ಬೆಳಗಾವಿ | ಮನೆಗಾಗಿ ಹಣ ಪಡೆದು ವಂಚನೆ; ಸ್ಲಮ್ ಬೋರ್ಡ್‌ ಮೇಲೆ ಆರೋಪ

Date:

Advertisements

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆ ಕಟ್ಟಿಸಿಕೊಡುವುದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸ್ಲಮ್‌ ನಿವಾಸಿಗಳಿಂದ 25ಸಾವಿರ ರೂ. ಹಣ ಪಡೆದು ವಂಚನೆ ಮಾಡಿದ್ದಾರೆಂದು ಮಂಡಳಿ ವಿರುದ್ಧ ಆರೋಪ ಕೇಳಿಬಂದಿದೆ. ಚಿಕ್ಕೂಡಿಯ ಸ್ಲಮ್ ನಿವಾಸಿಗಳು ಬೀದಿಗಿಳಿದು ಪ್ರತಿಭಟಿಸಿದ್ದಾರೆ.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಚಿಕ್ಕೋಡಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸ್ಲಮ್ ನಿವಾಸಿಗಳಿಗೆ ಮನೆಗಳು ಮಂಜೂರಾಗಿದ್ದವು. ಇದಕ್ಕಾಗಿ 25ಸಾವಿರ ರೂ. ಹಣ ಪಾವತಿಸಿಕೊಂಡಿದ್ದ ಸ್ಲಮ್ ಬೋರ್ಡ್ ಅಧಿಕಾರಿಗಳು ಮನೆ ಕಟ್ಟಿಸಿಕೊಡದೇ ಮೋಸ ಮಾಡಿದ್ದಾರೆ. ಸ್ಲಮ್ ಬೋರ್ಡ್​ನಲ್ಲಿ ವ್ಯಾಪಕ ಅವ್ಯವಹಾರ ನಡೆದಿದ್ದು ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನು ಕೆಲವು ಮನೆಗಳನ್ನು ಅರ್ಧ ಮಾಡಿ ಬಿಟ್ಟ ಆರೋಪ ಸಹ ಕೇಳಿ ಬಂದಿದೆ. ಚಿಕ್ಕೋಡಿಯ ಮಾತಂಗಿಕೇರಿಯಲ್ಲಿ 50ಕ್ಕೂ ಹೆಚ್ಚು ಫಲಾನುಭವಿಗಳು ಮನೆ ಕಟ್ಟಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

Advertisements

2019ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ 07ಸ್ಲಮ್‌ಗಳಲ್ಲಿ 449ಫಲಾನುಭವಿಗಳ ಗುರುತಿಸಿ ಮನೆ ಕಟ್ಟಿಸಿಕೊಡಲು ಯೋಜನೆ ರೂಪಿಸಲಾಗಿತ್ತು.  ಯೋಜನೆಯ ನಿಯಮದಂತೆ ಪ್ರಾರಂಭದ ಹಂತದಲ್ಲಿನ ಫಲಾನುಭವಿಗಳಿಗೆ 25ಸಾವಿರ ರೂ. ಡಿಡಿ ಕಟ್ಟಲು ಸೂಚಿಸಲಾಗಿತ್ತಂತೆ. ತಮಗೂ ಒಂದು ಸೂರು ಆಗುತ್ತೆ ಎಂಬ ಆಸೆಯಲ್ಲಿ ಚಿಕ್ಕೋಡಿ ನಗರದ ಮಾತಂಗಿಕೇರಿಯ ನಿವಾಸಿಗಳು ಸಾಲ ಸೋಲ ಮಾಡಿ 25ಸಾವಿರ ರೂ. ಹಣ ಪಾವತಿಸಿದ್ದರು. ಆದರೆ, 2019ರಲ್ಲಿ ಹಣ ಪಾವತಿಸಿದರೂ ಈವರೆಗೂ ಮನೆ ಕಟ್ಟಿಕೊಟ್ಟಿಲ್ಲ.

ತಾವೆಲ್ಲ ಬಡ ಕೂಲಿ ಕಾರ್ಮಿಕರು, ಸಾಲ ಸೋಲ ಮಾಡಿ 25ಸಾವಿರ ರೂ. ಪಾವತಿ ಮಾಡಿದ್ದೇವೆ. ಆದರೆ, ನಾಲ್ಕು ವರ್ಷ ಕಳೆದರೂ ಮನೆ ನಿರ್ಮಾಣ ಮಾಡಿಕೊಡುತ್ತಿಲ್ಲ. ಮಾತಂಗಿ ಕೇರಿ ಸೇರಿದಂತೆ ಒಟ್ಟು ಏಳು ಸ್ಲಮ್‌ಗಳಿವೆ. ಈ ಎಲ್ಲಾ ಪ್ರದೇಶಗಳಲ್ಲಿಯೂ ಫಲಾನುಭವಿಗಳು ಇದ್ದು ಬಹುತೇಕ ಮನೆಗಳು ಪೂರ್ಣಗೊಳ್ಳದೇ ಇದ್ದರೂ ಪೂರ್ಣಗೊಂಡಿವೆ ಎಂದು ದಾಖಲೆ ಸಲ್ಲಿಸಲಾಗಿದೆ. ಎಂದು ಬೆಳಗಾವಿಯ ಸ್ಲಂ ಬೋರ್ಡ್ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ.

ಆರ್​ಟಿಐ ಕಾರ್ಯಕರ್ತ ಮತ್ತು ಮಾತಂಗಿಕೇರಿಯ ನಿವಾಸಿಯೂ ಆಗಿರುವ ಅನಿಲ್ ಧಾವಣೆ ಆರ್ ಟಿಐನಡಿ ಮಾಹಿತಿ ಕೇಳಿದಾಗ 188 ಮನೆಗಳು ಪೂರ್ಣಗೊಂಡಿವೆ ಎಂಬ ದಾಖಲಾತಿ ನೀಡಿದ್ದಾರೆ. ಆದರೆ, ಮಾತಂಗಿಕೇರಿ ಸ್ಲಮ್ ಒಂದರಲ್ಲೇ 10ಕ್ಕೂ ಹೆಚ್ಚು ಮನೆಗಳು ಇನ್ನೂ ಪೂರ್ಣಗೊಂಡಿಲ್ಲ. ಪೂರ್ಣಗೊಂಡಿದೆ ಎಂದು ದಾಖಲೆ ನೀಡಿದ್ದಾರೆ ಎಂದು ಅನಿಲ್ ಧಾವಣೆ ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X