ಬೆಂಗಳೂರು | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬಿಬಿಎಂಪಿ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಪೂರ್ವ, ಪಶ್ಚಿಮ, ಯಲಹಂಕ ಹಾಗೂ ದಕ್ಷಿಣ ವಲಯ ವ್ಯಾಪ್ತಿಯಲ್ಲಿರುವ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆ ಗುರುವಾರ ನಡೆಸಲಾಗಿದೆ ಎಂದು ಪಾಲಿಕೆ ತಿಳಿಸಿದೆ

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, “ಪೂರ್ವ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಓ.ಎಫ್.ಸಿ. ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು 6 ವಿಧಾನಸಭಾ ಕ್ಷೇತ್ರಗಳಾದ ಶಾಂತಿನಗರ, ಶಿವಾಜಿನಗರ, ಸಿ.ವಿ.ರಾಮನ್‌ನಗರ, ಪುಲಿಕೇಶಿನಗರ, ಸರ್ವಜ್ಞನಗರ ಮತ್ತು ಹೆಬ್ಬಾಳ ವ್ಯಾಪ್ತಿಯಲ್ಲಿ ನಡೆಸಲಾಗಿದೆ. ಪಾದಚಾರಿ ಮಾರ್ಗದಲ್ಲಿ ಒತ್ತುವರಿಯಾಗಿರುವ ಅಂಗಡಿ ಮಳಿಗೆಗಳ ಮೇಲ್ಚಾವಣಿ, ತಳ್ಳುವ ಗಾಡಿ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಓ.ಎಫ್.ಸಿ. ಕೇಬಲ್‌ಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ” ಎಂದು ಹೇಳಿದೆ.

“ಅದರಂತೆ, ಪೂರ್ವ ವಲಯ ವ್ಯಾಪ್ತಿಯಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಚಾರಿ ಮಾರ್ಗ ಹಾಗೂ ಓ.ಎಫ್.ಸಿ ಕೇಬಲ್ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಈ ಪೈಕಿ 13 ಕಿ.ಮೀ ವ್ಯಾಪ್ತಿಯ ರಸ್ತೆಯಲ್ಲಿ 104 ತಳ್ಳುವ ಗಾಡಿ ಜಪ್ತಿ ಮಾಡಲಾಗಿದೆ. 54 ಪಾದಚಾರಿ ಮಾರ್ಗಕ್ಕೆ ಚಾಚಿಕೊಂಡ ಅಂಗಡಿ ಮುಂಗಟ್ಟುಗಳ ಮೇಲ್ಚಾವಣಿ, 19 ಅನಧಿಕೃತ ನಾಮಫಲಕಗಳು, 7000 ಮೀಟರ್ ಅನಧಿಕೃತ ಓ.ಎಫ್.ಸಿ ಕೇಬಲ್‌ಗಳು ಹಾಗೂ 5 ಅನಧಿಕೃತ ಪೆಟ್ಟೆಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ” ಎಂದು ಹೇಳಿದೆ.

Advertisements

ಸಾರ್ವಜನಿಕರ ಸುರಕ್ಷತೆ ಮತ್ತು ವಾಹನ ಸವಾರರ ಸಂಚಾರಕ್ಕೆ ಯಾವುದೇ ತೊಂದರೆಯಾಗದಿರಲು ಪಾದಚಾರಿ ಮಾರ್ಗದಲ್ಲಿ ಒತ್ತುವರಿಯಾಗಿರುವ ಅಂಗಡಿ ಮಳಿಗೆ, ತಳ್ಳುವ ಗಾಡಿ ಹಾಗೂ ಅನಧಿಕೃತ ಓ.ಎಫ್.ಸಿ ಕೇಬಲ್ ತೆರವುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಅನಧಿಕೃತ ಕೇಬಲ್‌ಗಳನ್ನು ಅಳವಡಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ಸಂಬಂಧಪಟ್ಟ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಜತೆಗೆ ಅನಧಿಕೃತ ಕೇಬಲ್ ತೆರವು ಕಾರ್ಯಾಚರಣೆಗೆ ಸಂಚಾರ ಪೊಲೀಸ್ ವಿಭಾಗ ಹಾಗೂ ಸಾರ್ವಜನಿಕರು ಸಹಕರಿಸುವಂತೆ ವಲಯ ಜಂಟಿ ಆಯುಕ್ತರಾದ ಕೆ.ಆರ್.ಪಲ್ಲವಿ ತಿಳಿಸಿದ್ದಾರೆ.

ಪಶ್ಚಿಮ ವಲಯ

ಪಶ್ಚಿಮ ವಲಯದ ಮಹಾಲಕ್ಷ್ಮೀಪುರಂ ವಿಭಾಗ ನಾಗಪುರ ವಾರ್ಡ್‌ನಲ್ಲಿ ಅನಧಿಕೃತವಾಗಿರುವ ಓ.ಎಫ್.ಸಿ.ಕೇಬಲ್‌ಗಳು ಹಾಗೂ ಪಾದಚಾರಿ ಮಾರ್ಗದಲ್ಲಿ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಡೆಸುತ್ತಿರುವ ಅಂಗಡಿಗಳನ್ನು ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು. ಜೊತೆಗೆ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

ನಾಗಪುರ ವಾರ್ಡ್ 1ನೇ ಬ್ಲಾಕ್ ರಾಜಾಜಿನಗರ, 10ನೇ ಅಡ್ಡರಸ್ತೆ ಹಾಗೂ 19ನೇ ಮುಖ್ಯರಸ್ತೆ ಸೇರಿ 1.20 ಕಿ.ಮೀ ಅನಧಿಕೃತ ಓ.ಎಫ್.ಸಿ ಕೇಬಲ್‌ಗಳು ಹಾಗೂ ಅನಧಿಕೃತವಾಗಿ ಫುಟ್ ಪಾತ್ ಮೇಲೆ ನಡೆಸುತ್ತಿರುವ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಹಾಗೂ ರಸ್ತೆ ಬದಿಯಲ್ಲಿ ಶೇಖರಣೆಯಾಗಿರುವ ಕಲ್ಲು, ಮಣ್ಣು, ಜಾಹೀರಾತು ಫಲಕಗಳು ಹಾಗೂ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಲಾಗಿದೆ.

ಪಶ್ಚಿಮ ವಲಯ ಚಾಮರಾಜಪೇಟೆ ವಾರ್ಡ್ ನ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಿಂದ 9ನೇ ಅಡ್ಡರಸ್ತೆಯವರೆಗೆ ಒಟ್ಟು 0.80 ಕಿ.ಮೀ. ಅನಧಿಕೃತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಸುತ್ತಿರುವ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.

ಯಲಹಂಕ ವಲಯ:

ಯಲಹಂಕ ವಲಯ ವ್ಯಾಪ್ತಿಯಲ್ಲಿಂದು ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ರೈತರ ಸಂತೆ, ಸಹಕಾರನಗರ ಮುಖ್ಯ ರಸ್ತೆ, ಕೊಡಿಗೇಹಳ್ಳಿ ಮುಖ್ಯ ರಸ್ತೆ, ಅಟ್ಟೂರು ಲೇಔಟ್ ಮುಖ್ಯ ರಸ್ತೆ, ಬಿ.ಇ.ಎಲ್ ಲೇಔಟ್ ವಿದ್ಯಾರಣ್ಯಪುರ ಹಾಗೂ ಎನ್.ಟಿ.ಐ ಲೇಔಟ್ ನಲ್ಲಿ ನಡೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆಯಲ್ಲಿ ಪತ್ನಿಗೆ ಕಿರುಕುಳ ನೀಡಿದ ಬಗ್ಗೆ ಟ್ವೀಟ್ ಮಾಡಿದ ಪತಿ

ದಕ್ಷಿಣ ವಲಯ

ದಕ್ಷಿಣ ವಲಯ ಪದ್ಮನಾಭನಗರ ವ್ಯಾಪ್ತಿಯ ಬನಶಂಕರಿ ಉಪವಿಭಾಗದ ಗಣೇಶ ಮಂದಿರ, ಬಿ.ಡಿ.ಎ ಕಾಂಪ್ಲೆಕ್ಸ್ ಸುತ್ತಮುತ್ತಲಿನ 24ನೇ ಅಡ್ಡರಸ್ತೆ, 21ನೇ ಮುಖ್ಯರಸ್ತೆ, 17ನೇ ಮುಖ್ಯರಸ್ತೆ, 22ನೇ ಅಡ್ಡರಸ್ತೆ ಮತ್ತು 23ನೇ ಅಡ್ಡರಸ್ತೆಯಲ್ಲಿದ್ದ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯುಂಟಾಗುವಂತೆ ನಡೆಸುತ್ತಿದ್ದ ವ್ಯಾಪಾರ ವಹಿವಾಟುಗಳನ್ನು ತೆರವುಗೊಳಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯುಂಟಾಗಿದ್ದ 8 ತಳ್ಳುವ ಗಾಡಿ, 2 ಕೇಬಲ್, 10 ಆಟೋ ಕ್ರೇಟ್, 1 ಜಾಹಿರಾತು ಫಲಕಗಳು, 2 ಶೆಡ್‌ಗಳು ಹಾಗೂ 2 ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲಾಯಿತು ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X