ಬಳ್ಳಾರಿ | ಚರಂಡಿ ವಿಚಾರಕ್ಕೆ ಜಗಳ; ಪುರಸಭೆ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

Date:

Advertisements

ಪುರಸಭೆ ಸದಸ್ಯನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಾಡಹಗಲೇ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ಪಟ್ಟಣದ ಘೋರ್ಪಡೆ ನಗರದಲ್ಲಿ ನಡೆದಿದೆ. ಪುರಸಭೆ ಸದಸ್ಯ ನಾಗರಾಜ ನಾಯ್ಕ ಮೇಲೆ ಸೋಮವಾರ (ನ.13) ವ್ಯಕ್ತಿಯೊಬ್ಬ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಪುರಸಭೆ ಸದಸ್ಯ ನಾಗರಾಜ ಮೇಲೆ ಆರೋಪಿ ಶಿವಕುಮಾರ್​​​​​​ ಎಂಬುವವರು ಹಲ್ಲೆ ನಡೆಸಿದ್ದಾರೆ. ಇವರಿಬ್ಬರ ನಡುವೆ ಚರಂಡಿ ವಿಚಾರವಾಗಿ ವೈಶಮ್ಯ ಇತ್ತು. ಅದೇ ವೈಶಮ್ಯದ ಹಿನ್ನೆಲೆ ಹಲ್ಲೆ ನಡೆಸಿದ್ದು ತೆಲೆಗೆ, ಬೆನ್ನಿಗೆ, ಕೈಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದ 11ನೇ ವಾರ್ಡ್​ನ ಪುರಸಭೆ ಸದಸ್ಯರಾಗಿರುವ ನಾಗರಾಜ ನಾಯ್ಕ ಮತ್ತು ಶಿವಕುಮಾರ್ ಅವರಿಗೆ ಕಳೆದ ಒಂದು ವರ್ಷದಿಂದ ಮನೆ ಮುಂದೆ ಇರುವ ಚರಂಡಿ ವಿಚಾರವಾಗಿ ಗಲಾಟೆಗಳು ನಡೆಯುತ್ತಿದ್ದವು. ಅದೇ ರೀತಿ ಗಲಾಟೆ ನಡೆದಿದ್ದು ಈ ವೇಳೆ ಮಾತಿಗೆಮಾತು ಬೆಳೆದು ನಾಗರಾಜ ಮೇಲೆ ಮಚ್ಚಿನಿಂದ ಶಿವರಾಜ್ ಹಲ್ಲೆ ನಡೆಸಿದ್ದಾರೆ.

Advertisements

ಗಾಯಾಳು ನಾಗರಾಜ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತೋರಣಗಲ್​​​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X