ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್‌; ಚಿನ್ನ ಗೆದ್ದ ಭಾರತದ ಶಾಹಿಲ್ ಉಸ್ಮಾನ್ ಮತ್ತು ಇರ್ಷಾದ್ ಮುಸ್ತಫಾ

Date:

Advertisements

ಬ್ಯಾಂಕಾಕ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ‌

ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಥೈಲ್ಯಾಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ದ ಸೆಸ್ಟೋ ಬಾಲ್‌ನಲ್ಲಿನ ತಮ್ಮ ಚಾಕಾಚಕ್ಯತೆಯನ್ನು ಪ್ರದರ್ಶಿಸಿ ದೇಶಕ್ಕೆ ಚಿನ್ನದ ಪದಕ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಮೂಲತಃ ಕೊಡಗು ಜಿಲ್ಲೆಯವರಾದ, ಸುಂಟಿಕೊಪ್ಪ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಕೆ.ಎ ಉಸ್ಮಾನ್ ಅವರ ಪುತ್ರ ಶಾಹಿಲ್ ಉಸ್ಮಾನ್ ಅವರು ಭಾರತ ತಂಡದ ಕ್ಯಾಪ್ಟನ್ ಆಗಿಯೂ ಕೂಡ ಕಾರ್ಯ ನಿರ್ವಹಿಸಿದ್ದಾರೆ.

Advertisements

ಸುಂಟಿಕೊಪ್ಪದ ಜಾವಮನೆ ಮುಸ್ತಫಾರವರ ಪುತ್ರ ಇರ್ಷಾದ್ ಮುಸ್ತಫಾ ಅವರು ಅಂತಾರಾಷ್ಟ್ರೀಯ ಚಾಂಪಿಯನ್ ಶಿಪ್‌ನಲ್ಲಿ ಬೆಸ್ಟ್ ಪ್ಲೇಯರ್ ಆಫ್ ದಿ ಟೂರ್ನಿಮೆಂಟ್‌ಗೆ ಪಾತ್ರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಕೇರಳ ಗಡಿಯಲ್ಲಿ ಪೊಲೀಸರ ವಿರುದ್ಧ ಗುಂಡಿನ ಚಕಮಕಿ; ಮಾವೋವಾದಿಗಳೆಂದು ಶಂಕೆ

ಕೊಪ್ಪ ಗೇಟ್‌ನಲ್ಲಿ ಸ್ವಾಗತ ಈ ಟೂರ್ನಿಮೆಂಟ್‌ನಲ್ಲಿ ದೇಶಕ್ಕೆ ಬಂಗಾರದ ಪದಕಗಳನ್ನು ತಂದುಕೊಟ್ಟು ಕೊಡಗು ಜಿಲ್ಲೆಗೆ ಹೆಮ್ಮೆಯ ಗರಿ ಮೂಡಿಸಿರುವ ಶಾಹೀಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ನವೆಂಬರ್‌ 15ರಂದು ನವದೆಹಲಿಗೆ ಹಿಂತಿರುಗಿ ಬೆಂಗಳೂರು ಮೂಲಕ ಕೊಡಗಿನ ಹೆಬ್ಬಾಗಿಲು ಕೊಪ್ಪ ಗೇಟ್‌ಗೆ ಅಪರಾಹ್ನ 4.30ಕ್ಕೆ ತಲುಪಲಿದ್ದಾರೆ. ಅಲ್ಲಿಂದ ಸುಂಟಿಕೊಪ್ಪಕ್ಕೆ ಬೀಳ್ಕೊಡಲಾಗುವುದು. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಕ್ರೀಡಾಭಿಮಾನಿಗಳು ಪಾಲ್ಗೊಳ್ಳುವಂತೆ ಮಡಿಕೇರಿ ತಾಲೂಕು ಅಧ್ಯಕ್ಷ ಅಶೋಕ್ ಆಳ್ವ,
ಕೋಶಾಧಿಕಾರಿ ಕಬೀರ್ ಅಹಮದ್ ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X