ಬೆಂಗಳೂರು | ರಸ್ತೆಯಲ್ಲಿ ಪತ್ನಿಗೆ ಕಿರುಕುಳ ನೀಡಿದ ಬಗ್ಗೆ ಟ್ವೀಟ್ ಮಾಡಿದ ಪತಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ವೇಳೆ ಕಾರು ತಡೆದು ಹಣ, ಚಿನ್ನ ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿವೆ. ಬೇಕಂತಲೇ ಕಾರಿಗೆ ಡಿಕ್ಕಿ ಹೊಡೆದು ಜಗಳ ತೆಗೆದು ಹಣ ನೀಡುವಂತೆ ಧಮ್ಕಿ ಹಾಕುವ ಪ್ರಕರಣಗಳೂ ಈಗಾಗಲೇ ನಗರದಲ್ಲಿ ವರದಿಯಾಗಿವೆ.

ಈ ಘಟನೆಗಳಿಗೆ ಸಂಬಂಧಿಸಿದಂತೆ, ಇತ್ತೀಚೆಗೆ ನಗರದಲ್ಲಿ ಮತ್ತೊಂದು ಪ್ರಕರಣ ನಡೆದಿದ್ದು, ಈ ಬಗ್ಗೆ ಸಂತ್ರಸ್ತೆಯ ಪತಿ ಸೃಜನ್ ಆರ್ ಶೆಟ್ಟಿ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ವಿವರವಾಗಿ ಬರೆದು ಪೋಸ್ಟ್‌ ಮಾಡಿದ್ದಾರೆ.

“ನವೆಂಬರ್‌ 8 ರಂದು ಸರ್ಜಾಪುರದಿಂದ ರಾತ್ರಿ ವೇಳೆ, ಕ್ಯಾಬ್ ಸಿಗುವುದು ಕಷ್ಟವೆಂದು ಭಾವಿಸಿ ನನ್ನ ಪತ್ನಿ ತನ್ನ ಕೆಲವು ಸಹೋದ್ಯೋಗಿಗಳನ್ನು (ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ) ಡ್ರಾಪ್ ಮಾಡಲು ಮುಂದಾಗಿದ್ದಾಳೆ. ಈ ವೇಳೆ, ನನ್ನ ಪತ್ನಿಯ ಕಾರನ್ನು ಕೆಲವು ಕಿಲೋ ಮೀಟರುಗಳಷ್ಟು ಪುರುಷರ ಗುಂಪೊಂದು ಹಿಂಬಾಲಿಸಿದೆ” ಎಂದು ಬರೆದುಕೊಂಡಿದ್ದಾರೆ.

Advertisements

“ಈ ಬಗ್ಗೆ ತಿಳಿದ ನನ್ನ ಪತ್ನಿ ಮುಂದಾಗುವ ಅಪಾಯದ ಮುನ್ಸೂಚನೆ ಮೊದಲೇ ತಿಳಿದು ನಗರದ ಮುಖ್ಯ ರಸ್ತೆಯಲ್ಲಿಯೇ ವಾಹನವನ್ನು ನಿಲ್ಲಿಸಿದ್ದಾಳೆ. ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ” ಎಂದು ಹೇಳಿದ್ದಾರೆ.

“ಗಾಡಿಯನ್ನು ಚೇಸ್ ಮಾಡುವಾಗ ನನ್ನ ಪತ್ನಿ ಯಾವುದೇ ವಾಹನಗಳಿಗೆ ಹಾನಿ ಮಾಡಿಲ್ಲ. ಆದರೂ, ಪುರುಷರ ಗುಂಪು ಕಾರಿನಿಂದ ಕೆಳಗಡೆ ಇಳಿಯುವಂತೆ ಧಮ್ಕಿ ಹಾಕಿದ್ದಾರೆ. ಕಾರಿನಿಂದ ಹೊರಬರಲು ನನ್ನ ಪತ್ನಿ ಮತ್ತು ಆಕೆಯ ಸಹೋದ್ಯೋಗಿಗಳು ನಿರಾಕರಿಸಿದಾಗ ಕೆಲವು ಟೆಂಪೋ ಡ್ರೈವರ್‌ಗಳು ಆಕೆಯ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಕನ್ನಡ ಮಾತನಾಡಲು ಬಾರದ ಜನರ ಮೇಲೆ ಒತ್ತಡ ಹೇರುವ ಪ್ರಯತ್ನ ಇದಾಗಿದೆ. ಈ ವೇಳೆ, ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಒಬ್ಬ ವ್ಯಕ್ತಿಗೆ ಯಾರೊಬ್ಬರೂ ಸಹಾಯ ಮಾಡಲು ಮುಂದೆ ಬರಲಿಲ್ಲ” ಎಂದು ಆರೋಪಿಸಿದ್ದಾರೆ.

“ನನ್ನ ಪತ್ನಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ಜತೆಗೆ, ಅವಳ 10 ಸ್ನೇಹಿತರನ್ನು ತಕ್ಷಣವೇ ಅವಳು ಇರುವ ಸ್ಥಳಕ್ಕೆ ಕರೆಸಿಕೊಳ್ಳುವ ಬುದ್ಧಿವಂತಿಕೆ ತೋರಿದ್ದಾಳೆ. ಒಂದು ವೇಳೆ ಪೊಲೀಸರಿಗೆ ಕರೆ ಮಾಡದೆ ಇದ್ದಿದ್ದರೆ ಈ ಘಟನೆ ಬೇರೆಯದೇ ತಿರುವು ಪಡೆದುಕೊಳ್ಳಬಹುದಿತ್ತು” ಎಂದಿದ್ದಾರೆ.

“ಸರ್ಜಾಪುರ ಇಂತಹ ಘಟನೆಗಳಿಗೆ ಹಾಟ್‌ಸ್ಪಾಟ್‌ ಆಗಿದೆ. ಬೆಂಗಳೂರು ಪ್ರಶಾಂತವಾದ ನಗರವಾಗಿದೆ. ಆದರೂ ಇಂತಹ ಘಟನೆ ನಡೆದಿದೆ. ನಮಗೆ ಭದ್ರತೆ ಬೇಕು, ಅದರ ಜರೂರತ್ತು ಈಗ ಹೆಚ್ಚಾಗಿದೆ. ಈ ಅಪಾಯಗಳನ್ನು ತಡೆಯಲು ಪರಿಹಾರವನ್ನು ಕಂಡುಹಿಡಿಯಬೇಕಾಗಿದೆ” ಎಂದು ತಿಳಿಸಿದ್ದಾರೆ.

ನಾನು ಬೆಂಗಳೂರಿನಲ್ಲಿ ಎಂದಿಗೂ ಅಸುರಕ್ಷಿತ ಎಂದು ಭಾವಿಸಿಲ್ಲ. ಕನ್ನಡ ಮಾತನಾಡುವ ಪುರುಷ ಎಂಬ ನನ್ನ ವಿಶೇಷತೆ ನನಗೆ ತಿಳಿದಿದೆ. ಆದರೆ, ಕಳೆದ ಗುರುವಾರ ರಾತ್ರಿ ನಾನು ನಗರದ ಕೆಲವು ಭಾಗಗಳು ರಾತ್ರಿ 10 ಗಂಟೆಯ ನಂತರ ಎಷ್ಟು ಅಸುರಕ್ಷಿತವಾಗಿದೆ ಎಂದು ಭಾವಿಸಿದೆ.

“ನಾನು ಸರ್ಜಾಪುರದಲ್ಲಿ ನಕಲಿ ಅಪಘಾತಗಳ ಭಯಾನಕ ವೀಡಿಯೊಗಳನ್ನು ನೋಡಿದ್ದೇನೆ. ಅಲ್ಲಿ ಗೂಂಡಾಗಳು ಕಾರಿನಲ್ಲಿ ಜನರನ್ನು ಬ್ಲಾಕ್‌ಮೇಲ್ ಮಾಡಲು ಪ್ರಯತ್ನಿಸಿದ್ದಾರೆ. 24×7 ಜನರು ಇರುವ ಬೆಂಗಳೂರಿನ ಭಾಗಗಳು ಇಂದಿರಾನಗರ, ಕೋರಮಂಗಲ, ಎಂ.ಜಿ ರಸ್ತೆ ಮುಂತಾದವು ಸುರಕ್ಷಿತವಾಗಿವೆ ಎಂದು ಇನ್ನೂ ಭಾವಿಸುತ್ತೇವೆ. ಜನರು ಹೆಚ್ಚಾಗಿ ಓಡಾಡದ ಸ್ಥಳಗಳಲ್ಲಿ ಉತ್ತಮ ಜಾಗರೂಕತೆಯ ಅಗತ್ಯವಿದೆ” ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ವಿಶೇಷ ಅಭಿಯಾನ

ಸದ್ಯ ಈ ಟ್ವೀಟ್‌ ವೈರಲ್ ಆಗಿದ್ದು, ಹಲವು ಜನ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ಬಳಕೆದಾರರು ಈ ಟ್ವೀಟ್‌ ಅನ್ನು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

“ಈ ಘಟನೆ ನಡೆದ ನಿರ್ದಿಷ್ಟ ಸ್ಥಳದ ವಿವರ ಮತ್ತು ನಿಮ್ಮ ಸಂಪರ್ಕ ವಿವರಗಳನ್ನು ಡಿಎಮ್‌ ಮೂಲಕ ದಯವಿಟ್ಟು ಒದಗಿಸಿ” ಎಂದು ಬೆಂಗಳೂರು ನಗರ ಪೊಲೀಸರು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X