲ್‌ ಗೀಳಿಗೆ ದಾಸರಾಗಿದ್ದಾರೆ. ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೊಡವ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಕೀತಿಯಂಡ ಕರ್ಸನ್‌ ಕಾರ್ಯಪ್ಪ ಮಾತನಾಡಿ, “ಜಿಲ್ಲೆಯ ಹಲವೆಡೆಯ ಒಟ್ಟು 10 ಕೊಡವ ಸಮಾಜಗಳ ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಸಂಸ್ಥೆಯ ಎಲ್ಲ ಸದಸ್ಯರು ಮತ್ತು ದಾನಿಗಳ ಸಹಕಾರ ಮರೆಯಲಾಗದು” ಎಂದರು.

ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್, ಪುರಸಭೆ ಸದಸ್ಯೆ ಯಶೋಧಾ ಮಂದಣ್ಣ ಮತ್ತು ಉದ್ಯಮಿ ನಾಗೇಶ್ ಪವನ್, ಕೊಡವ ಕ್ರಿಕೆಟ್ ಅಕಾಡೆಮಿಯ ಎಲ್ಲ ಕಾರ್ಯಕಾರಿ ಮಂಡಳಿ ಸದಸ್ಯರು, ಕ್ರೀಡಾ ಪಟುಗಳು, ಸಮುದಾಯದ ಬಾಂಧವರು ಹಾಗೂ ಕ್ರೀಡಾ ಪ್ರೇಮಿಗಳು ಇದ್ದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ದೈಹಿಕ ಶಿಕ್ಷಕ ವಶಕ್ಕೆ

ಟೂರ್ನಿಯ ಪ್ರಥಮ ಪಂದ್ಯದಲ್ಲಿ ಭಾಗವಹಿಸಿದ್ದ ತಂಡಗಳಾದ ಮಕ್ಕಂದೂರು ಕೊಡವ ಸಮಾಜ ಮತ್ತು ಮೂರ್ನಾಡು ಕೊಡವ ಸಮಾಜಗಳ ಆಟಗಾರರಿಗೆ ಗಣ್ಯರು ಶುಭ ಕೋರಿದರು.
ಚಕ್ಕೇರ ನವೀನ್, ಆಳಮೇಂಗಡ ಮೋಹನ್ ಚಂಗಪ್ಪ ಅವರು ತೀರ್ಪುಗಾರರಾಗಿ ಹಾಗೂ ಅದೇಂಗಡ ಶಾಶ್ವತ್ ಅವರು ಸ್ಕೋರರ್ ಆಗಿ ಕಾರ್ಯನಿರ್ವಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X