ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ನಿಧನ

Date:

Advertisements

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ (75) ಮಂಗಳವಾರ ಮುಂಬೈನಲ್ಲಿ ವಿಧಿವಶರಾಗಿದ್ದಾರೆ.

ಭಾನುವಾರ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮಂಗಳವಾರ ರಾತ್ರಿ 10:30ರ ಸುಮಾರಿಗೆ ಹೃದಯಾಘಾತದಿಂದ  ಮೃತಪಟ್ಟಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು ಎಂದು ಸಹಾರಾ ಗ್ರೂಪ್ ಪ್ರಕಟಿಸಿದೆ.

ಅವರು ದೀರ್ಘಕಾಲದಿಂದ ಮೆಟಾಸ್ಟಾಟಿಕ್ ಕ್ಯಾನ್ಸರ್, ಅಧಿಕ ಬಿಪಿ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ಕಂಪನಿ ತಿಳಿಸಿದೆ.

Advertisements

ಸುಬ್ರತಾ ರಾಯ್ ಅವರ ಜೀವನ

ಸುಬ್ರತಾ ರಾಯ್ ಅವರು ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದರು. ಗೋರಖ್‌ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. 1976 ರಲ್ಲಿ, ರಾಯ್ ಅವರು ಆರ್ಥಿಕ ಒತ್ತಡದಲ್ಲಿದ್ದ ಸಹಾರಾ ಫೈನಾನ್ಸ್ ಎಂಬ ಚಿಟ್ ಫಂಡ್ ಕಂಪನಿಯನ್ನು ಖರೀದಿಸಿದರು.

1978ರ ಹೊತ್ತಿಗೆ ಅದು ಸಹಾರಾ ಇಂಡಿಯಾ ಪರಿವಾರ್ ಆಗಿ ಸುಧಾರಣೆಯಾಯಿತು. ಅದರ ನಂತರ ಅವರು ವ್ಯವಹಾರವನ್ನು ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಹೀಗೆ ಹಲವು ಕ್ಷೇತ್ರಗಳಿಗೆ ವಿಸ್ತರಿಸಿದರು. 1992 ರಲ್ಲಿ ರಾಷ್ಟ್ರೀಯ ಸಹಾರಾ ಮತ್ತು ಸಹಾರಾ ಟಿವಿ ಚಾನೆಲ್ ಎಂಬ ಮಾಧ್ಯಮಗಳನ್ನು ಪ್ರಾರಂಭಿಸಿದರು. ಕೆಲವು ವರ್ಷಗಳಿಂದ ಸಹಾರಾ ಟಿವಿಯನ್ನು ಸಹಾರಾ ಒನ್ ಎಂದು ಬದಲಾಯಿಸಲಾಯಿತು.

2010ರಲ್ಲಿ ರಾಯ್ ಲಂಡನ್‌ನ ಗ್ರೋಸ್ವೆನರ್ ಹೌಸ್ ಹೋಟೆಲ್ ಮತ್ತು 2012 ರಲ್ಲಿ ನ್ಯೂಯಾರ್ಕ್‌ನ ಪ್ಲಾಜಾ ಹೋಟೆಲ್ ಅನ್ನು ಖರೀದಿಸಿದರು. 2000ರ ದಶಕದಲ್ಲಿ ಸಹಾರಾ ಇಂಡಿಯಾ ಪರಿವಾರ್ 1.2 ಮಿಲಿಯನ್ ಉದ್ಯೋಗಿಗಳನ್ನು ಹೊಂದಿತ್ತು. ಸಹಾರಾ ಗ್ರೂಪ್ ದೇಶದಲ್ಲಿ ರೈಲ್ವೆ ನಂತರ ಅತಿ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಕಂಪನಿ ಎಂದು ಗುರುತಿಸಲ್ಪಟ್ಟಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿ ಮನೆಯ ಕಸ ಸಂಗ್ರಹಣೆಗೆ ತಿಂಗಳಿಗೆ ₹30 ನಿಗದಿ; ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ

ಸಹಾರಾ ಗ್ರೂಪ್ 2014 ರಿಂದ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂಪಾಯಿ ಹಿಂದಿರುಗಿಸಲು ವಿಫಲವಾಗಿದ್ದ ಹಿನ್ನೆಲೆಯಲ್ಲಿ ಸುಬ್ರತಾ ರಾಯ್ ಅವರು ಹಲವು ವರ್ಷ ಜೈಲಿನಲ್ಲಿದ್ದರು. ಸದ್ಯ ಅವರು ಪೆರೋಲ್‌ನಲ್ಲಿದ್ದರು ಎಂದು ಸಹಾರಾ ಗ್ರೂಪ್ ಪ್ರಕಟಿಸಿದೆ.

ಸುಬ್ರತಾ ರಾಯ್ ಅವರ ಪರಂಪರೆ ಹಾಗೂ ಉದ್ಯಮದಲ್ಲಿ ಹೊಂದಿದ್ದ ಅವರ ದೃಷ್ಟಿಕೋನವನ್ನು ಮುಂದುವರೆಸಿಕೊಂಡು ಹೋಗಲಾಗವುದು ಎಂದು ಸಹಾರಾ ಗ್ರೂಪ್ ತಿಳಿಸಿದೆ.

ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ಅವರಿಗೆ ಪತ್ನಿ ಸ್ವಪ್ನಾ ರಾಯ್ ಮತ್ತು ಸುಶಾಂತೋ ರಾಯ್ ಮತ್ತು ಸೀಮಂತೋ ರಾಯ್ ಎಂಬಿಬ್ಬರು ಪುತ್ರರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X