ರಾಯಚೂರು | ಲಿಂಗಸುಗೂರಿನಲ್ಲಿ ಸಾರಿಗೆ ಬಸ್‌ಗಳ ಸಂಚಾರ; ಕರವೇ ಅಸಮಾಧಾನ

Date:

Advertisements

ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಾಗಿ ವಾಹನಗಳಿಗೆ ಪರ್ಯಾಯ ಮಾರ್ಗ ಒದಗಿಸಲಾಗಿದೆ. ಆದರೂ, ಕೆಲವು ಸಾರಿಗೆ ಬಸ್‌ಗಳು ಪಟ್ಟಣದ ಕೆಲವು ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ-ಪ್ರವೀಣ್‌ಶೆಟ್ಟಿ ಬಣ) ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಸಾರಿಗೆ ಘಟಕದ ಅಧಿಕಾರಿಗೆ ಕರವೇ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಲಿಂಗಸುಗೂರಿನಲ್ಲಿ ಕಲಬುರಗಿ–ಬೆಂಗಳೂರು ಬೈಪಾಸ್‍ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ವಾಹನ ಸಂಚಾರಕ್ಕೆ ಬಸವಸಾಗರ ವೃತ್ತದಿಂದ ವಿಸಿಬಿ ಕಾಲೇಜು ಮತ್ತು ರಾಯಚೂರು ರಸ್ತೆ ಮಾರ್ಗದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಆದರೂ, ಕೆಲವು ಸಾರಿಗೆ ಬಸ್‌ಗಳ ಚಾಲಕರು ಆ ರಸ್ತೆಗಳನ್ನು ಬಳಸದೆ, ಪಟ್ಟಣದ ಗಡಿಯಾರ ವೃತ್ತದ ಮಾರ್ಗವಾಗಿ ಸಂಚರಿಸುತ್ತಿದ್ದಾರೆ. ಇದರಿಂದಾಗಿ ಅನಗತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಗಡಿಯಾರ ವೃತ್ತದ ರಸ್ತೆ ಕಿರಿದಾಗಿದ್ದು, ಹೆಚ್ಚು ವಾಹನಗಳು ಸರಾಗವಾಗಿ ಸಂಚರಿಸಲು ಸಾಧ್ಯವಿಲ್ಲ. ಆದರೂ, ಸಾರಿಗೆ ಬಸ್‌ಗಳು ಅನಗತ್ಯವಾಗಿ ಆ ರಸ್ತೆಯನ್ನು ಬಳಸುತ್ತಿದ್ದಾರೆ. ಹೀಗಾಗಿ, ಅಗತ್ಯವಾಗಿ ಆ ರಸ್ತೆ ಬಳಸುವ ವಾಹನ ಸವಾರರಿಗೆ, ವಿದ್ಯಾರ್ಥಿಗಳಿಗೆ, ವೃದ್ಧರಿಗೆ ಸಮಸ್ಯೆಯಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

Advertisements

“ಸಾರಿಗೆ ಬಸ್‌ಗಳಿಗೆ ಸೂಚಿಸಲಾಗಿರುವ ರಸ್ತೆಯನ್ನೇ ಬಳಸುವಂತೆ ನಿರ್ದೇಶಿಸೇಕು. ಗುಡಿಯಾದ ವೃತ್ತದ ರಸ್ತೆಯನ್ನು ಬಳಸದಂತೆ ತಡೆಯಬೇಕು. ಒಂದು ವೇಳೆ, ಮತ್ತೆ ಅದೇ ರಸ್ತೆಯಲ್ಲಿ ಸಂಚರಿಸಿ ಅಪಘಾತ ಅಥವಾ ಇನ್ನಿತರೆ ಸಮಸ್ಯೆಗಳು ಸಂಭವಿಸಿದಲ್ಲಿ, ಅದಕ್ಕೆ ಸಾರಿಗೆ ಇಲಾಖೆಯೇ ಹೊಣೆಯಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ, ಆಂಜನೇಯ ಭಂಡಾರಿ, ಸಲಿಂಖಾನ್‍, ಸಿದ್ಧು ಚಲುವಾದಿ, ಕುರುಮೇಶ ನಾಯಕ, ಭೀಮೇಶ ನಾಯಕ, ಮುತ್ತಣ್ಣ, ವೆಂಕಟೇಶ ಉಪ್ಪಾರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X