ಮ್ಯಾನುಯಲ್ ಸ್ಕ್ಯಾವೆಂಜಿಂಗ್ | ಕೊಳಚೆ ಸ್ವಚ್ಛಗೊಳಿಸಲು ಗುಂಡಿಗೆ ಇಳಿದಿದ್ದ ನಾಲ್ವರು ಕಾರ್ಮಿಕರು ಸಾವು

Date:

Advertisements

ಕೈಯಲ್ಲಿ ಮಲ ಬಾಚುವಿಕೆ, ಮಲದ ಗುಂಡಿಗಳಿಗೆ ಪೌರ ಕಾರ್ಮಿಕರನ್ನು ಇಳಿಸುವುದನ್ನು ಕಾನೂನಾತ್ಮಕವಾಗಿ ನಿಷೇಧಿಸಿದ್ದರೂ, ಈ ಅನಿಷ್ಟ ಪದ್ದತಿ ಇನ್ನೂ ಜೀವಂತವಾಗಿದೆ. ಸರ್ಕಾರಿ ಅಧಿಕಾರಿಗಳು ಸೇರಿದಂತೆ ಪ್ರಬಲರು ಪೌರ ಕಾರ್ಮಿಕರನ್ನು ಕೊಳಚೆ ಗುಂಡಿಗಳಿಗೆ ಇಳಿಸಿ, ಕೆಲಸ ಮಾಡಿಸುವುದು ಈಗಲೂ ಅಲ್ಲಲ್ಲಿ ವರದಿಯಾಗುತ್ತಿದೆ.

ಅಂಥದ್ದೇ ದುರ್ಘಟನೆಯೊಂದು ಬಿಹಾರ ರಾಜ್ಯದಲ್ಲಿ ನಡೆದಿದೆ. ಅಲ್ಲಿನ ಸೂರತ್ ಜಿಲ್ಲೆಯ ಪಲ್ಸಾನಾ ಪ್ರದೇಶದಲ್ಲಿ ಸೆಪ್ಟಿಕ್‌ ಟ್ಯಾಂಕ್‌ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಇಳಿಸಲಾಗಿದ್ದು, ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಪಲ್ಸಾನಾ-ಕಟೋದರ ರಸ್ತೆಯಲ್ಲಿರುವ ಕಾರ್ಖಾನೆಯಲ್ಲಿ ಮಂಗಳವಾರ ಘಟನೆ ನಡೆದಿದೆ. ಕಾರ್ಖಾನೆಯ ಡೈಯಿಂಗ್ ಘಟಕದಲ್ಲಿ ಸೆಪ್ಟಿಕ್ ಟ್ಯಾಂಕ್‌ಗೆ ಕಾರ್ಮಿಕರನ್ನು ಇಳಿಸಲಾಗಿದ್ದು, ಟ್ಯಾಂಕ್‌ನಲ್ಲಿಯೇ ನಾಲ್ವರೂ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಇಬ್ಬರು ಕಾರ್ಮಿಕರು ಪ್ರಜ್ಞಾಹೀನರಾಗಿದ್ದರು. ಅವರನ್ನು ರಕ್ಷಿಸಲು ಇನ್ನಿಬ್ಬರು ಟ್ಯಾಂಕ್‌ಗೆ ಇಳಿದಿದ್ದು, ಅವರೂ ಮೂರ್ಛೆ ಹೋಗಿದ್ದರು ಎಂದು ಪನ್ಸಾಲಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರನ್ನೂ ಟ್ಯಾಂಕ್‌ನಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರು ಸಾವನ್ನಪ್ಪಿದ್ದಾರೆಂದು ವೈದ್ಯರು ಖಾತ್ರಿಪಡಿಸಿದರು ಎಂದು ಅವರು ತಿಳಿಸಿದ್ದಾರೆ.

ಮೃತರು ಬಿಹಾರ ಮೂಲದವರಾಗಿದ್ದು, ಅವರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಲ ಬಾಚುವ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013ಯ ಮೂಲಕ ಕೈಗಳಲ್ಲಿ ಮಲ ಬಾಚುವಿಕೆಯನ್ನು ನಿಷೇಧಿಸಲಾಗಿದೆ. ರಕ್ಷಣಾತ್ಮಕ ಸಾಧನಗಳಿಲ್ಲದೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಕೈಗಳಿಂದ ಸ್ವಚ್ಛಗೊಳಿಸುವುದು ಮತ್ತು ಸ್ವಚ್ಛಗೊಳಿಸುವಂತೆ ಮಾಡುವುದು ಅಪರಾಧವಾಗಿದೆ. 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X