ಪರಿಸರ ಸಚಿವಾಲಯದ ಸಮಿತಿಗೆ ಅದಾನಿ ಕಂಪನಿ ಉದ್ಯೋಗಿ: ‘ದೋಸ್ತಿ ಎಂದರೆ ಹೀಗಿರಬೇಕು’ ಎಂದ ವಿಪಕ್ಷಗಳು

Date:

Advertisements

ಕೇಂದ್ರ ಸರ್ಕಾರದ ಪರಿಸರ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತಜ್ಞರ ಮೌಲ್ಯಮಾಪನ ಸಮಿತಿಗೆ ಗೌತಮ್ ಅದಾನಿ ಕಂಪನಿಯ ಉದ್ಯೋಗಿಯೋರ್ವರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಪಕ್ಷಗಳು ಟೀಕೆ ಮಾಡಿದೆ.

ತಜ್ಞರ ಮೌಲ್ಯಮಾಪನ ಸಮಿತಿಗೆ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಕಂಪನಿಯ ಉದ್ಯೋಗಿ ಜನಾರ್ದನ ಚೌಧರಿ ಎಂಬುವವರನ್ನು ನೇಮಕ ಮಾಡಲಾಗಿದ್ದು, ‘ಅದಾನಿ-ಪ್ರಧಾನಿಯ ದೋಸ್ತಿ ಎಂದರೆ ಹೀಗಿರಬೇಕು’ ಎನ್ನುವ ಮೂಲಕ ವಿಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ಕೇರಳ ಕಾಂಗ್ರೆಸ್ ಘಟಕ, ‘ಅದಾನಿಯ ಪ್ರಧಾನ ಸೇವಕ, ಅದಾನಿಯ ಉದ್ಯೋಗಿ ಜನಾರ್ದನ ಚೌಧರಿ ಅವರನ್ನು ಪರಿಸರ ಸಚಿವಾಲಯದ ತಜ್ಞರ ಮೌಲ್ಯಮಾಪನ ಸಮಿತಿಗೆ ನೇಮಕ ಮಾಡಿದ್ದಾರೆ. ಈ ಸಮಿತಿಯು ಅದಾನಿಯ 6 ಯೋಜನೆಗಳಿಗೆ ಅಂದರೆ 10,300 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಗೆ ಅನುಮೋದನೆ ನೀಡಲಿದೆ’ ಎಂದು ಕೇಂದ್ರದ ನಡೆಯನ್ನು ಟೀಕಿಸಿದೆ.

Advertisements

ಇತ್ತೀಚೆಗೆ ಮಹಾರಾಷ್ಟ್ರದ ಸತಾರದಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರಕ್ಕೆ ಇವರೇ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದು, ಇದು ವ್ಯಾಪಾರವನ್ನು ಸುಲಭಗೊಳಿಸುವ ವಿಧಾನ ಎಂದು ವ್ಯಂಗ್ಯವಾಡಿದೆ.

ಶಿವಸೇನಾ (ಯಟಿಬಿ) ಹಾಗೂ ತೃಣಮೂಲ ಕಾಂಗ್ರೆಸ್ ಕೂಡ ಸರ್ಕಾರದ ಈ ನಡೆಯನ್ನು ಟೀಕಿಸಿದೆ. ‘ದೋಸ್ತಿ ಎಂದರೆ ಹೀಗಿರಬೇಕು’ ಎಂದು ಶಿವಸೇನಾದ ರಾಜ್ಯಸಭೆ ಸದಸ್ಯೆ ಪ್ರಿಯಾಂಕ ಚತುರ್ವೇದಿ ಕೇಂದ್ರದ ನಡೆಯನ್ನು ವ್ಯಂಗ್ಯವಾಡಿದ್ದಾರೆ.

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ನ ಸಲಹೆಗಾರರಾಗಿರುವ ಚೌಧರಿಯವರನ್ನು ಅದಾನಿ ಸಮೂಹದ ಜಲವಿದ್ಯುತ್‌ ಯೋಜನೆ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಿರುವ ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಗೆ ಕಳೆದ ಸೆ. 27ರಂದು ನೇಮಕ ಮಾಡಲಾಗಿತ್ತು. ಸರ್ಕಾರ ಒಪ್ಪಿಗೆ ನೀಡುವುದಕ್ಕೂ ಮುನ್ನ ಈ ಮೌಲ್ಯಮಾಪನ ಸಮಿತಿಯು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X