ಗದಗ | ಕಾನೂನು ಉಲ್ಲಂಘಸಿ ಬೇಕಾಬಿಟ್ಟಿ ವಿಂಡ್ ಯಂತ್ರಗಳು ಅಳವಡಿಕೆ; ಆರೋಪ

Date:

Advertisements

ಗದಗ ಜಿಲ್ಲೆ ಕಾನೂನು ಸಚಿವ ಎಚ್.​ಕೆ. ಪಾಟೀಲ್ ತವರು. ಆದರೆ, ಕಾನೂನು ಸಚಿವರ ತವರಲ್ಲೇ ಕಾನೂನು ಉಲ್ಲಂಘಸಿ ಬೇಕಾಬಿಟ್ಟಿ ವಿಂಡ್ ಯಂತ್ರಗಳು ಅಳವಡಿಸಲಾಗಿದೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ.

ಗದಗ ಜಿಲ್ಲೆಯನ್ನು ಏಶಿಯಾ ಖಡದಲ್ಲೇ ಅತೀ ವೇಗವಾಗಿ ಗಾಳಿ ಬಿಸುವ ಸ್ಥಳ ಎಂದು ಗುರುತಿಸಲಾಗುತ್ತದೆ. ಹೀಗಾಗಿ, ಇಲ್ಲಿ ಅನೇಕ ವಿಂಡ್ ಕಂಪನಿಗಳು ಲಗ್ಗೆ ಇಟ್ಟಿವೆ. ಎಲ್ಲಿ ಕಣ್ಣು ಹಾಯಿಸಿದ್ರೂ ವಿಂಡ್ ಫ್ಯಾನ್‌ಗಳೇ ಕಣ್ಣಿಗೆ ರಾಚುತ್ತವೆ. ರಿನೋಬಲ್ ಎನರ್ಜಿ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲ ಸಡಲಿಕೆ ನೀಡಿವೆ. ಆದರೆ, ಇದನ್ನೆ ಬಂಡವಾಳ ಮಾಡಿಕೊಂಡ ಬಂಡವಾಳ ಶಾಹಿಗಳು ಬೇಕಾಬಿಟ್ಟಿ ಪವನ​ ವಿದ್ಯುತ್ ಯಂತ್ರಗಳನ್ನು ಜಿಲ್ಲೆಯಲ್ಲಿ ಅಳವಡಿಸಿದ್ದಾರೆ.

ವಿಂಡ್ ಫ್ಯಾನ್ ಅಳವಡಿಸಬೇಕಾದರೆ ಮೊದಲು ಗ್ರಾಮ ಪಂಚಾಯತ್​ಗೆ ಟ್ಯಾಕ್ಸ್ ತುಂಬಿ ಅನುಮತಿ ಪಡೆಯಬೇಕು. ಬಳಿಕ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೃಷಿ ಜಮೀನು ಕೃಷಿಯೇತರ ಜಮೀನಾಗಿ (ಎನ್‌ಎ) ಪರಿವರ್ತನೆ ಮಾಡಬೇಕು. ಬಳಿಕ ಪಂಚಾಯತ್ ಎನ್ಒಸಿ ಪಡೆಯಬೇಕು. ಆದರೆ, ಇದ್ಯಾವ ಕೆಲಸ ಮಾಡದ ವಿಂಡ್ ಕಂಪನಿಗಳು ನೂರಾರು ಪವನ ವಿದ್ಯುತ್ ಯತ್ರಗಳನ್ನು ಈಗಾಗಲೇ ರೈತರ ಜಮೀನುಗಳಲ್ಲಿ ಅಳವಡಿಸಿದ್ದಾರೆ. ವಿದ್ಯುತ್ ಉತ್ಪಾದನೆ ಸಹ ನಡೆದಿದೆಯಂತೆ.

Advertisements

ಪಂಚಾಯತ್ ಆಡಳಿತ ಪ್ರಶ್ನೆ ಮಾಡಿದಕ್ಕೆ ಕಂಪನಿಗಳು ಈಗ ಎಚ್ಚೆತ್ತುಕೊಂಡು ಪಂಚಾಯತ್​ಗೆ ಓಡಿ ಬಂದಿದ್ದಾರೆ. ಈಗ ಅನುಮತಿಗಾಗಿ ಅರ್ಜಿ ಹಾಕಿದ್ದಾರಂತೆ. ಈ ಬಗ್ಗೆ ಮಾದ್ಯಮದವರು ಪಿಡಿಓ ಅವರನ್ನು ಕೇಳಿದ್ರೆ, ಇದು ಕಂದಾಯ ಇಲಾಖೆ ಜಮೀನು. ಕೃಷಿಯೇತರ ಆದ ಬಳಿಕ ನಮ್ಮ ವ್ಯಾಪ್ತಿಗೆ ಬರುತ್ತೆ. ಇನ್ನೂ ಎನ್ಎ ಆಗಿಲ್ಲ. ಈಗಾಗಲೇ ಫ್ಯಾನ್‌ಗಳನ್ನು ಅಳವಡಿಸಿದ್ದಾರೆ ಎಂದು ಪಂಚಾಯತ್ ಅಧಿಕಾರಿಗಳು ತಮ್ಮ ಅಸಹಾಯಕತೆ ತೋಡಿಕೊಳ್ಳುತ್ತಾರೆ.

ಜಿಲ್ಲೆಯಲ್ಲಿ ಗದಗ, ರೋಣ, ಗಜೇಂದ್ರಗಢ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕುಗಳಲ್ಲಿ 500ಕ್ಕೂ ಅಧಿಕ ವಿವಿಧ ಕಂಪನಿಗಳು ಪವನ ವಿದ್ಯುತ್ ಯಂತ್ರಗಳನ್ನು ಅಳವಡಿಸಿವೆ. ಬಹುತೇಕ ಗ್ರಾಮ ಪಂಚಾಯತ್ ಗಳಿಂದ ಅನುಮತಿಯೂ ಪಡೆಯಲ್ಲಿ, ಎನ್ಓಸಿ ಕೂಡ ಪಡೆಯದೇ ಅಳವಡಿಸಲಾಗಿದೆ. ಈ ಕಂಪನಿಗಳು ಆಡಿದ್ದೇ ಆಟವಾಗಿದೆ. ಸರ್ಕಾರದ ಯಾವುದೇ ನಿಯಮ, ಕಾನೂನು ಪಾಲನೆ ಮಾಡುತ್ತಿಲ್ಲ.

ಸರ್ಕಾರಕ್ಕೆ ತೆರಿಗೆ ವಂಚನೆಯಾಗುತ್ತಿದೆ. ಈ ವಿಷಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಗೋತ್ತಿದ್ರೂ ಮೌನಕ್ಕೆ ಶರಣಾಗಿದ್ದಾರೆ. ಗ್ರಾಮ ಪಂಚಾಯತ್ ಆಡಳಿತಗಳು ತೆರಿಗೆ ಮೋಸಕ್ಕೆ ಆಕ್ರೋಶ ವ್ಯಕ್ತಪಡಿಸಿವೆ. ಇಷ್ಟಾದರೂ, ಕಂದಾಯ ಇಲಾಖೆ ಮಾತ್ರ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ ಎನ್ನೋ ಆರೋಪಗಳಿವೆ.

ಇನ್ನೂ ಈ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಕೆಲ ಸಡಲಿಕೆ ಇವೆ. ಪಂಚಾಯತ್ ಗಳು ಸರಿಯಾದ ಸಮಯಕ್ಕೆ ಅನುಮತಿ ನೀಡಬೇಕು. ವಿದ್ಯುತ್ ಉತ್ಪಾದನೆ ಆಗಬೇಕು. ಇಲ್ಲವಾದಲ್ಲಿ, ರೈತರಿಗೆ ವಿದ್ಯುತ್ ನೀಡಲು ಸಾಧ್ಯವಿಲ್ಲ. ವರದಿ ಪಡೆದುಕೊಳ್ಳುತ್ತೇನೆ.. ಕಂದಾಯ ಇಲಾಖೆಯಿಂದ ನಿಯಮ ಉಲ್ಲಂಘನೆಯಾಗಿದ್ದರೆ, ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X