ವಿಜಯಪುರ | ವೈದ್ಯರಿಲ್ಲದ ಆರೋಗ್ಯ ಕೇಂದ್ರ; ರೋಗಿಗಳ ಪರದಾಟ

Date:

Advertisements

ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರವನ್ನು ಗ್ರಾಮ ಹಾಗೂ ಸುತ್ತಲ ಗ್ರಾಮದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿ ಎಂಬ ಉದ್ದೇಶದಿಂದ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಆದರೆ, ವೈದ್ಯ ಸಿಬ್ಬಂದಿ ಇಲ್ಲದ್ದಕ್ಕೆ ರೋಗಿಗಳು ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.

ಈ ಆರೋಗ್ಯ ಕೇಂದ್ರದಲ್ಲಿ ಎರಡು ವೈದ್ಯರ ಹುದ್ದೆ ಗಳಿವೆ. ಒಂದು ಎಂಬಿಬಿಎಸ್ ಮತ್ತೊಂದು ಬಿಎಎಂಎಸ್. ಆದರೆ, ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯ ಸಿಬ್ಬಂದಿ ಹೆಚ್ಚು ದಿನ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಕರ್ತವ್ಯಕ್ಕೆ ಬರುತ್ತಾರೆ, ಕೆಲವು ತಿಂಗಳು ಮಾಡುತ್ತಾರೆ ಮತ್ತೆ ಬೇರೆಡೆ ವರ್ಗವಾಗಿ ಹೋಗುತ್ತಿದ್ದಾರೆ. ಹೀಗಾಗಿ ಈ ಆಸ್ಪತ್ರೆ ಇದೀಗ ವೈದ್ಯ ಸಿಬ್ಬಂದಿ ಇಲ್ಲದೇ ಜನರಿಂದ ಇದ್ದು ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.

ಆಸ್ಪತ್ರೆಯಲ್ಲಿ ಆ್ಯಂಬುಲೆನ್ಸ್‌ ಇದ್ದು ಉಪಯೋಗಿಸುವ ಸ್ಥಿತಿಯಲ್ಲಿ ಇಲ್ಲ. ಗ್ರಾಮದಲ್ಲಿ ಯಾರಾದರೂ ತೀವ್ರ ಅನಾರೋಗ್ಯ ಅಥವಾ ಅಪಘಾತವಾದರ ದುಡ್ಡು ಕೊಟ್ಟು ಖಾಸಗಿ ವಾಹನ ಮಾಡಿಕೊಂಡು ಆಸ್ಪತ್ರೆಗೆ ಹೋಗಬೇಕಾದ ಸ್ಥಿತಿ ಗ್ರಾಮಸ್ಥರದ್ದು.

Advertisements

ಇಂಡಿ ತಾಲೂಕಿನ ಆರೋಗ್ಯ ಅಧಿಕಾರಿಗಳು ತಾಂಬಾ ಗ್ರಾಮದ ಆಸ್ಪತ್ರೆ ಸಿಂದಗಿ ಮತಕ್ಷೇತ್ರದಲ್ಲಿ ಬರುವದೆಂದು ಮತ್ತು ಸಿಂದಗಿ ತಾಲೂಕಿನ ಆರೋಗ್ಯ ಅಧಿಕಾರಿಗಳು ಇಂಡಿ ತಾಲೂಕಿಗೆ ಸಂಬಂಧಿಸಿದೆ ಎಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಆದ್ದರಿಂದ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಾ ಬಡವಾಗಿದೆ.

ಕಳೆದ ವರ್ಷದ ಸಿಂದಗಿ ಉಪ ಚುನಾವಣೆಯಲ್ಲಿ ತಾಂಬಾ ಆಸ್ಪತ್ರೆ ಸುಧಾರಣೆಗಾಗಿ ಗ್ರಾಮಸ್ಥರು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ದೇವೇಗೌಡ, ಕುಮಾರಸ್ವಾಮಿ, ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿದಂತೆ ಎಲ್ಲ ರಾಜಕೀಯ ನಾಯಕರಿಗೆ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X